ಬೆಂಗಳೂರಿಗರು ಜಾತ್ಯತೀತರಾಗುವುದು ಇನ್ನೂ ಬಹುದೂರ!
ಬೆಂಗಳೂರು, ಡಿಸೆಂಬರ್, 18: ಇಡೀ ಪ್ರಪಂಚವೇ ಒಂದು ಮನೆಯಾಗಿದೆ. ಜಾತಿ ಪದ್ಧತಿ ಅಳಿಯುತ್ತಿದೆ. ಬದಲಾವಣೆ ಗಾಳಿ ಬೀಸುತ್ತಿದೆ.. ಅಂತರ್ಜಾತಿ ವಿವಾಹ ಸಾಮಾನ್ಯವಾಗಿದೆ.. ಎಂದು ಹೀಗೆಲ್ಲ ನಾವು ಹೇಳುತ್ತೇವೆ, ವೇದಿಕೆಯಲ್ಲಿ ಭಾಷಣ ಮಾಡುವವರ ಬಾಯಲ್ಲೂ ಒಂದೆಲ್ಲಾ ಒಂದು ಸಾರಿ ಉಲ್ಲೇಖವಾಗುತ್ತಲೇ ಇರುತ್ತದೆ.
ಆದರೆ ನಿಜಕ್ಕೂ ಪರಿಸ್ಥಿತಿ ಹೇಗಿದೆ? ಇದು ನಮ್ಮ ಮುಂದಿರುವ ಪ್ರಶ್ನೆ. ಇದನ್ನು ಇಟ್ಟುಕೊಂಡೆ ಬೆಂಗಳೂರಿಗರ ಮೇಲೊಂದು ಸಮೀಕ್ಷೆಯೊಂದನ್ನು ಮಾಡಲಾಗಿದೆ. ನ್ಯಾಶನಲ್ ಇಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಸ್ಟಡೀಸ್ ಮಾಡಿರುವ ಸಮೀಕ್ಷೆ ಪ್ರಕಾರ ಹೊರಗಿನ ಜಾತಿಯವರನ್ನು ಮದುವೆಯಾಗುತ್ತಿರುವವರ ಸಂಖ್ಯೆ ಕೇವಲ ಶೇ. 1.2![ಏಳು ಜನ್ಮಗಳ ಬಂಧ ಬೆಸೆಯುವ 'ಸಪ್ತಪದಿ'ಯ ಮಹತ್ವ]

9, 504 ಜನರ ಮೇಲೆ ಸಮೀಕ್ಷೆ ನಡೆಸಿ ಎನ್ ಐ ಎಎಸ್ ಈ ವರದಿಯನ್ನು ನೀಡಿದೆ. ಅಂತರ್ಜಾತಿ ವಿವಾಹವಾಗುತ್ತಿರುವವರಲ್ಲಿ ಬ್ರಾಹ್ಮಣರಿಗೆ ಮೊದಲ ಸ್ಥಾನ. ನಂತರದ್ದೂ ನಾಯ್ಕ್ ಸಮುದಾಯಕ್ಕೆ.[ಕನ್ಯತ್ವ ಕಳೆದುಕೊಂಡವಳನ್ನು ಮದುವೆಯಾಗಲು ರೆಡಿನಾ?]
ಹೆಚ್ಚಿದ ಸಂವಹನ, ತಂತ್ರಜ್ಞಾನ ಜಾತಿಗಳಲ್ಲಿ ಸಂಬಂಧಗಳನ್ನು ಮತ್ತಷ್ಟು ಬೆಸೆದಿದೆ. ಮದುವೆ ದಲ್ಲಾಳಿ ಕುರಿತ ವೆಬ್ ಸೈಟ್ ಗಳು ಪ್ರತಿದಿನ ಹುಟ್ಟಿಕೊಳ್ಳುತ್ತಿರುವುದೇ ಇದಕ್ಕೆ ಸ್ಪಷ್ಟ ಉದಾಹರಣೆ ಎಂದು ಸಮೀಕ್ಷೆ ನೇತೃತ್ವ ವಹಿಸಿದ್ದ ನರೇಂದ್ರ ಪಾಣಿ ತಿಳಿಸುತ್ತಾರೆ.[ಭಾರತದ ಹೆಣ್ಣು ಮಕ್ಕಳ ವ್ಯಥೆ ಬಿಚ್ಚಿಡುವ ವರದಿಯಲ್ಲೇನಿದೆ?]
ಭಾಷೆ, ಪ್ರದೇಶ, ಒಳ ಜಾತಿಗೆ ಸಂಬಂಧಿಸಿಯೇ ಮದುವೆ ಮಾತುಕತೆಯನ್ನು ಮುಂದೆ ಇಡುತ್ತಿದ್ದಾರೆ ಎಂಬ ಸಂಗತಿಯೂ ಬಹಿರಂಗವಾಗಿದೆ. ಸಮೀಕ್ಷೆಗೆ ಒಳಪಟ್ಟ ಶೇ. 1 ರಷ್ಟು ಜನ ತಮ್ಮ ಜಾತಿ ಬಹಿರಂಗ ಮಾಡಲು ಹಿಂಜರಿದರು. ನಾವು 163 ಜಾತಿಗಳನ್ನು ಸಮೀಕ್ಷೆ ವೇಳೆ ಲೆಕ್ಕ ಹಾಕಿದೆವು ಎಂದು ಪಾಣಿ ಮಾಹಿತಿ ನೀಡಿದ್ದಾರೆ.
ಸರ್ಕಾರೇತರ ಪಾಲಿಸಿಗಳನ್ನು ನಿರ್ಧರಿಸುವಲ್ಲಿ ಮೇಲ್ಜಾತಿಯ ಪ್ರಭಾವ ಬಳಕೆಯಾಗುತ್ತಿದೆ. ಐಟಿ ಬಿಟಿಯವರು ಮುಕ್ತವಾಗಿ ಜಾತಿ ಹಂಚಿಕೊಂಡರೆ ಮಧ್ಯಮ ವರ್ಗದ ಕೆಲ ಮಂದಿ ಹಿಂಜರಿದರು ಎಂದು ಸಮೀಕ್ಷಾ ವರದಿ ತಿಳಿಸಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications