ಕಾನೂನು ವಿದ್ಯಾರ್ಥಿ ಹಂತಕರಿಗೆ 11 ವರ್ಷದ ನಂತರ ಬಿಡುಗಡೆ ಭಾಗ್ಯ
ಬೆಂಗಳೂರು ನವೆಂಬರ್ 21: 2007ರಲ್ಲಿ ನಡೆದಿದ್ದ ನ್ಯಾಷನಲ್ ಲಾ ಕಾಲೇಜು ವಿದ್ಯಾರ್ಥಿಯ ಹಂತಕರಿಗೆ 11 ವರ್ಷದ ನಂತರ ಜೈಲಿನಿಂದ ಬಿಡುಗಡೆ ಭಾಗ್ಯ ದೊರಕಿದೆ.
ಆರೋಪಿಗಳ ಮೇಲ್ಮನವಿಯ ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು 10 ವರ್ಷದ ಸಜೆಯಾಗಿ ಪರಿವರ್ತಿಸಿ ಆದೇಶ ನೀಡಿದೆ.
ಈಗಾಗಲೇ 11 ವರ್ಷದ ಜೈಲು ಶಿಕ್ಷೆ ಅನುಭವಿಸಿರುವುದರಿಂದ ಆಪಾಧಿತರಾದ ಶ್ರೀನಿವಾಸ್ ಮತ್ತು ಕಲ್ಲೇಶ್ ಗೌಡರಿಗೆ ಬಿಡುಗಡೆ ದೊರೆತಿದೆ.

2007ರಲ್ಲಿ ಜ್ಞಾನ ಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಂತಿಮ ವರ್ಷದ ಕಾನೂನು ವಿದ್ಯಾರ್ಥಿ ಅಲಯೋಷ್ ಎಂಬುವನನ್ನು ಶ್ರೀನಿವಾಸ್ ಮತ್ತು ಕಲ್ಲೇಶ್ ಗೌಡ ಕೊಲೆ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಸೆಷನ್ಸ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಆಪಾದಿತರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ಮಳಿಮಠ ಮತ್ತು ಜಾನ್ ಮೈಕೆಲ್ ಕುನ್ಹ ಅವರಿದ್ದ ವಿಭಾಗೀಯ ನ್ಯಾಯಪೀಠ, "ಉದ್ದೇಶ ಪೂರ್ವಕವಾಗಿ ಹತ್ಯೆ ಮಾಡಿಲ್ಲ ಎಂಬ ಕಾರಣಕ್ಕಾಗಿ ಜೀವಾವಧಿ ಶಿಕ್ಷೆಯನ್ನು 10 ವರ್ಷ ಜೈಲು ಶಿಕ್ಷೆಯಾಗಿ ಹಾಗು ತಲಾ 25 ಸಾವಿರ ರೂಪಾಯಿ ದಂಡಕ್ಕೆ ಮಾರ್ಪಾಡಿಸಲಾಗಿದೆ" ಎಂದು ಆದೇಶಿಸಿತು.
ನಾಗರಬಾವಿ ಕಲಾವತಿ ಕಲ್ಯಾಣ ಮಂಟಪದ ಬಳಿ ಪಾರ್ಟಿ ಮುಗಿಸಿ ಬಂದಿದ್ದ ಕಾನೂನು ವಿದ್ಯಾರ್ಥಿಗಳೊಂದಿಗೆ ಇಬ್ಬರಿಗೂ ಅನಿರೀಕ್ಷಿತ ಜಗಳ ನಡೆದಿತ್ತು- ಕಲ್ಲೇಶ್ ಹಾಗೂ ಶ್ರೀನಿವಾಸ್ ಚಾಕುವಿನಿಂದ ಅಲಯೋಷ್ ಮತ್ತು ಆತನ ಸ್ನೇಹಿತನಿಗೆ ಇರಿದು ಪರಾರಿಯಾಗಿದ್ದರು. ತೀರ್ವವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಅಲಯೋಷ್ ಅಸುನೀಗಿದ್ದರು. ನಂತರ ವಿದ್ಯಾರ್ಥಿಗಳ ಪ್ರತಿಭಟನೆ, ರಾಜಕೀಯ ಒತ್ತಡಗಳು ಬೆರೆತು ಈ ಪ್ರಕರಣ ರಾಜ್ಯದಲ್ಲಿ ಬಹಳ ಸದ್ದು ಮಾಡಿತ್ತು.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್












Click it and Unblock the Notifications