Leopard in Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಚಿರತೆ ಓಡಾಟ; ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಈ ಪ್ರದೇಶದಲ್ಲಿ ಜನರಿಗೆ ಎಚ್ಚರಿಕೆ ವಹಿಸಲು ಕೇಳಲಾಗಿದೆ. ಪ್ರಮುಖ ಟೆಕ್ ಹಬ್ ಆಗಿರುವ ಎಲೆಕ್ಟ್ರಾನಿಕ್ ಸಿಟಿ ಬಳಿ ಫ್ಲೈಓವರ್ ದಾಟುವ ಸಂದರ್ಭದಲ್ಲಿ ಚಿರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಕಾಣಿಸಿಕೊಂಡಿದ್ದು, ರಾತ್ರಿ ವೇಳೆ ಸಂಚರಿಸುವವರಿಗೆ ಆತಂಕ ಶುರುವಾಗಿದೆ.
1ನೇ ಹಂತದ ಟೋಲ್ ಪ್ಲಾಜಾದಲ್ಲಿನ ಸಿಸಿಟಿವಿಯಲ್ಲಿ ಚಿರತೆಯ ಚಲನವಲನ ಸೆರೆಯಾಗಿದ್ದು, ಚಿರತೆ ರಸ್ತೆ ದಾಟುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಚಿರತೆಯು ಪನಕ್ ಇಂಡಿಯಾ ಕಂಪನಿ ಪ್ರದೇಶದಿಂದ ನೆಟ್ಟೂರು ತಾಂತ್ರಿಕ ತರಬೇತಿ ಪ್ರತಿಷ್ಠಾನ (NTTF) ಮೈದಾನಕ್ಕೆ ಹೋಗುವಾಗ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದು ಅಂದಾಜಿಸಲಾಗಿದೆ.

ಬೆಂಗಳೂರು ಮಹಾನಗರದಲ್ಲಿ ಚಿರತೆಗಳು ಕಾಣಿಸಿಕೊಳ್ಳುವುದು ಇದೇ ಮೊದಲೇನಲ್ಲ. ವಾರದ ಹಿಂದೆ ಕೂಡ ಜಿಗಣಿ ಪ್ರದೇಶದಲ್ಲಿ ಚಿರತೆ ಕಾಣಿಸಿಕೊಂಡಿತ್ತು, ಅದೂ ಇದೂ ಒಂದೇ ಚಿರತೆ ಇರಬಹುದು ಎಂದು ಅರಣ್ಯಾಧಿಕಾರಿಗಳು ಶಂಕಿಸಿದ್ದಾರೆ.
Leopard spotted in Bengaluru's IT Hub, Causes panic among workers#ViralVideo #LeopardinITHub #ITHub #Bengaluru #LeopardInBengaluru pic.twitter.com/1iQybEjvof
— Business Today (@business_today) September 17, 2024
ಮುನ್ನೆಚ್ಚರಿಕೆ ಕ್ರಮ
ಚಿರತೆ ಕಾಣಿಸಿಕೊಂಡ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎನ್ಟಿಟಿಎಫ್ನ ಪ್ರಾಂಶುಪಾಲ ಸುನಿಲ್ ಜೋಶಿ, "ಕಾಂಪೌಂಡ್ ಗೋಡೆ ಬಳಿ ಚಿರತೆ ಇರುವ ದೃಶ್ಯಗಳನ್ನು ನಾವು ಟೋಲ್ ಗೇಟ್ ಕ್ಯಾಮೆರಾದಿಂದ ಪಡೆದುಕೊಂಡಿದ್ದೇವೆ. ಕ್ಯಾಂಪಸ್ನಲ್ಲಿ ಮುನ್ನೆಚ್ಚರಿಕೆಯಾಗಿ ತಪಾಸಣೆ ನಡೆಸಿದ್ದೇವೆ. ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಿ ಚಿರತೆ ಇಲ್ಲ ಎಂದು ಹೇಳಿದ್ದಾರೆ. ಕ್ಯಾಮೆರಾ ದೃಶ್ಯಗಳು ಅಲ್ಲಿ ಚಿರತೆ ಮುಂದೆ ಹೋಗಿದೆ ಎನ್ನುವುದನ್ನು ತೋರಿಸಿದೆ. ತರಬೇತಿ ಕೇಂದ್ರವಾಗಿರುವ ಕಾರಣ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ" ಎಂದು ಹೇಳಿದರು.
ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಿದ್ದು, ಯಾವುದೇ ಕ್ಯಾಮೆರಾದಲ್ಲಿ ಚಿರತೆ ಓಡಾಟ ಕಾಣಿಸಿಲ್ಲ. ಕಾಂಪೌಂಡ್ ಪಕ್ಕದಲ್ಲಿರುವ ರಸ್ತೆಯ ಬಳಿ ಮಾತ್ರ ಚಿರತೆ ಹೋಗಿರುವುದು ಸೆರೆಯಾಗಿದೆ. ಆದರೆ ಈಗ ಎಲ್ಲಿದೆ ಎನ್ನುವುದು ತಿಳಿದುಬಂದಿಲ್ಲ ಎಂದರು.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications