ಬೆಂಗಳೂರು ಕಳವಳ - ಪರಾರಿಯಾದ ಚಿರತೆಗೆ ವ್ಯಾಪಕ ಶೋಧ
ಬೆಂಗಳೂರು, ಫೆಬ್ರವರಿ 15 : ಬೆಂಗಳೂರು ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ ಚಿರತೆ ತಪ್ಪಿಸಿಕೊಂಡಿದ್ದು, ಬೆಂಗಳೂರಿನ ನಗರದಲ್ಲಿ ಆತಂಕ ಸೃಷ್ಠಿಯಾಗಿದೆ. ವಿಬ್ ಗಯಾರ್ ಶಾಲೆಯಲ್ಲಿ ಸೆರೆ ಹಿಡಿದ ಚಿರತೆ ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದೆ. ಬೋನಿನಲ್ಲಿದ್ದ ಚಿರತೆ ಪರಾರಿಯಾಗಿದ್ದು ಹೇಗೆ? ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಚಿರತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.
ಉದ್ಯಾನದ ಸುತ್ತ-ಮುತ್ತ ಶೋಧ : ಬನ್ನೇರುಘಟ್ಟ ಉದ್ಯಾನದಿಂದ ತಪ್ಪಿಸಿಕೊಂಡ ಚಿರತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಬನ್ನೇರುಘಟ್ಟ, ಬೇಗಿಹಳ್ಳಿಕೊಪ್ಪ, ಭೈರನಹಳ್ಳಿ ಗ್ರಾಮದ ಸುತ್ತ-ಮುತ್ತ ಹುಡುಕಾಟ ನಡೆಸುತ್ತಿದ್ದಾರೆ.
ಬನ್ನೇರುಘಟ್ಟದಿಂದ ಚಿರತೆ ಪರಾರಿ : ಬೆಂಗಳೂರು ಹೊರವಲಯದ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಿಂದ ಚಿರತೆ ತಪ್ಪಿಸಿಕೊಂಡಿದೆ. ವಿಬ್ ಗಯಾರ್ ಶಾಲೆಯಲ್ಲಿ ಸೆರೆ ಹಿಡಿದ ಚಿರತೆ ಸೋಮವಾರ ಬೆಳಗ್ಗೆಯಿಂದ ನಾಪತ್ತೆಯಾಗಿದೆ. ಚಿರತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. ಉದ್ಯಾನವನದ ಸುತ್ತ-ಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಭಾನುವಾರ ರಾತ್ರಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿದ್ದ ಚಿರತೆಗೆ ಆಹಾರ ನೀಡಲಾಗಿತ್ತು. ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಪರಿಶೀಲನೆ ನಡೆಸಿದಾಗ ಚಿರತೆ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಬೋನ್ನಲ್ಲಿದ್ದ ಚಿರತೆ ನಾಪತ್ತೆಯಾಗಿದ್ದು ಹೇಗೆ? ಎಂಬುದು ಆಶ್ಚರ್ಯ ಮೂಡಿಸಿದೆ. [ಚಿತ್ರಗಳು : ಬೆಂಗಳೂರು ಶಾಲೆಗೆ ಲಗ್ಗೆ ಹಾಕಿದ ಚಿರತೆ]

ಫೆ.7ರಂದು ಚಿರತೆಯನ್ನು ಸೆರೆ ಹಿಡಿಯುವ ವೇಳೆ ಅದರ ಬಲಗಣ್ಣಿಗೆ ಗಾಯವಾಗಿತ್ತು ಎಂದು ತಿಳಿದುಬಂದಿದೆ. ಭಾನುವಾರ ರಾತ್ರಿ ಚಿರತೆಗೆ ಆಹಾರ ನೀಡಲಾಗಿತ್ತು. ನಂತರ ಅದು ತಪ್ಪಿಕೊಂಡಿದೆ. ಚಿರತೆ ತಪ್ಪಿಸಿಕೊಂಡ ಸುದ್ದಿ ಕೇಳಿ ಬನ್ನೇರುಘಟ್ಟ ಉದ್ಯಾನವನದ ಸುತ್ತಮುತ್ತಲಿನ ಜನರು ಆತಂಕಗೊಂಡಿದ್ದಾರೆ. [ಶಾಲೆಗೆ ನುಗ್ಗಿದ್ದ ಚಿರತೆ ಸೆರೆ ಸಿಕ್ಕಿದ್ದು ಹೇಗೆ?]
ವರ್ತೂರು ಬಳಿಯ ವಿಬ್ ಗಯಾರ್ ಶಾಲೆಗೆ ಫೆ.7ರ ಭಾನುವಾರ ಮುಂಜಾನೆ 4.15ರ ಸುಮಾರಿಗೆ ಈ ಚಿರತೆ ನುಗ್ಗಿತ್ತು. ರಾತ್ರಿ 7.30ರ ಸುಮಾರಿಗೆ ಚಿರತೆಯನ್ನು ಸೆರೆ ಹಿಡಿಯಲಾಗಿತ್ತು. ಈ ವೇಳೆ ಚಿರತೆ ವನ್ಯಜೀವಿ ತಜ್ಞ ಸಂಜಯ್ ಗುಬ್ಬಿ ಸೇರಿದಂತೆ ಮೂವರ ಮೇಲೆ ದಾಳಿ ಮಾಡಿತ್ತು. [ನಿಜಕ್ಕೂ ವರ್ತೂರಿಗೆ ಚಿರತೆ ಕರೆಸಿಕೊಂಡವರು ಯಾರು?]
ಶಾಲೆಯಲ್ಲಿ ಸೆರೆ ಹಿಡಿದ ಚಿರತೆಯನ್ನು ಬನ್ನೇರುಘಟ್ಟ ಉದ್ಯಾನಕ್ಕೆ ಸಾಗಿಸಲಾಗಿತ್ತು. 'ಕೆಲವು ದಿನಗಳ ಕಾಲ ಅದರ ಮೇಲೆ ನಿಗಾ ವಹಿಸಿ, ವರ್ತನೆಯನ್ನು ಅವಲೋಕಿಸಿ ನಂತರ ಕಾಡಿಗೆ ಬಿಡುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ' ಎಂದು ಅರಣ್ಯಾಧಿಕಾರಿ ನರೇಂದ್ರ ಬಾಬು ಅವರು ಹೇಳಿದ್ದರು.
-
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications