ಬೆಂಗಳೂರಿನಲ್ಲಿ ಫುಟ್ಪಾತ್ ಮೇಲೆ ವಾಹನ ಚಲಾಯಿಸಿದವ್ರಿಗೆ ಇನ್ಮುಂದೆ ಐತಿ ಮಾರಿಹಬ್ಬ
ಬೆಂಗಳೂರು, ಫೆಬ್ರವರಿ, 03: ಬೆಂಗಳೂರಿನಲ್ಲಿ ಸಂಚಾರ ನಿಯಮಗಳ ಬಗ್ಗೆ ಪೊಲೀಸರು ಆಗಾಗ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಲಿರುತ್ತಾರೆ. ಆದರೂ ಕೆಲ ವಾಹನ ಸವಾರರು ನಿಯಮಗಳನ್ನು ಗಾಳಿಗೆ ತೂರಿ ಫುಟ್ಬಾತ್ ಮೇಲೆಯೇ ವಾಹನಗಳನ್ನು ಹತ್ತಿಸಿಕೊಂಡು ಹೋಗುವುದನ್ನು ಮುಂದುವರೆಸಿದ್ದಾರೆ. ಇದರಿಂದ ಪಾದಚಾರಿಗಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದೀಗ ಇದಕ್ಕೆಲ್ಲ ಕಡಿವಾಣ ಹಾಕಲು ಟ್ರಾಫಿಕ್ ಪೊಲೀಸರು ಕಟ್ಟಿನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ.
ಸಂಚಾರಿ ಪೊಲೀಸರು ವಾಹನ ಸವಾರರಿಗೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘನೆ ಮಾಡಬೇಡಿ. ಇದರಿಂದ ಪಾದಚಾರಿಗಳಿಗೆ ತೊಂದರೆಯಾಗುತ್ತದೆ ಎಂದು ಮನವಿ ಮಾಡಿಕೊಳ್ಳುತ್ತಲೇ ಇರುತ್ತಾರೆ. ಆದರೂ ಕೆಲ ವಾಹನ ಸವಾರರು ಇದನ್ನು ಉಲ್ಲಂಘಿಸಿ ವಾಹನಗಳನ್ನು ಫುಟ್ಬಾತ್ ಮೇಲೆಯೇ ಹತ್ತಿಸುತ್ತಿದ್ದಾರೆ. ಇದೀಗ ಇಂತವರ ವಿರುದ್ಧ ಸಂಚಾರಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಟ್ರಾಫಿಕ್ ಜಾಮ್ ಅಂತಾ ಫುಟ್ಪಾತ್ ಮೇಲೆಯೇ ಗಾಡಿ ಓಡಿಸುವವರ ವಿರುದ್ಧ ನೂತನ ಅಸ್ತ್ರ ಪ್ರಯೋಗಿಸಲು ಬೆಂಗಳೂರು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ.

ದಂಡಾಸ್ತ್ರ ಜಾರಿ ಮಾಡಿದರೂ, ಬಗ್ಗದ ವಾಹನ ಸವಾರರ ಪರವಾನಗಿ ಅಮಾನತು ಮಾಡಲು ಸಂಚಾರಿ ಪೊಲೀಸರು ನಿರ್ಧರಿಸಿದ್ದಾರೆ. ಪಾದಚಾರಿಗಳ ಸುರಕ್ಷತೆ ದೃಷ್ಠಿಯಿಂದ ಸಂಚಾರಿ ಪೊಲೀಸರು ಈ ನಿಯಮ ಜಾರಿ ಮಾಡಿದ್ದಾರೆ. ಈ ಹಿಂದೆ ಫುಟಪಾತ್ ಮೇಲೆ ವಾಹನಗಳನ್ನು ಓಡಿಸಿದರೆ ಸಂಚಾರಿ ಪೊಲೀಸರು ದಂಡ ಹಾಕುತ್ತಿದ್ದರು. ದಂಡ ವಿಧಿಸಿದರೂ ವಾಹನ ಸವಾರರು ಮಾತ್ರ ಕ್ಯಾರೆ ಅನ್ನದೆ, ಮತ್ತೆ ತಮ್ಮ ವಾಹನಗಳನ್ನು ಫುಟ್ಪಾತ್ ಮೇಲೆ ಓಡಿಸುತ್ತಿರವುದು ಬೆಳಕಿಗೆ ಬಂದಿದೆ.
ಆದ್ದರಿಂದ ಬೆಂಗಳೂರು ಸಂಚಾರಿ ಪೊಲೀಸ್ ಹಿರಿಯ ಅಧಿಕಾರಿಗಳು ಸಭೆ ನಡೆಸಿ, ಸಂಚಾರ ನಿಯಮ ಉಲ್ಲಂಘಿಸಿ ತಮ್ಮ ವಾಹನಗಳನ್ನು ಫುಟ್ಪಾತ್ ಮೇಲೆ ಹತ್ತಿಸುವವರ ವಾಹನ ಚಾಲನಾ ಪರವಾನಗಿಯನ್ನು ರದ್ದು ಮಾಲು ನಿರ್ಧರಿಸಿದ್ದಾರೆ. ಮೊದಲ ಬಾರಿಗೆ ದಂಡ ಹಾಕಲಾಗುತ್ತದೆ. ಮತ್ತೆ ಮತ್ತೆ ಸಿಕ್ಕಿಬಿದ್ದರೇ, ಅಂತಹವರ ಲೈಸೆನ್ಸ್ ಅಮಾನತು ಮಾಡುವಂತೆ ಸಂಚಾರಿ ಪೊಲೀಸರು ಶಿಪಾರಸ್ಸು ಮಾಡುತ್ತಾರೆ. ಈ ಹಿನ್ನೆಲೆ ಇನ್ಮುಂದೆ ಫುಟ್ಪಾತ್ ಮೇಲೆ ವಾಹನಗಳನ್ನು ಓಡಿಸುವ ಮುನ್ನ ಯೋಚಿಸಿ ಎಂದು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಡ್ರಂಕ್ & ಡ್ರೈವ್ ವಿರುದ್ಧ ಸಂಚಾರಿ ಪೊಲೀಸರ ಕಾರ್ಯಾಚರಣೆ ಮುಂದುವರೆದಿದ್ದು, ಜನವರಿ 27ರಿಂದ ಫೆಬ್ರವರಿ 2ರವರೆಗೆ ತಪಾಸಣೆಯಲ್ಲಿ 80 ಲಕ್ಷ ರೂಪಾಯಿ ದಂಡ ಸಂಗ್ರಹಿಸಲಾಗಿದೆ. ಬೆಂಗಳೂರಿನ 50 ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ತಪಾಸಣೆ ನಡೆದಿದೆ. ಕಳೆದ 1 ವಾರದಲ್ಲಿ 800 ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಸಂಚಾರಿ ಜಂಟಿ ಪೊಲೀಸ್ ಆಯುಕ್ತ ಎಂ.ಎನ್.ಅನುಚೇತ್ ಮಾಹಿತಿ ನೀಡಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications