ಹೊಸಕೋಟೆ: ಎಂಟಿಬಿ ನಾಗರಾಜ್ ಇಟ್ಟ ಹೆಜ್ಜೆಗೆ ಶರತ್ ಬಚ್ಚೇಗೌಡ ಬೇಸ್ತು
"ರಾಜಕೀಯದಲ್ಲಿ ಯಾರೂ ಸತ್ಯ ಹರಿಶ್ಚಂದ್ರ, ಧರ್ಮರಾಯನೂ ಇಲ್ಲ"ಎನ್ನುವ ಮಾತನ್ನು ಬಿಜೆಪಿಯ, ವಿಧಾನ ಪರಿಷತ್ ಸದಸ್ಯ ಎಂ.ಟಿ.ಬಿ ನಾಗರಾಜ್ ಹೇಳಿದ್ದರು. ಈ ಮಾತನ್ನು ಪುಷ್ಟೀಕರಿಸುವಂತೆ, ಹೊಸಕೋಟೆ ವಿಧಾನಸಭಾ ವ್ಯಾಪ್ತಿಯಲ್ಲಿ ರಾಜಕೀಯ ಬೆಳವಣಿಗೆಗಳು ನಡೆದಿದೆ.
ಅಸೆಂಬ್ಲಿ ಚುನಾವಣೆಯನ್ನೂ ನಾಚಿಸುವಂತೆ ನಡೆದಿದ್ದ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ವಂಚಿತ ಶರತ್ ಬಚ್ಚೇಗೌಡ, ಎಂಟಿಬಿ ವಿರುದ್ದ ಭರ್ಜರಿ ಹತ್ತು ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವನ್ನು ಸಾಧಿಸಿದ್ದರು.
ರಾಜಕೀಯವಾಗಿ ತೀವ್ರ ಹಿನ್ನಡೆಯನ್ನು ಅನುಭವಿಸಿದ್ದ ಎಂಟಿಬಿ, ಛಲ ಬಿಡದ ತಿವಿಕ್ರಮನಂತೆ, ಕೊನೆಗೂ, ವಿಧಾನ ಪರಿಷತ್ ಸದಸ್ಯರಾಗುವಲ್ಲಿ ಯಶಸ್ವಿಯಾಗಿದ್ದರು. ಈಗ, ಗೂಟದ ಕಾರಿನ ನಿರೀಕ್ಷೆಯಲ್ಲಿ ಎಂಟಿಬಿ ಇದ್ದಾರೆ.
ಈಗ, ಗ್ರಾಮ ಪಂಚಾಯತಿ ಚುನಾವಣೆ ಎದುರಾಗಬಹುದಾದ ಈ ಸಂದರ್ಭದಲ್ಲಿ, ತಮ್ಮ ಶಕ್ತಿ ಪ್ರದರ್ಶನವನ್ನು ಮಾಡಿರುವ ಎಂಟಿಬಿ, ಬಿಜೆಪಿಯಿಂದ ಗುಳೇ ಹೋಗಿದ್ದ ಕಾರ್ಯಕರ್ತರು, ಮುಖಂಡರನ್ನು, ಮತ್ತೆ ತೆಕ್ಕೆಗೆ ಸೇರಿಸಿಕೊಳ್ಳುವಲ್ಲಿ ಒಂದು ಹೆಜ್ಜೆ ಮುಂದಿಟ್ಟಿದ್ದಾರೆ.

ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿ
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಹೆತ್ತಕ್ಕಿ ಗ್ರಾಮದಲ್ಲಿ, ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಬೆಂಬಲಿಗರು ಸ್ವಾಭಿಮಾನಿ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದನ್ನು, ಸ್ಥಳೀಯವಾಗಿ, ಶರತ್ ಗೆ ಆದ ಹಿನ್ನಡೆಯೆಂದೇ ವ್ಯಾಖ್ಯಾನಿಸಲಾಗುತ್ತಿದೆ.

ಎಂ.ಟಿ.ಬಿ ನಾಗರಾಜ್
ಸ್ವಕ್ಷೇತ್ರದಲ್ಲಿ ಮತ್ತೆ ಮತದಾರರ ಮತ್ತು ಸ್ಥಳೀಯ ಮುಖಂಡರ ಮನವೊಲಿಸುವ ಕೆಲಸಕ್ಕೆ ಎಂ.ಟಿ.ಬಿ ನಾಗರಾಜ್ ಮುಂದಾಗಿರುವುದರಿಂದಲೇ, ನಂದಗುಡಿ ಹೋಬಳಿಯ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಿರುವ ಸುದ್ದಿ ಮಹತ್ವವನ್ನು ಪಡೆದುಕೊಂಡಿರುವುದು ಎಂದು ಹೇಳಲಾಗುತ್ತಿದೆ.

ಬಿಜೆಪಿ ವಿರುದ್ದ ಸ್ಪಷ್ಟ ಆಕ್ರೋಶ
ಬಿಜೆಪಿ ವಿರುದ್ದ ಸ್ಪಷ್ಟ ಆಕ್ರೋಶವನ್ನು ಹೊರಹಾಕಲು ಶರತ್ ಬಚ್ಚೇಗೌಡರಿಗೆ ಸಾಧ್ಯವಾಗದೇ ಇರುವುದನ್ನು, ಎಂಟಿಬಿ ತನ್ನ ಮತ್ತು ಕುಟುಂಬದ ರಾಜಕೀಯ ನೆಲೆಯನ್ನು ಭದ್ರ ಪಡಿಸಿಕೊಳ್ಳಲು ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ ಎನ್ನುವುದು ಈ ಭಾಗದಲ್ಲಿ ಕೇಳಿ ಬರುತ್ತಿರುವ ಮಾತು.

ಶರತ್ ಬಚ್ಚೇಗೌಡ ವಿರುದ್ದ ಎಂಟಿಬಿ ನಾಗರಾಜ್ ಶಕ್ತಿ ಪ್ರದರ್ಶನ
ಶರತ್ ಬಚ್ಚೇಗೌಡರ ಹಿಂಬಾಲಕರು ಬಹುತೇಕ ಬಿಜೆಪಿಯವರು ಎನ್ನುವುದು ಹೊಸಕೋಟೆ ಮತದಾರರಿಗೆ ಗೊತ್ತಿರುವ ವಿಚಾರ. ಆದರೆ, ಬಿ.ಎನ್.ಬಚ್ಚೇಗೌಡ್ರು ಬಿಜೆಪಿ ಸಂಸದರಾಗಿರುವುದರಿಂದ, ರಾಜ್ಯ ಮತ್ತು ಕೇಂದ್ರ ಸರಕಾರದ ವೈಫಲ್ಯವನ್ನು ಸಾರ್ವಜನಿಕವಾಗಿ ತರಲು ಶರತ್ ಗೆ ಹಿನ್ನಡೆಯಾಗುತ್ತಿದೆ. ಹಾಗಾಗಿ, ಶರತ್ ಬೆಂಬಲಿಗರನ್ನು, ಎಂ.ಟಿ.ಬಿ ನಾಗರಾಜ್ ಮುಂದಿನ ದಿನಗಳಲ್ಲಿ ತಮ್ಮತ್ತ ಸೆಳೆದರೆ ಆಶ್ಚರ್ಯ ಪಡಬೇಕಾಗಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications