Breaking; ಚಿರತೆ ಆತಂಕ, ಬೆಂಗಳೂರು ವಿವಿ ರಸ್ತೆ ಬಂದ್
ಬೆಂಗಳೂರು, ಜನವರಿ 15; ಬೆಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ ಎಂಬ ಸುದ್ದಿ ಜನರು, ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿದೆ. ಈ ಹಿನ್ನಲೆಯಲ್ಲಿ ವಿವಿ ಆವರಣ ಸಂಪರ್ಕಿಸುವ ಕೆಲ ರಸ್ತೆ ಬಂದ್ ಮಾಡಲಾಗಿದೆ.
ನಾಗರಬಾವಿ ಸರ್ಕಲ್ನಿಂದ ವಿಶ್ವವಿದ್ಯಾಲಯಕ್ಕೆ ತೆರಳುವ ರಸ್ತೆಯನ್ನು ರಾತ್ರಿ 8 ರಿಂದ ಬೆಳಗ್ಗೆ 6 ಗಂಟೆಯ ತನಕ ಮುಚ್ಚಲಾಗಿದೆ. ಯಾರೂ ಸಹ ಈ ರಸ್ತೆಯಲ್ಲಿ ಸಂಚಾರ ನಡೆಸಬಾರದು ಎಂದು ಸೂಚನೆ ನೀಡಲಾಗಿದೆ.
ವಾಹನ ಸವಾರರು ಈ ಮಾರ್ಗ ಬಳಸದಂತೆ ಸೂಚನೆ ನೀಡಲಾಗಿದೆ. ರಾಜರಾಜೇಶ್ವರಿ ನಗರ ಕಡೆಯ ರಸ್ತೆಯ ಸಂಚಾರದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಬೆಂಗಳೂರು ವಿವಿ ಆವರಣದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಗುರುವಾರದಿಂದ ಸುದ್ದಿ ಹಬ್ಬಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಅದು ಚಿರತೆಯಲ್ಲ. ಅದೇ ಆಕಾರ ಹೋಲುವ ಕಾಡುಬೆಕ್ಕು ಎಂದು ಹೇಳುತ್ತಿದೆ.
ಕನ್ನಳ್ಳಿ ಸಮೀಪದ ಗಂಗಾಡಿಪುರ ಗ್ರಾಮದ ಮಹಿಳೆಯೊಬ್ಬರು ಬೆಂಗಳೂರು ನಗರದ ಆರ್ಎಫ್ಒ ಕಚೇರಿಯನ್ನು ಸಂಪರ್ಕಿಸಿದ್ದರು. ತಮ್ಮ ಬಳಿ ಇದ್ದ ವಿಡಿಯೋ ತುಣುಕು ಹಂಚಿಕೊಂಡಿದ್ದರು.
ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ವನ್ಯಜೀವಿ ಸಂರಕ್ಷಣೆ ಕಾರ್ಯಕರ್ತರು ಈ ಪ್ರಾಣಿ ದಕ್ಷಿಣ ಏಷ್ಯಾದ ಕಾಡುಗಳಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ. ಇದು ಕಾಡುಬೆಕ್ಕು ಎಂದು ಹೇಳುತ್ತಿದ್ದಾರೆ.
ಈ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆದರೆ ಗುರುವಾರದಿಂದ ಚಿರತೆ ಕಾಣಿಸಿಕೊಂಡಿದೆ ಎಂಬ ಸುದ್ದಿ ಹಬ್ಬಿದೆ. ವಿದ್ಯಾರ್ಥಿಗಳು ಆತಂಕಗೊಂಡಿದ್ದಾರೆ.
ಬೆಂಗಳೂರು ನಗರದ ಹೊರವಲಯದಲ್ಲಿ ಚಿರತೆಗಳು ಪ್ರತ್ಯಕ್ಷವಾಗುವುದು ಹೊಸದಲ್ಲ. ಆದರೆ ಇದೇ ಮೊದಲ ಬಾರಿಗೆ ಬೆಂಗಳೂರು ವಿವಿ ಆವರಣದಲ್ಲಿ ಕಾಣಿಸಿಕೊಂಡಿದೆ. ಪ್ರತ್ಯಕ್ಷವಾಗಿರುವುದು ಚಿರತೆ ಹೌದೋ ಅಲ್ಲವೋ ಎಂಬುದು ಖಚಿತವಾಗಿಲ್ಲ. ಆದರೆ ಮುಂಜಾಗ್ರತಾ ಕ್ರಮವಾಗಿ ರಸ್ತೆ ಬಂದ್ ಮಾಡಲಾಗಿದೆ.
-
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications