Leopard in Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಓಡಾಟ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಪ್ರದೇಶದಲ್ಲಿ ಜನರಿಗೆ ಎಚ್ಚರಿಕೆ ವಹಿಸಲು ಕೇಳಲಾಗಿದೆ. ಪ್ರಮುಖ ಟೆಕ್ ಹಬ್ ಆಗಿರುವ ಎಲೆಕ್ಟ್ರಾನಿಕ್ ಸಿಟಿ ಬಳಿ ಫ್ಲೈಓವರ್ ದಾಟುವ ಸಂದರ್ಭದಲ್ಲಿ ಚಿರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಕಾಣಿಸಿಕೊಂಡಿದ್ದು, ರಾತ್ರಿ ವೇಳೆ ಸಂಚರಿಸುವವರಿಗೆ ಆತಂಕ ಶುರುವಾಗಿದೆ.
1ನೇ ಹಂತದ ಟೋಲ್ ಪ್ಲಾಜಾದಲ್ಲಿನ ಸಿಸಿಟಿವಿಯಲ್ಲಿ ಚಿರತೆಯ ಚಲನವಲನ ಸೆರೆಯಾಗಿದ್ದು, ಚಿರತೆ ರಸ್ತೆ ದಾಟುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಚಿರತೆಯು ಪನಕ್ ಇಂಡಿಯಾ ಕಂಪನಿ ಪ್ರದೇಶದಿಂದ ನೆಟ್ಟೂರು ತಾಂತ್ರಿಕ ತರಬೇತಿ ಪ್ರತಿಷ್ಠಾನ (NTTF) ಮೈದಾನಕ್ಕೆ ಹೋಗುವಾಗ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ಮಹಾನಗರದಲ್ಲಿ ಚಿರತೆಗಳು ಕಾಣಿಸಿಕೊಳ್ಳುವುದು ಇದೇ ಮೊದಲೇನಲ್ಲ. ವಾರದ ಹಿಂದೆ ಕೂಡ ಜಿಗಣಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಅದೂ ಇದೂ ಒಂದೇ ಚಿರತೆ ಇರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
Leopard spotted in Bengaluru's IT Hub, Causes panic among workers#ViralVideo #LeopardinITHub #ITHub #Bengaluru #LeopardInBengaluru pic.twitter.com/1iQybEjvof
— Business Today (@business_today) September 17, 2024
ಮುನ್ನೆಚ್ಚರಿಕೆ ಕ್ರಮ
ಚಿರತೆ ಕಾಣಿಸಿಕೊಂಡ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎನ್ಟಿಟಿಎಫ್ನ ಪ್ರಾಂಶುಪಾಲ ಸುನಿಲ್ ಜೋಶಿ, "ಕಾಂಪೌಂಡ್ ಗೋಡೆ ಬಳಿ ಚಿರತೆ ಇರುವ ದೃಶ್ಯಗಳನ್ನು ನಾವು ಟೋಲ್ ಗೇಟ್ ಕ್ಯಾಮೆರಾದಿಂದ ಪಡೆದುಕೊಂಡಿದ್ದೇವೆ. ಕ್ಯಾಂಪಸ್ನಲ್ಲಿ ಮುನ್ನೆಚ್ಚರಿಕೆಯಾಗಿ ತಪಾಸಣೆ ನಡೆಸಿದ್ದೇವೆ. ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಿ ಚಿರತೆ ಇಲ್ಲ ಎಂದು ಹೇಳಿದ್ದಾರೆ. ಕ್ಯಾಮೆರಾ ದೃಶ್ಯಗಳು ಅಲ್ಲಿ ಚಿರತೆ ಮುಂದೆ ಹೋಗಿದೆ ಎನ್ನುವುದನ್ನು ತೋರಿಸಿದೆ. ತರಬೇತಿ ಕೇಂದ್ರವಾಗಿರುವ ಕಾರಣ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ" ಎಂದು ಹೇಳಿದರು.
ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದು, ಯಾವುದೇ ಕ್ಯಾಮೆರಾದಲ್ಲಿ ಚಿರತೆ ಓಡಾಟ ಕಾಣಿಸಿಲ್ಲ. ಕಾಂಪೌಂಡ್ ಪಕ್ಕದಲ್ಲಿರುವ ರಸ್ತೆಯ ಬಳಿ ಮಾತ್ರ ಚಿರತೆ ಹೋಗಿರುವುದು ಸೆರೆಯಾಗಿದೆ. ಆದರೆ ಈಗ ಎಲ್ಲಿದೆ ಎನ್ನುವುದು ತಿಳಿದುಬಂದಿಲ್ಲ ಎಂದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications