ಸ್ವಂತ ವಾಹನ ಬಿಟ್ಟು ಸಮೂಹ ಸಾರಿಗೆ ಮೊರೆ ಹೋದ ಅಧಿಕಾರಿಗಳು
ಬೆಂಗಳೂರು, ಮಾರ್ಚ್ 12: ಎರಡನೇ ವಿರಳ ಸಂಚಾರ ದಿನವನ್ನು ಭಾನುವಾರ ಆಚರಿಸಲಾಯಿತು, ಸಚಿವರು ಸೇರಿದಂತೆ ಸರ್ಕಾರಿ ಅಧಿಕಾರಿಗಳೆಲ್ಲರೂ ತಮ್ಮ ಸ್ವಂತ ವಾಹನಗಳಲ್ಲಿ ಬರದೆ ಬಿಎಂಟಿಸಿ ಬಸ್, ಎಲೆಕ್ಟ್ರಿಕ್ ಆಟೋದ ಮೊರೆ ಹೋದರು. ಆದರೆ ಸಾರ್ವಜನಿಕರಿಗೆ ಮಾಹಿತಿ ಕೊರತೆಯಿಂದಾಗಿ ಎಂದಿನಂತೆಯೇ ತಮ್ಮ ವಾಹನಗಳಲ್ಲಿ ಸಂಚರಿಸುತ್ತಿದ್ದ ದೃಶ್ಯಗಳು ಕಂಡುಬಂತು.
ನಗರದಲ್ಲಿ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ವಿರಳ ಸಂಚಾರ ದಿನವನ್ನು ಪ್ರಾರಂಭಿಸಿದೆ. ಪ್ರತಿ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ಎರಡನೇ ಬಾರಿಗೆ ಭಾನುವಾರ ವಿರಳ ಸಂಚಾರ ದಿನವನ್ನು ಆಚರಿಸಲಾಯಿತು.
ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ಎಲೆಕ್ಟ್ರಿಕ್ ಆಟೋ ಹಾಗೂ ಎಲೆಕ್ಟರಿಕ್ ದ್ವಿಚಕ್ರ ವಾಹನಗಳದ್ದೇ ಸದ್ದು, ರಜೆಯ ಮಜಾ ಅನುಭವಿಸಲು ಬಂದಿದ್ದ ರಾಜಧಾನಿ ಮಂದಿ ಹೊಗೆ ಹಾಗೂ ಶಬ್ದ ರಹಿತ ಎಲೆಕ್ಟ್ರಿಕ್ ವಾಹನ ಚಲಾಯಿಸಿ ಪುಳಕಿತರಾದರು.

ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಕಬ್ಬನ್ ಪಾರ್ಕ್ ನ ಬ್ಯಾಂಡ್ ಸ್ಟ್ಯಾಂಡ್ ನಲ್ಲಿ ಆಯೋಜಿಸಿದ್ದ ವಿರಳ ಸಂಚಾರ ದಿನದಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನವೂ ನಡೆಯಿತು.
ವಾಯು ಮಾಲಿನ್ಯ ಮತ್ತು ವಾಹನ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನೆಲೆಯಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ಖಾಸಗಿ ವಾಹನ ಬಳಕೆ ಬಿಟ್ಟು ಸಮೂಹ ಸಾರಿಗೆ ಬಳಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು. ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಸ್ವತಃ ಎಲೆಕ್ಟ್ರಿಕ್ ಆಟೋದಲ್ಲಿ ಕಾರ್ಯಕ್ರಮಕ್ಕೆ ಬಂದು ಗಮನ ಸೆಳೆದರು. ಸಾರಿಗೆ ಇಲಾಖೆ ಅಯುಕ್ತ ಬಿ. ದಯಾನಂದ ಸೈಕಲ್ ನಲ್ಲಿ ಬರುವ ಮೂಲಕ ವಿರಳ ಸಂಚಾರ ದಿನ ಆಚರಿಸಿದರು,
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಿಎಂಟಿಸಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಕೂಡ ಸರ್ಕಾರಿ ವಾಹನದ ಬದಲು ಬಿಎಂಟಿಸಿ ಬಸ್ ನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಳಿಕ ಅಧಿಕಾರಿಗಳು, ಸಾರ್ವಜನಿಕರು ಎಲೆಕ್ಟ್ರಿಕ್ ಆಟೋ ಹಾಗೂ ದ್ವಿಚಕ್ರ ವಾಹನ ಚಲಾಯಿಸಿ ಹೊಸ ಅನುಭವ ಪಡೆದರು.
-
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ












Click it and Unblock the Notifications