ಹಿಂಜಾವೇ ಮುಖಂಡ ಜಗದೀಶ್ ಕಾರಂತ್ ವಿಚಾರಣೆಗೆ ಕಾನೂನು ಅಧಿಕಾರಿಗಳು ಸಹಮತ
ಬೆಂಗಳೂರು, ಸೆಪ್ಟೆಂಬರ್ 28: ಐದು ವರ್ಷಗಳ ಹಿಂದೆ ಪುತ್ತೂರಿನ ಕಸ್ಬಾ ಗ್ರಾಮದ ಕಿಲ್ಲೆ ಮೈದಾನದಲ್ಲಿ ನಡೆದಿದ್ದ ಪ್ರತಿಭಟನೆಯೊಂದರಲ್ಲಿ ಹಿಂದೂ ಜಾಗರಣ ವೇದಿಕೆ ನಾಯಕ ಜಗದೀಶ್ ಕಾರಂತ ವಿವಾದಾತ್ಮಕ ಮತ್ತು ಪ್ರಚೋದನಾಕಾರಿ ಭಾಷಣ ಮಾಡಿರುವುದು ದೃಢಪಟ್ಟಿದೆ. ಹೀಗಾಗಿ ಅವರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ನೀಡಬಹುದು ಎಂದು ಕಾನೂನು ಅಧಿಕಾರಿಗಳು ಸರಕಾರಕ್ಕೆ ಅಭಿಪ್ರಾಯ ಮಂಡಿಸಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ.
ದಿ ಫೈಲ್ ವೆಬ್ ಸೈಟ್ ಈ ಕುರಿತು ವರದಿ ಮಾಡಿದೆ. ಜಗದೀಶ್ ಕಾರಂತ್ ಅವರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಬೇಕು ಎಂದು ವಿಧಾನಪರಿಷತ್ ನ ಸದಸ್ಯ ಎನ್ ರವಿಕುಮಾರ್ ಮತ್ತಿತರರು ಸರಕಾರದ ಮೇಲೆ ಒತ್ತಡ ಹೇರಿರುವ ಬೆನ್ನಲ್ಲೇ ಪುತ್ತೂರಿನ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಲು ಪೂರ್ವಾನುಮತಿ ನೀಡಲು ಕಾನೂನು ಅಧಿಕಾರಿಗಳು ಸಮ್ಮತಿ ವ್ಯಕ್ತಪಡಿಸಿರುವುದು ಮಹತ್ವ ಪಡೆದುಕೊಂಡಿದೆ.
ಸೆಪ್ಟೆಂಬರ್ 15, 2017ರಲ್ಲಿ ಪುತ್ತೂರಿನಲ್ಲಿ ನಡೆದಿದ್ದ ಹಿಂದೂ ಜಾಗರಣ ವೇದಿಕೆಯ ಪ್ರತಿಭಟನೆಯಲ್ಲಿ ಜಗದೀಶ್ ಕಾರಂತ್ "ಸಂಪ್ಯ ಪೊಲೀಸ್ ಠಾಣೆಯ ಎಎಸ್ಐ ಅಬ್ದುಲ್ ಖಾದರ್ ಸೇರಿ ಮೂವರ ವಿರುದ್ಧ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಎಸ್ಡಿಪಿಐ, ಪಿಎಫ್ಐ ಏಜೆಂಟ್ ರೀತಿ ವರ್ತಿಸುವುದಾದರೆ, ಗೋರಕ್ಷಕರನ್ನು ಶಿಕ್ಷಿಸುವ ಮುಸಲ್ಮಾನನಾದರೆ ನಾನು ಒಬ್ಬ ಹಿಂದೂ ವಾಗಿ ನಿನಗೆ ರಸ್ತೆಯಲ್ಲಿ ಕಲ್ಲು ಹೊಡೆದು ಹುಚ್ಚು ನಾಯಿಯಂತೆ ಏಕೆ ಅಟ್ಟಾಡಿಸಬಾರದು ಎಂದು ಏಕವಚನದಲ್ಲಿ ವಾಗ್ದಾಳಿ," ನಡೆಸಿದ್ದರು.

ನೂರಾರು ಜನರ ಸಮ್ಮುಖದಲ್ಲಿ ಕರ್ತವ್ಯ ನಿರತ ಪೊಲೀಸ್ ಅಧಿಕಾರಿ ಎಎಸ್ಐ ಅಬ್ದುಲ್ ಖಾದರ್, ಪೊಲೀಸರಾದ ಚಂದ್ರ ಮತ್ತು ರುಕ್ಮಯ್ಯ ಇವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಲ್ಲದೆ, ಅವರ ಮೇಲೆ ಹಲ್ಲೆ ಎಸಗಲು ಪ್ರೇರಣೆ ನೀಡುವ ರೀತಿ ಮಾತನಾಡಿದ್ದರು. ಅಲ್ಲದೆ ಇಸ್ಲಾಮ್ ಧರ್ಮವನ್ನು ಗುರಿಯಾಗಿಸಿ ಮಾತನಾಡಿ ಕೋಮುದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಣ ಮಾಡಿರುವುದನ್ನು ಕಾನೂನು ಅಧಿಕಾರಿಗಳು ಸರಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಆರೋಪಿತನು ಪ್ರತಿಭಟನಾ ಸಭೆಯಲ್ಲಿ ವಿವಾದಾತ್ಮಕ ಹಾಗೂ ಪ್ರಚೋದನಾಕಾರಿ ಭಾಷಣ ಮಾಡಿರುವುದು ರುಜುವಾತಾಗಿರುವುದರಿಂದ ಐಪಿಸಿ ಕಲಂ 153(ಎ) 505(1)(ಬಿ) 505(2), 189, 504 ಅಡಿಯಲ್ಲಿ ಆರೋಪಿತ ವಿರುದ್ಧದ ಆರೋಪಗಳು ದೃಢಪಟ್ಟಿದೆ.
ಆರೋಪಿಯನ್ನು ನ್ಯಾಯಾಲಯದಲ್ಲಿ ವಿಚಾರಣೆಗೊಳಪಡಿಸಲು ಸಿಆರ್ಪಿಸಿ ಕಲಂ 196(1) ಮತ್ತು 196(1ಎ) ಅಡಿ ಸರ್ಕಾರವು ಪೂರ್ವಾನುಮತಿ ನೀಡಬಹುದು ಎಂದು ಹಿರಿಯ ಕಾನೂನು ಅಧಿಕಾರಿಗಳು 2022ರ ಸೆ.15ರಂದು ವರದಿ ನೀಡಿರುವುನ್ನು ದಿ ಫೈಲ್ ವರದಿ ಮಾಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಕರ್ನಾಟಕದ ಕರಾವಳಿಯಲ್ಲಿ ಕಾಣದ ಅಗ್ನಿಕುಂಡದ ಮೇಲೆ ಘನತ್ಯಾಜ್ಯ ವಿಲೇವಾರಿಗೆ ವೀರಾವೇಶದ ಜಿದ್ದಾಜಿದ್ದಿ: ರಾಜಾರಾಂ ತಲ್ಲೂರು ಬರಹ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ












Click it and Unblock the Notifications