leopard: ಬೆಂಗಳೂರಿನ ಪ್ರತಿಷ್ಠಿತ ಏರಿಯಾಗೆ ಚಿರತೆ ಎಂಟ್ರಿ, ನಿವಾಸಿಗಳಲ್ಲಿ ನಡುಕ
ಉದ್ಯಾನನಗರಿ ಬೆಂಗಳೂರಿನಲ್ಲಿ ಆಗಾಗ ಚಿರತೆ ಪ್ರತ್ಯಕ್ಷವಾಗಿ ಅಟ್ಟಹಾಸ ಮೆರೆಯುತ್ತಿವೆ. ಸಾಮಾನ್ಯವಾಗಿ ಅರಣ್ಯಪ್ರದೇಶಗಳ ಸಮೀಪದ ಜಾಗಗಳಿಗೆ ಚಿರತೆ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸುತ್ತಿತ್ತು. ಇದೀಗ ಬೆಂಗಳೂರಿನ ಹೆಸರಾಂತ ಪ್ರದೇಶವಾದ ಬನಶಂಕರಿ 6ನೇ ಹಂತದ ಮೊದಲ ಬ್ಲಾಕ್ನಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಚಿರತೆ ಹಾಗೂ ಅದರ ಮರಿಗಳು ಈ ಪ್ರದೇಶದಲ್ಲಿ ಓಡಾಡಿದದ್ದು, ಇದರಿಂದ ಸ್ಥಳೀಯ ನಿವಾಸಿಗಳು ಜೀವ ಕೈಯಲ್ಲಿ ಹಿಡಿದಿದ್ದಾರೆ.
ಬನಶಂಕರಿ 6ನೇ ಹಂತದ ಮೊದಲ ಬ್ಲಾಕ್ನ ಅಪಾರ್ಟ್ಮೆಂಟ್ನ ಸಿಸಿಟಿವಿ ಕ್ಯಾಮೆರಾಗಳಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ದೃಶ್ಯಗಳು ಸೆರೆಯಾಗಿವೆ. ಅಲ್ಲದೆ ಸ್ಥಳೀಯರು ಕೂಡ ತಮ್ಮ ಮೊಬೈಲ್ಗಳಲ್ಲಿ ಚಿರತೆ ಚಲನವನಲವನ್ನು ಸೆರೆ ಹಿಡಿದಿದ್ದಾರೆ. ಈ ಪ್ರದೇಶಕ್ಕೆ ಹೊಂದಿಕೊಂಡಿರುವ ತುರಹಳ್ಳಿ ಅರಣ್ಯದಿಂದಲೇ ಚಿರತೆಗಳು ಬಂದಿವೆ ಎಂದು ಹೇಳಲಾಗುತ್ತಿದೆ.

ಈ ಪ್ರದೇಶವು ತುರಹಳ್ಳಿ ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಚಿರತೆಗಳು ಹೆಚ್ಚಾಗಿ ಜನವಸತಿ ಪ್ರದೇಶಕ್ಕೆ ನುಗ್ಗುತ್ತವೆ. ಮತ್ತು ಮತ್ತೆ ಕಾಡಿಗೆ ಹೋಗುತ್ತವೆ. ಚಿರತೆ ಕಾಣಿಸಿಕೊಂಡ ಬಗ್ಗೆ ಕಗ್ಗಲೀಪುರ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದೇವೆ ಬನಶಂಕರಿ 6ನೇ ಹಂತದ ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ತಿಳಿಸಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರದೇಶದಲ್ಲಿ ಮತ್ತೊಬ್ಬ ನಿವಾಸಿಯ ಮನೆಯ ಸಮೀಪ ಚಿರತೆ ಕಾಣಿಸಿಕೊಂಡಿರುವುದಾಗಿ ಹೇಳಿದ್ದರು. ಮೊದಲಿಗೆ ಇದನ್ನು ನಾವು ನಂಬಿರಲಿಲ್ಲ. ಆದರೆ ಅಪಾರ್ಟ್ಮೆಂಟ್ನಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ನೋಡಿದ ನಂತರವೇ ಚಿರತೆಗಳು ಪ್ರತ್ಯಕ್ಷವಾಗಿರುವುದು ನಂಬಿದೆವು. ಈಗ ಪದೇ ಪದೇ ಈ ಭಾಗದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಸಂಜೆಯಾದ ನಂತರ ನಮಗೆ ಮನೆಯಿಂದ ಹೊರಹೋಗಲು ಹೆದರಿಕೆಯಾಗುತ್ತೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಇಲ್ಲಿ ಚಿರತೆ ಮರಿಗಳು ಇರುವ ಬಗ್ಗೆ ಇನ್ನೂ ಖಾತ್ರಿಯಾಗಿಲ್ಲ. ಇದಕ್ಕೆ ಸಂಬಂಧಿಸಿ ಯಾವುದೇ ಫೋಟೋ ಅಥವಾ ವಿಡಿಯೋ ಸಾಕ್ಷಿಗಳು ಕೂಡ ಸಿಕ್ಕಿಲ್ಲ. ನಾವು ಈಗಾಗಲೇ ಸಂಶಯಾಸ್ಪದ ಪ್ರದೇಶವನ್ನು ಪರಿಶೀಲನೆ ನಡೆಸುತ್ತಿದ್ದೇವೆ. ಅಪಾರ್ಟ್ಮೆಂಟ್ನ ಕಿಟಕಿಯಿಂದ ಚಿರತೆ ಇರುವುದು ನೀಡಿದ್ದಾರೆ. ತುರಹಳ್ಳಿ ಅರಣ್ಯದ ಬಂಡೆ ಮೇಲೆ ಚಿರತೆ ಕುಳಿತಿರುವುದನ್ನು ನೋಡಿದ್ದಾರೆ. ಇದು ಕಳೆದ ವಾರಗಳಿಂದಲೇ ಕಂಡುಬಂದಿದೆ ಎಂದು ಅರಣ್ಯಾಧಿಕಾರಿಗಳು ಹೇಳಿದ್ದಾರೆ.
ಚಿರತೆಯು ತನ್ನ ಮರಿಗಳೊಂದಿಗೆ ಅಲೆದಾಡುತ್ತಿದ್ದರೆ ಸಾರ್ವಜನಿಕರು ಅವುಗಳಿಗೆ ತೊಂದರೆ ಕೊಡಬೇಡಿ. ಒಂದು ವೇಳೆ ಚಿರತೆಗಳು ಬಂದರೂ ಮತ್ತೆ ಕಾಡಿಗೆ ಮರಳುತ್ತವೆ. ಮರಿಗಳ ಮೇಲೆ ಯಾವ ಕಾರಣಕ್ಕೂ ಸ್ಪರ್ಶಿಸಬೇಡಿ. ಹಾಗೂ ಮರಿಗಳನ್ನು ಎತ್ತಿಕೊಂಡು ಹೋಗಬೇಡಿ ಎಂದು ನಿವಾಸಿಗಳಿಗೆ ಮನವಿ ಮಾಡಿದ್ದಾರೆ.
ತುರಹಳ್ಳಿ ಅರಣ್ಯ ಪ್ರದೇಶಕ್ಕೆ ಅಂಟಿಕೊಂಡಿರುವ ಈ ಪ್ರದೇಶದಲ್ಲಿ ಎರಡು ಚಿರತೆಗಳು ಆಗಾಗ ಪ್ರತ್ಯಕ್ಷವಾಗುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆ ಆಟೋ, ಕ್ಯಾಬ್ ಹಾಗೂ ಡೆಲಿವರಿ ಬಾಯ್ಸ್ ಕೂಡ ರಾತ್ರಿ ವೇಳೆ ಈ ಪ್ರದೇಶಕ್ಕೆ ಬರಲು ಹಿಂಜರಿಯುತ್ತಾರೆ. ಇತ್ತೀಚೆಗೆ ಈ ಪ್ರದೇಶದಲ್ಲಿ ಹಲವು ಬೀದಿನಾಯಿಗಳು ಕೂಡ ಮಿಸ್ಸಿಂಗ್ ಆಗಿವೆ ಎಂದು ಹೇಳಲಾಗುತ್ತಿದೆ. ಸದ್ಯ ಚಿರತೆಗಳಿಂದ ರಕ್ಷಣೆ ಒದಗಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications