ಒಕ್ಕಲಿಗ ಸಮುದಾಯಕ್ಕೆ ನಾಯಕತ್ವ ಗುಣ ರಕ್ತಗತವಾಗಿ ಬಂದಿದೆ: ಸಚಿವ ಕೆ. ಸುಧಾಕರ್
ಬೆಂಗಳೂರು, ಆಗಸ್ಟ್ 20: ಒಕ್ಕಲಿಗರಲ್ಲಿ ಸಹಜ ನಾಯಕತ್ವದ ಗುಣ ಇದೆ. ರಕ್ತಗತವಾಗಿ ಬಂದಿರುವ ಈ ಗುಣದಿಂದ ಎಲ್ಲಾ ಸಮುದಾಯಗಳನ್ನು ಒಟ್ಟು ಸೇರಿಸಿಕೊಂಡು ಮುನ್ನಡೆಸುವ ಶಕ್ತಿ ಸಾಮರ್ಥ್ಯ ಒಕ್ಕಲಿಗರಲ್ಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಬೆಂಗಳೂರಿನ ಅದಿಚುಂಚನಗಿರಿ ಒಕ್ಕಲಿಗ ಸಭಾಭವನದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಒಕ್ಕಲಿಗ ಸಂಘದ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಮುದಾಯದ ಎಲ್ಲಾ ಒಕ್ಕಲಿಗರನ್ನು ಮುಖ್ಯವಾಹಿನಿಯಲ್ಲಿ ತೆಗೆದುಕೊಂಡು ಹೋಗುವ ಕಾರ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಮಾಡುತ್ತಿದ್ದಾರೆ. ಒಕ್ಕಲಿಗರು ಹೆಚ್ಚಾಗಿರುವ ಕಡೆ ನಾನಾ ಕಾರಣಗಳಿಂದ ಒಗ್ಗಟ್ಟಿನ ಕೊರತೆ ಸಾಮಾನ್ಯವಾಗಿದೆ. ಆದರೆ ಎಲ್ಲರನ್ನೂ ಒಗ್ಗೂಡಿಸುವ ಕಾರ್ಯವನ್ನು ಶ್ರೀಗಳು ಮಾಡುತ್ತಿದ್ದಾರೆ ಎಂದು ಹೇಳಿದರು.
ಶ್ರೀ ಬಾಲ ಗಂಗಾಧರನಾಥ ಸ್ವಾಮೀಜಿಗಳ ದೂರ ದೃಷ್ಟಿಯಿಂದ ಬೆಳೆದ ಈ ಮಠ ಒಕ್ಕಲಿಗ ಸಮುದಾಯಗಳಿಗೆ ಪ್ರೇರಣಾ ಶಕ್ತಿ. ಬೇರೆ ಬೇರೆ ಕಡೆ ನಾನಾ ರೀತಿಯಲ್ಲಿ ಕರೆಸಿಕೊಳ್ಳುವ ಒಕ್ಕಲಿಗರು ಎಲ್ಲರೂ ಒಂದೇ. ಅವರೆಲ್ಲರನ್ನೂ ಮುಖ್ಯ ವಾಹಿನಿಯಲ್ಲಿ ಸೇರಿಸಿಕೊಳ್ಳುವ ಪ್ರಯತ್ನವನ್ನು ಸ್ವಾಮೀಜಿಗಳು ಮಾಡುತ್ತಿದ್ದಾರೆ. ಎಲ್ಲಾ ಒಕ್ಕಲಿಗರು ಒಂದೇ ಎಂದು ಸರ್ಕಾರ ಕೂಡ ಪರಿಗಣಿಸಿದೆ ಎಂದು ತಿಳಿಸಿದರು.

ಬೆಂಗಳೂರಿನಲ್ಲಿ 9 ರಿಂದ 10 ಸಾವಿರ ಉತ್ತರಕನ್ನಡ ಜಿಲ್ಲೆಯ ಒಕ್ಕಲಿಗರು ಉದ್ಯೋಗ ಮಾಡಿಕೊಂಡು ವಾಸ ಮಾಡುತ್ತಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 4 ಲಕ್ಷ ಒಕ್ಕಲಿಗರಿದ್ದಾರೆ. ಈ ಸಂಖ್ಯೆ ಬಹು ದೊಡ್ಡದು. ನಾಡ ಪ್ರಭು ಕೆಂಪೇಗೌಡರು ಆಡಳಿತ ಮಾಡಿದ ಪ್ರಾಂತ್ಯಗಳಲ್ಲಿ , ಎಲ್ಲಾ ಸಮುದಾಯಗಳ 54 ಪೇಟೆ ನಿರ್ಮಾಣ ಮಾಡಿದರು. 530 ವರ್ಷಗಳ ಹಿಂದೆಯಿಂದಲೂ ಸಮುದಾಯದ ನಾಯಕರು ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಸಾಮರ್ಥ್ಯ ತೋರಿಸಿದ್ದರು. ಸಾಮಾಜಿಕ ನ್ಯಾಯ, ಸಮಾನತೆ, ಹೃದಯವಂತಿಕೆ ಒಕ್ಕಲಿಗಲ್ಲಿದೆ ಎಂದರು.
ಆದಿಚುಂಚನಗಿರಿ ಮಠದಲ್ಲಿ ಎಲ್ಲಾ ಸಮುದಾಯದ ಮಕ್ಕಳಿಗೆ ಉಚಿತ ದಾಸೋಹ ನಡೆಯುತ್ತಿದೆ. ಶಿಕ್ಷಣ ದಾಸೋಹ, ಅನ್ನ, ಆರೋಗ್ಯ ಮತ್ತು ಆದ್ಯಾತ್ಮಿಕ ದಾಸೋಹಗಳು ನಡೆಯುತ್ತಿವೆ. ಗುರುಗಳು ಎಲ್ಲಾ ಕಾರ್ಯದಲ್ಲೂನಮ್ಮ ಬೆನ್ನ ಹಿಂದಿದ್ದಾರೆ. ಸರ್ಕಾರ ಕೂಡ ನಮ್ಮ ಬೆನ್ನ ಹಿಂದಿದೆ. ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಒಕ್ಕಲಿಗರಿಗೆ ಒಂದು ನಿವೇಶನ ಕೊಡುವ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ನಿರ್ಮಲಾನಂದ ಶ್ರಿಗಳಿಗೆ ಒಕ್ಕಲಿಗರ ಅಭಿವೃದ್ಧಿ ಬಗ್ಗೆ ಸ್ಪಷ್ಟ ದೃಷ್ಟಿ ಇದೆ. ಎಲ್ಲಾ ಒಕ್ಕಲಿಗರ ವಿಚಾರಧಾರೆ ಒಂದೇ ಆಗಿರಬೇಕು. ಅನೇಕ ವರ್ಗಗಳಿಗೆ ಪ್ರಾತಿನಿಧ್ಯ ಕೊಡುವ ಕೆಲಸ ಆಗಬೇಕು. ರಾಜ್ಯದಲ್ಲಿ ಪ್ರಬಲ ಸಮುದಾಯವಾಗಿರುವ ಒಕ್ಕಲಿಗರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂದು ಹೇಳಿದರು.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications