ಸ್ವಂತ ವಾಹನ ಬಿಟ್ಟು ಸಮೂಹ ಸಾರಿಗೆ ಮೊರೆ ಹೋದ ಅಧಿಕಾರಿಗಳು
ಬೆಂಗಳೂರು, ಮಾರ್ಚ್ 12: ಎರಡನೇ ವಿರಳ ಸಂಚಾರ ದಿನವನ್ನು ಭಾನುವಾರ ಆಚರಿಸಲಾಯಿತು, ಸಚಿವರು ಸೇರಿದಂತೆ ಸರ್ಕಾರಿ ಅಧಿಕಾರಿಗಳೆಲ್ಲರೂ ತಮ್ಮ ಸ್ವಂತ ವಾಹನಗಳಲ್ಲಿ ಬರದೆ ಬಿಎಂಟಿಸಿ ಬಸ್, ಎಲೆಕ್ಟ್ರಿಕ್ ಆಟೋದ ಮೊರೆ ಹೋದರು. ಆದರೆ ಸಾರ್ವಜನಿಕರಿಗೆ ಮಾಹಿತಿ ಕೊರತೆಯಿಂದಾಗಿ ಎಂದಿನಂತೆಯೇ ತಮ್ಮ ವಾಹನಗಳಲ್ಲಿ ಸಂಚರಿಸುತ್ತಿದ್ದ ದೃಶ್ಯಗಳು ಕಂಡುಬಂತು.
ನಗರದಲ್ಲಿ ವಾಯುಮಾಲಿನ್ಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ವಿರಳ ಸಂಚಾರ ದಿನವನ್ನು ಪ್ರಾರಂಭಿಸಿದೆ. ಪ್ರತಿ ತಿಂಗಳ ಎರಡನೇ ಭಾನುವಾರ ಆಚರಿಸಲಾಗುತ್ತದೆ. ಎರಡನೇ ಬಾರಿಗೆ ಭಾನುವಾರ ವಿರಳ ಸಂಚಾರ ದಿನವನ್ನು ಆಚರಿಸಲಾಯಿತು.
ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ಎಲೆಕ್ಟ್ರಿಕ್ ಆಟೋ ಹಾಗೂ ಎಲೆಕ್ಟರಿಕ್ ದ್ವಿಚಕ್ರ ವಾಹನಗಳದ್ದೇ ಸದ್ದು, ರಜೆಯ ಮಜಾ ಅನುಭವಿಸಲು ಬಂದಿದ್ದ ರಾಜಧಾನಿ ಮಂದಿ ಹೊಗೆ ಹಾಗೂ ಶಬ್ದ ರಹಿತ ಎಲೆಕ್ಟ್ರಿಕ್ ವಾಹನ ಚಲಾಯಿಸಿ ಪುಳಕಿತರಾದರು.

ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಯೋಗದಲ್ಲಿ ಕಬ್ಬನ್ ಪಾರ್ಕ್ ನ ಬ್ಯಾಂಡ್ ಸ್ಟ್ಯಾಂಡ್ ನಲ್ಲಿ ಆಯೋಜಿಸಿದ್ದ ವಿರಳ ಸಂಚಾರ ದಿನದಲ್ಲಿ ಎಲೆಕ್ಟ್ರಿಕ್ ವಾಹನಗಳ ಪ್ರದರ್ಶನವೂ ನಡೆಯಿತು.
ವಾಯು ಮಾಲಿನ್ಯ ಮತ್ತು ವಾಹನ ಸಂಚಾರ ದಟ್ಟಣೆ ತಗ್ಗಿಸುವ ಹಿನ್ನೆಲೆಯಲ್ಲಿ ಪ್ರತಿ ತಿಂಗಳ 2ನೇ ಭಾನುವಾರ ಖಾಸಗಿ ವಾಹನ ಬಳಕೆ ಬಿಟ್ಟು ಸಮೂಹ ಸಾರಿಗೆ ಬಳಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಯಿತು. ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಸ್ವತಃ ಎಲೆಕ್ಟ್ರಿಕ್ ಆಟೋದಲ್ಲಿ ಕಾರ್ಯಕ್ರಮಕ್ಕೆ ಬಂದು ಗಮನ ಸೆಳೆದರು. ಸಾರಿಗೆ ಇಲಾಖೆ ಅಯುಕ್ತ ಬಿ. ದಯಾನಂದ ಸೈಕಲ್ ನಲ್ಲಿ ಬರುವ ಮೂಲಕ ವಿರಳ ಸಂಚಾರ ದಿನ ಆಚರಿಸಿದರು,
ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಿಎಂಟಿಸಿ ಹಾಗೂ ಸಾರಿಗೆ ಇಲಾಖೆ ಅಧಿಕಾರಿಗಳು ಕೂಡ ಸರ್ಕಾರಿ ವಾಹನದ ಬದಲು ಬಿಎಂಟಿಸಿ ಬಸ್ ನಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬಳಿಕ ಅಧಿಕಾರಿಗಳು, ಸಾರ್ವಜನಿಕರು ಎಲೆಕ್ಟ್ರಿಕ್ ಆಟೋ ಹಾಗೂ ದ್ವಿಚಕ್ರ ವಾಹನ ಚಲಾಯಿಸಿ ಹೊಸ ಅನುಭವ ಪಡೆದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications