ಸಚಿವ ಜಯಚಂದ್ರ ವಿರುದ್ಧ ಕೆರೆ ಒತ್ತುವರಿ ಪ್ರಕರಣ ದಾಖಲು
ಕರ್ನಾಟಕ ಕಾನೂನು ಸಚಿವ ಟಿಬಿ ಜಯಚಂದ್ರ ವಿರುದ್ಧ ಭೂ ಕಬಳಿಕೆ ಕುರಿತಂತೆ ದೂರು. ರಾಜ್ಯ ಹೈಕೋರ್ಟ್ ನಲ್ಲಿ ದಾಖಲಾದ ದೂರು. ಸೋಮವಾರದಿಂದ ವಿಚಾರಣೆ ಆರಂಭ. ಉಳ್ಳಾಲ ಕೆರೆಯ ಸುಮಾರು 15 ಗುಂಟೆ ಜಾಗವನ್ನು ಒತ್ತವರಿ ಮಾಡಿರುವುದಾಗಿ ಕಾನೂನು ಸಚಿವ ರಾಮಮ
ಬೆಂಗಳೂರು, ಆಗಸ್ಟ್ 7: ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರ ವಿರುದ್ಧ ಬೆಂಗಳೂರಿನ ಉಳ್ಳಾಲ ಕೆರೆಗೆ ಸೇರಿದ ಭೂಮಿಯನ್ನು ಒತ್ತುವರಿ ಮಾಡಿರುವ ಆರೋಪ ಎದುರಾಗಿದೆ.
ರಾಮಮೂರ್ತಿ ಗೌಡ ಎಂಬುವರು ಹೈಕೋರ್ಟ್ ನಲ್ಲಿ ಈ ದೂರನ್ನು ದಾಖಲಿಸಿದ್ದಾರೆ. ಟಿ.ಬಿ. ಜಯಚಂದ್ರ ಅವರು ವ್ಯವಸ್ಥಾಪಕ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಿರುವ ಮಳವಳ್ಳಿ ಚಿಕ್ಕಣ್ಣ ಚಾರಿಟೀಸ್ ಟ್ರಸ್ಟ್ ನಿಂದ ಈ ಭೂ ಕಬಳಿಕೆಯಾಗಿದೆ ಎಂದು ದೂರಿನಲ್ಲಿ ರಾಮಮೂರ್ತಿ ಆರೋಪಿಸಿದ್ದಾರೆ.

ಸರ್ವೆ ಸಂಖ್ಯೆ 93ರಲ್ಲಿ ಬರುವ ಉಲ್ಲಾಳ ಕೆರೆಯು ಸುಮಾರು 24.12 ಎಕರೆಯಷ್ಟು ವಿಸ್ತೀರ್ಣವಾಗಿದೆ. ಈ ಕೆರೆಯಂಗಳದ ಸುಮಾರು 15 ಗುಂಟೆಯಷ್ಟು ಭೂಮಿ ಕಬಳಿಸಲಾಗಿದೆ ಎಂದು ಗೌಡ ಆರೋಪಿಸಿದ್ದಾರೆ.
ರಾಷ್ಟ್ರೀಯ ಹಸಿರು ನ್ಯಾಯಾಧೀಕರಣವು (ಎನ್ ಜಿಸಿ), ಕೆರೆ ಅಥವಾ ಯಾವುದೇ ಜಲ ಸಂಪನ್ಮೂಲ ಸ್ಥಳಗಳಿಂದ 75 ಮೀಟರ್ ವರೆಗಿನ ಭೂಮಿಯಲ್ಲಿ ಯಾವುದೇ ಚಟುವಟಿಕೆ ನಡೆಸದಿರುವಂತೆ ಸೂಚಿಸಿದೆ. ಹಾಗಾಗಿ, ಟ್ರಸ್ಟ್ ವತಿಯಿಂದ ಇಲ್ಲಿ ಭೂಮಿ ಒತ್ತುವರಿ ಆಗಿರುವುದು ನ್ಯಾಯಾಧೀಕರಣದ ಸೂಚನೆ ಸ್ಪಷ್ಟ ಉಲ್ಲಂಘನೆಯೆಂದು ಹೇಳಲಾಗಿದೆ.
ಆದರೆ, ಈ ಆರೋಪವನ್ನು ಟ್ರಸ್ಟ್ ತಳ್ಳಿಹಾಕಿದೆ. ಇದು, ಕೆರೆಯಂಗಳದ ಜಾಗವಾಗಿದ್ದರೂ ಕಾನೂನಾತ್ಮಕವಾಗಿಯೇ ಟ್ರಸ್ಟ್ ಹೆಸರಿಗೆ ಮಂಜೂರಾಗಿರುವ ಸ್ಥಳವೆಂದು ಅದು ವಾದಿಸಿದೆ.
ಎರಡೂ ಪಕ್ಷದ ವಾದ-ವಿವಾದ ಆಲಿಸಿರುವ ನ್ಯಾಯಾಲಯ, ಬಿಬಿಎಂಪಿಯು (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಈ ಬಗ್ಗೆ ವಿವರಣೆ ನೀಡಬೇಕೆಂದು ಸೂಚಿಸಿದೆ. ಅಲ್ಲದೆ, ಮುಂದಿನ ವಿಚಾರಣೆಯನ್ನು ಆಗಸ್ಟ್ 24ರವರೆಗೆ ಮುಂದೂಡಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications