ಕಾಂಗ್ರೆಸ್ಸಿನಲ್ಲಿ ನಾಯಕತ್ವ ಎಂಬುದು ಅನುವಂಶೀಯ: ಎಸ್ಎಂ ಕೃಷ್ಣ
ಬೆಂಗಳೂರು, ಮಾರ್ಚ್ 14: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಎಂಬುದು ಅನುವಂಶೀಯ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ತಿಳಿಸಿದ್ದಾರೆ.
ಮಾ. 15ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ನವದೆಹಲಿಗೆ ಪ್ರಯಾಣ ಬೆಳೆಸಿದ ಕೃಷ್ಣ, ಸುದ್ದಿಗಾರರೊಂದಿಗೆ ಮಾತನಾಡಿದರು.

ಆ ವೇಳೆ, ಕಾಂಗ್ರೆಸ್ ನಲ್ಲಿನ ಹಿರಿಯ ನಾಯಕತ್ವದ ಬಗ್ಗೆ ಕೇಳಲಾದ ಪ್ರಶ್ನೆಗೆ ಅವರು ''ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವವೆಂಬುದು ಅನುವಂಶೀಯವಾಗಿ ಬರುತ್ತದೆ. ಇದನ್ನು ಯಾರು ಪ್ರಶ್ನಿಸುವಂತಿಲ್ಲ'' ಎಂದು ಟೀಕಿಸಿದರು.
ಇದೇ ವರ್ಷ ಜನವರಿಯಲ್ಲಿ ಕಾಂಗ್ರೆಸ್ ಪಕ್ಷವನ್ನು ತ್ಯಜಿಸಿದ್ದ ಕೃಷ್ಣ, ಮಾರ್ಚ್ 14ರಂದು ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.











Click it and Unblock the Notifications