ಕಾನೂನು ವಿದ್ಯಾರ್ಥಿ ಹಂತಕರಿಗೆ 11 ವರ್ಷದ ನಂತರ ಬಿಡುಗಡೆ ಭಾಗ್ಯ
ಬೆಂಗಳೂರು ನವೆಂಬರ್ 21: 2007ರಲ್ಲಿ ನಡೆದಿದ್ದ ನ್ಯಾಷನಲ್ ಲಾ ಕಾಲೇಜು ವಿದ್ಯಾರ್ಥಿಯ ಹಂತಕರಿಗೆ 11 ವರ್ಷದ ನಂತರ ಜೈಲಿನಿಂದ ಬಿಡುಗಡೆ ಭಾಗ್ಯ ದೊರಕಿದೆ.
ಆರೋಪಿಗಳ ಮೇಲ್ಮನವಿಯ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 10 ವರ್ಷದ ಸಜೆಯಾಗಿ ಪರಿವರ್ತಿಸಿ ಆದೇಶ ನೀಡಿದೆ.
ಈಗಾಗಲೇ 11 ವರ್ಷದ ಜೈಲು ಶಿಕ್ಷೆ ಅನುಭವಿಸಿರುವುದರಿಂದ ಆಪಾಧಿತರಾದ ಶ್ರೀನಿವಾಸ್ ಮತ್ತು ಕಲ್ಲೇಶ್ ಗೌಡರಿಗೆ ಬಿಡುಗಡೆ ದೊರೆತಿದೆ.

2007ರಲ್ಲಿ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಅಲಯೋಷ್ ಎಂಬುವನನ್ನು ಶ್ರೀನಿವಾಸ್ ಮತ್ತು ಕಲ್ಲೇಶ್ ಗೌಡ ಕೊಲೆ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಆಪಾದಿತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಮತ್ತು ಜಾನ್ ಮೈಕೆಲ್ ಕುನ್ಹ ಅವರಿದ್ದ ವಿಭಾಗೀಯ ನ್ಯಾಯಪೀಠ, "ಉದ್ದೇಶ ಪೂರ್ವಕವಾಗಿ ಹತ್ಯೆ ಮಾಡಿಲ್ಲ ಎಂಬ ಕಾರಣಕ್ಕಾಗಿ ಜೀವಾವಧಿ ಶಿಕ್ಷೆಯನ್ನು 10 ವರ್ಷ ಜೈಲು ಶಿಕ್ಷೆಯಾಗಿ ಹಾಗು ತಲಾ 25 ಸಾವಿರ ರೂಪಾಯಿ ದಂಡಕ್ಕೆ ಮಾರ್ಪಾಡಿಸಲಾಗಿದೆ" ಎಂದು ಆದೇಶಿಸಿತು.
ನಾಗರಬಾವಿ ಕಲಾವತಿ ಕಲ್ಯಾಣ ಮಂಟಪದ ಬಳಿ ಪಾರ್ಟಿ ಮುಗಿಸಿ ಬಂದಿದ್ದ ಕಾನೂನು ವಿದ್ಯಾರ್ಥಿಗಳೊಂದಿಗೆ ಇಬ್ಬರಿಗೂ ಅನಿರೀಕ್ಷಿತ ಜಗಳ ನಡೆದಿತ್ತು- ಕಲ್ಲೇಶ್ ಹಾಗೂ ಶ್ರೀನಿವಾಸ್ ಚಾಕುವಿನಿಂದ ಅಲಯೋಷ್ ಮತ್ತು ಆತನ ಸ್ನೇಹಿತನಿಗೆ ಇರಿದು ಪರಾರಿಯಾಗಿದ್ದರು. ತೀರ್ವವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಅಲಯೋಷ್ ಅಸುನೀಗಿದ್ದರು. ನಂತರ ವಿದ್ಯಾರ್ಥಿಗಳ ಪ್ರತಿಭಟನೆ, ರಾಜಕೀಯ ಒತ್ತಡಗಳು ಬೆರೆತು ಈ ಪ್ರಕರಣ ರಾಜ್ಯದಲ್ಲಿ ಬಹಳ ಸದ್ದು ಮಾಡಿತ್ತು.
-
Karnataka Weather: ರಾಜ್ಯದಲ್ಲಿ ಏರುತ್ತಿದೆ ಬಿಸಿಲಿನ ಝಳ; ಬೆಂಗಳೂರಿನ ತಾಪಮಾನ 34 ಡಿಗ್ರಿಗೆ ಏರಿಕೆ -
Bengaluru-Hyderabad ಬುಲೆಟ್ ಟ್ರೈನ್: ಕೇವಲ 2 ಗಂಟೆ ಪ್ರಯಾಣ, 626 ಕಿಮೀ ಉದ್ದದ ಹಾದಿಯಲ್ಲಿ 12 ನಿಲ್ದಾಣಗಳು -
Karnataka Budget 2026: ಮಾ.6 ಸಿದ್ದರಾಮಯ್ಯ 17ನೇ ಬಜೆಟ್ ಮಂಡನೆ, ಸಮಯ, ನೇರ ಪ್ರಸಾರ ಲಿಂಕ್, ವಿವರ -
ಜೈಲಲ್ಲಿರುವ ಪವಿತ್ರಾ ಗೌಡಗೆ ಮನೆ ಊಟ ವ್ಯವಸ್ಥೆಗೆ ಬ್ರೇಕ್ ಹಾಕಿದ ಹೈಕೋರ್ಟ್ -
Dog Satish: ಇನ್ಸ್ಟಾಗ್ರಾಂ ಯಾರ ಅಪ್ಪಂದೂ ಅಲ್ಲ, ವಿಡಿಯೋ ಡಿಲೀಟ್ ಮಾಡಲ್ಲ, ನನಗೆ ಮೀಟರ್ ಇದೆ: ಡಾಗ್ ಸತೀಶ್ -
Toxic: ಅವಸರಕ್ಕಿಂತ ತಾಳ್ಮೆ ಮುಖ್ಯ: ಟಾಕ್ಸಿಕ್ ಬಿಡುಗಡೆ ಮುಂದೂಡಿದ ಬೆನ್ನಲ್ಲೇ ಯಶ್ ಬೆಂಬಲಕ್ಕೆ ನಿಂತ ಅಭಿಮಾನಿಗಳು -
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ












Click it and Unblock the Notifications