ನೆರೆಗೆ ತತ್ತರಿಸಿದ ಉತ್ತರ ಕರ್ನಾಟಕದ ಪರ ದನಿ ಎತ್ತೋಣ ಬನ್ನಿ
ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿಗೆ ಪರಿಹಾರ ಧನ ಒದಗಿಸುವಲ್ಲಿ ಕೇಂದ್ರ ಸರ್ಕಾರ ತಾರತಮ್ಯ ನೀತಿ ಅನುಸರಿಸುತ್ತಿದೆ. ಕರ್ನಾಟಕ ಸರ್ಕಾರ ಈ ನಿಟ್ಟಿನಲ್ಲಿ ಕೇಂದ್ರದ ಮೇಲೆ ಒತ್ತಡ ಹೇರುವಂತೆ ಮಾಡಲು ನಾಗರಿಕರು ಬೀದಿಗಿಳಿದು ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ನಿಟ್ಟಿನಲ್ಲಿ ಶಾಂತಿಯುತ ಪ್ರತಿಭಟನೆಯನ್ನು ಬೆಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಭಾನುವಾರ(ಸೆ.29)ದಂದು ಹಮ್ಮಿಕೊಳ್ಳಲಾಗಿದೆ.
ಕನ್ನಡಿಗರೆ, ನಿಮಗೆಲ್ಲ ತಿಳಿದಿರುವಂತೆ ಕರ್ನಾಟಕದ ಉತ್ತರ ಭಾಗ ಮುಂಗಾರಿನ ನೆರೆಗೆ ತತ್ತರಿಸಿ ಕೃಷ್ಣೆ, ಕಾಳಿ,ತುಂಗೆ, ಘಟಪ್ರಭಾ, ಮಲಪ್ರಭಾ ಮತ್ತು ಬೀಮಾ ತೀರದ ತಟದ ನಮ್ಮ ಜನರ ಬದುಕು ಅಕ್ಷರ ಸಹ ಬೀದಿಗೆ ಬಂದಿದೆ, ಪ್ರಕೃತಿಯ ರೌದ್ರ ಭೀಕರತೆಗೆ ಮನೆ, ಮಠ, ತೋಟ, ಗದ್ದೆ ,ಬೆಳೆ, ಶಾಲೆ ಕಾಲೇಜು, ಆಸ್ಪತ್ರೆ ಜೊತೆಗೆ ಅಲ್ಲಿಯ ಜನರ ನೆಮ್ಮದಿಯನ್ನ ನದಿಯ ನೆರೆ ಕೊಚ್ಚಿಕೊಂಡು ಹೋಗಿದೆ, ಒಂದು ಕಾಲದ ಶ್ರೀಮಂತ ಜನರು ಬಡ ಜನರು ಮಧ್ಯಮ ವರ್ಗ ಎನ್ನದೆ ಎಲ್ಲರೂ ತುತ್ತು ಅನ್ನಕ್ಕಾಗಿ ತಾತ್ವರ ಪಡುವಂತಾಗಿದೆ!
ಎಲ್ಲ ಜಾತಿ ಧರ್ಮದ ಜನರ ಬದುಕು ಅಲ್ಲಿ ಈಗ ಮೂರಾಬಟ್ಟೆಯಾಗಿದೆ, ಅವರೆಲ್ಲ ನಮ್ಮ ಜನರು ಕನ್ನಡ ಜನರು ನಮ್ಮ ಸಹೋದರರು .. ಆದರೆ ಇಲ್ಲಿಯವರೆಗೆ ಕೇಂದ್ರದ ಜೊತೆಗೆ ರಾಜ್ಯಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ, ಕೇಂದ್ರ ಸರ್ಕಾರ ಇಲ್ಲಿಯವರೆಗೆ ಪರಿಹಾರ ಬಿಡುಗಡೆ ಮಾಡಿಲ್ಲ ಅವರಿಗೆ ಕನಿಷ್ಠ ಧೈರ್ಯ ಕೊಡುತ್ತಿಲ್ಲ.

ಹೀಗಾಗಿ ಅಲ್ಲಿಯ ಜನ ದಿನದಿಂದ ದಿನಕ್ಕೆ ದೈರ್ಯ ಕಳೆದುಕೊಳ್ಳುತ್ತಿದ್ದಾರೆ. ಕೆಲ ಜನ ಆತ್ಮಹತ್ಯೆಯಂಥ ಕೆಲಸಕ್ಕೂ ಕೈ ಹಾಕುತ್ತಿದ್ದಾರೆ, ಈಥರದ ಕೃತ್ಯ ನಮ್ಮ ನೆಲದಲ್ಲಿ ಆಗುತ್ತಿರುವುದು ದುರಂತ. ಗೆಳೆಯರೆ ಹಾಗಂತ ನಾವು ಕೈಕಟ್ಟಿ ಕುಳಿತುಕೊಳ್ಳುವುದು ಹೇಡಿತನ ಬನ್ನಿ ಜೊತೆಯಾಗಿ ಒಂದಾಗಿ ಅವರಿಗೆ ಪರಿಹಾರ ಸಿಗುವರೆಗು ಪ್ರತಿಭಟಿಸೋಣ ಧರಣಿ ಮಾಡೋಣ ಸರ್ಕಾರದ ನಡೆಯನ್ನ ಖಂಡಿಸೋಣ ಬೇಗ ಪರಿಹಾರ ಕೊಡಿ ಎಂದು ಒತ್ತಾಯಿಸೋಣ ಬನ್ನಿ ಎಲ್ಲರು ಜೊತೆಗೂಡೋಣ ನಮ್ಮ ಸಹೋದರರ ಕಷ್ಟಗಳಿಗೆ ಒಂದಾಗಿ ಅವರ ಧ್ವನಿಗೆ ಧ್ವನಿಯಾಗೋಣ ಎಂದು ಶಿವಾನಂದ ಅವರು ಮನವಿ ಮಾಡಿಕೊಂಡಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications