Leopard in Bengaluru : ಬೆಂಗಳೂರಲ್ಲಿ ಮುಂದುವರಿದ ಚಿರತೆ ಹಾವಳಿ, ನಾಯಿ ಕೊಂದ ಚಿರತೆಯಿಂದ ಗ್ರಾಮಸ್ಥರಲ್ಲಿ ಆತಂಕ
ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಚಿರತೆ ಹಾವಳಿ, ಜನರ ಆತಂಕ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಬೆಂಗಳೂರಿನ ಗೊಂಗಡಿಪುರ ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಈ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ.
ಬೆಂಗಳೂರು, ಫೆಬ್ರುವರಿ 02: ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಚಿರತೆ ಹಾವಳಿ, ಜನರ ಆತಂಕ ಪರಿಸ್ಥಿತಿ ಮತ್ತೆ ಮುಂದುವರಿದಿದೆ. ಬೆಂಗಳೂರಿನ ಗೊಂಗಡಿಪುರ ಗ್ರಾಮದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಈ ಭಾಗದ ಜನರಲ್ಲಿ ಆತಂಕ ಮನೆ ಮಾಡಿದೆ.
ಬೆಂಗಳೂರಿನ ನೈಸ್ ರಸ್ತೆಯ ಕೊಡುಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಂಗಡಿಪುರ ಗ್ರಾಮದ ಬಳಿ ಬುಧವಾರ ರಾತ್ರಿ ಚಿರತೆ ಓಡಾಡಿರುವುದನ್ನು ಜನರು ಗಮನಿಸಿದ್ದಾರೆ. ತನ್ನ ಎರಡು ಮರಿಗಳ ಜೊತೆಗೆ ಕಳೆದ ಎರಡು ತಿಂಗಳಿನಿಂದ ಇದೇ ಭಾಗದಲ್ಲಿ ಚಿರತೆ ಪ್ರತ್ಯಕ್ಯವಾಗುತ್ತಿದೆ. ಜನರು ಮನೆಯಿಂದ ಹೊರಹೋಗದ ಸ್ಥಿತಿ ಎದುರಾಗಿದ್ದು, ಮಹಿಳೆಯರು, ಮಕ್ಕಳ ಭಯಬೀತರಾಗಿದ್ದಾರೆ.
ಎರಡು ವಾರದ ಹಿಂದಷ್ಟೇ ಇದೇ ಚಿರತೆ ನೈಸ್ ರಸ್ತೆ ಪಕ್ಕದಲ್ಲಿ ಓಡಾಡಿತ್ತು. ಆಗಲೂ ಈ ಗ್ರಾಮದಲ್ಲಿ ಇಂತದ್ದೇ ಭಯದವಾತಾವರಣ ನಿರ್ಮಾಣವಾಗಿತ್ತು. ಮತ್ತೆ ಬುಧವಾರ ಕಾಣಿಸಿಕೊಂಡ ಚಿರತೆ, ರಾತ್ರಿ ವೇಳೆ ನಾಯಿಯನ್ನು ಎಳೆದೊಯ್ದಿದೆ ಎಂದು ಗೊಂಗಡಿಪುರ ಗ್ರಾಮಸ್ಥರು ತಿಳಿಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು/ಸರ್ಕಾರ ಈ ಬಗ್ಗೆ ಸೂಕ್ತ ಕ್ರಮವಹಿಸಿ ಚಿರತೆ ಸೆರೆಹಿಡಿದು ಸಂಭವನೀಯ ಅಪಾತ ತಪ್ಪಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಎರಡು ತಿಂಗಳ ಹಿಂದಷ್ಟೇ ಡಿಸೆಂಬರ್ನಲ್ಲಿ ಬೆಂಗಳೂರಿನ ಸೋಮಾಪುರ ಬಳಿ ತುರಹಳ್ಳಿಯಲ್ಲಿ ಎರಡು ಸಲ ಚಿರತೆ ಕಾಣಿಸಿಕೊಳ್ಳುವ ಮೂಲಕ ಜನರಲ್ಲಿ ಭೀತಿ ಸೃಷ್ಟಿ ಮಾಡಿತ್ತು.
ಇನ್ನೂ ಇತ್ತೀಚೆಗಷ್ಟೇ ಜನವರಿ 11ರ ಆಸುಪಾಸು ದಿನ ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ವಿವಿ ಆವರಣದಲ್ಲಿ ಎನ್ಎಸ್ಎಸ್ ಭವನದ ಹಿಂಭಾಗದಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಭಯಬೀತರಾಗಿದ್ದ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಮಂಡಳಿ ಧೈರ್ಯ ತುಂಬಿ ಜಾಗೃತಿ ವಹಿಸುವಂತೆ ತಿಳಿಸಿತ್ತು. ಆದರೆ ಈ ಬಗ್ಗೆ ಅರಣ್ಯಾಧಿಕಾರಿಗಳು ಚಿರತೆ ಓಡಾಡಿದ್ದರ ಬಗ್ಗೆ ಖಚಿತಪಡಿಸಿರಲಿಲ್ಲ ಎನ್ನಲಾಗಿದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications