ಪರಿಷತ್ ಸಭಾಪತಿ ಶಂಕರಮೂರ್ತಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಬೆಂಗಳೂರು, ಜೂನ್ 13: ವಿಧಾನ ಪರಿಷತ್ ಸಭಾಪತಿ ಡಿ.ಎಚ್ ಶಂಕರಮೂರ್ತಿ ಅಸ್ವಸ್ಥರಾಗಿದ್ದಾರೆ. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸಭಾಪತಿ ಶಂಕರಮೂರ್ತಿ ಪದಚ್ಯುತಿಯಿಂದ ಕಾಂಗ್ರೆಸಿಗೆ ಏನು ಲಾಭ?
ಸಭಾಪತಿ ಕೊಠಡಿಯಲ್ಲಿದ್ದ ವೇಳೆ ಶಂಕರಮೂರ್ತಿ ಸಿಬ್ಬಂದಿಗಳ ಜತೆ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಅವರು ಅಸ್ವಸ್ಥರಾಗಿದ್ದಾರೆ. ತಕ್ಷಣ ಅವರನ್ನು ಉಪಚರಿಸಿದ ವೈದ್ಯರು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಪರಿಷತ್ ಸಭಾಪತಿ ಶಂಕರಮೂರ್ತಿ ಪದಚ್ಯುತಿಗೆ ಕಾಂಗ್ರೆಸ್ ತಂತ್ರ
ಇನ್ನು ಇಂದು ವಿಧಾನಪರಿಷತ್ ನಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ಸದಸ್ಯರು ಸಭಾಪತಿ ಶಂಕರಮೂರ್ತಿ ವಿರುದ್ಧವೇ ಅವಿಶ್ವಾಸ ನಿರ್ಣಯ ಮಂಡಿಸಿದ್ದರು.
ಶಂಕರಮೂರ್ತಿ ವಿರುದ್ಧ ಕಾಂಗ್ರೆಸಿನಿಂದ ಅವಿಶ್ವಾಸ ನಿರ್ಣಯ
ಈ ಸಂದರ್ಭ "ಅವಿಶ್ವಾಸ ನಿರ್ಣಯದಲ್ಲಿ ಸೂಕ್ತ ಕಾರಣಗಳಿಲ್ಲ," ಎಂದು ಹೇಳಿಯೂ ಶಂಕರಮೂರ್ತಿ ಅವಿಶ್ವಾಸ ನಿರ್ಣಯಕ್ಕೆ ಒಪ್ಪಿಕೊಂಡಿದ್ದರು.
Comments
English summary
Legislative Council chairman D.H. Shankaramurthy admitted to private hospital after illness.
Story first published: Tuesday, June 13, 2017, 20:39 [IST]