ಈ ವಾರ ಬೆಂಗಳೂರಿಗೆ ಅಲ್ಪ ಮಳೆ, ವಾತಾವರಣವೂ ಕೂಲ್: IMD ಮುನ್ಸೂಚನೆ
ಬೆಂಗಳೂರು, ಸೆಪ್ಟೆಂಬರ್ 12: ಏರುತ್ತಿರುವ ತಾಪಮಾನ ಮತ್ತು ನೀರಿನ ಕೊರತೆಯಿಂದ ಈ ವಾರ ಬೆಂಗಳೂರಿಗೆ ಪರಿಹಾರ ದೊರೆಯುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಲಘು ಮಳೆಯ ಮುನ್ಸೂಚನೆ ನೀಡಿದೆ. ಐಎಂಡಿ ಮುನ್ಸೂಚನೆಯಲ್ಲಿ ಶುಕ್ರವಾರದವರೆಗೆ ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಲಘು ಮಳೆ ಬರಲಿದೆ ಎಂದು ಹೇಳಿದೆ.
ಹವಾಮಾನ ಏಜೆನ್ಸಿಯು ವಾರಾಂತ್ಯದಲ್ಲಿ ಬಲವಾದ ಮೇಲ್ಮೈ ಗಾಳಿ ಮತ್ತು ಲಘು ಮಳೆ ಸುರಿಯಲಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸೆಪ್ಟೆಂಬರ್ 13 ರವರೆಗೆ ಸುಮಾರು 29 ಮತ್ತು 21 ಡಿಗ್ರಿ ಸೆಲ್ಸಿಯಸ್ ಆಗುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.

ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಹವಾಮಾನದಲ್ಲಿ ಬದಲಾವಣೆಯಾಗಿದೆ. ಬೆಂಗಳೂರು ಈ ವಾರ ಚಳಿಯ ಮುಂಜಾನೆ ಮತ್ತು ಸಂಜೆಗೆ ಸಾಕ್ಷಿಯಾಗಲಿದೆ ಎಂದು ಐಎಂಡಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಮಾನ್ಸೂನ್, ಬೆಂಗಳೂರು ಸೇರಿದಂತೆ ಕರ್ನಾಟಕದ ಇತರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಕೊರತೆ ಕಂಡುಬಂದಿದೆ. ಇದರಿಂದ ಕಾವೇರಿ ನದಿಯ ಪ್ರಮುಖ ಜಲಾನಯನ ಜಿಲ್ಲೆ ಕೊಡಗಿನಲ್ಲಿ ನೀರಿನ ಕೊರತೆ ಉಂಟಾಗಿದೆ.
ಬೆಂಗಳೂರಿನಲ್ಲಿ ಸೆಪ್ಟೆಂಬರ್ 1 ರಿಂದ 7 ರವರೆಗೆ ಭಾರೀ ಮಳೆಯಾಯಿತು. ನಗರದಲ್ಲಿ ಮಳೆಯ ನಿರೀಕ್ಷಿತ ಸರಾಸರಿ 36 ಮಿಮೀ ನಷ್ಟು ಸುರಿದಿದೆ. ಇದು ಶೇಕಡಾ 128 ರಷ್ಟು ಅಧಿಕವಾಗಿದೆ ಎಂದು ಸೂಚಿಸುತ್ತದೆ. ಜೂನ್ನಿಂದ ಆಗಸ್ಟ್ವರೆಗೆ, ಬೆಂಗಳೂರು ನಗರವು ನಿರೀಕ್ಷಿತ 324 ಮಿಮೀ ಪೈಕಿ 251 ಮಿಮೀ ಮಳೆಯಾಗಿದ್ದು, ಮಳೆಯ ಕೊರತೆಯನ್ನು ಉಂಟುಮಾಡಿದೆ.
ಇದಲ್ಲದೆ, ಕರ್ನಾಟಕ ಸರ್ಕಾರವು ಮಂಗಳವಾರ ಮತ್ತು ಬುಧವಾರದಂದು ಬರ ಮತ್ತು ಅಭಿವೃದ್ಧಿ ವಿಷಯದ ಬಗ್ಗೆ ಚರ್ಚಿಸಲು ಸಭೆ ನಡೆಸಲಿದೆ. ಸಭೆಯಲ್ಲಿ ಎಲ್ಲ ಹಿರಿಯ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಬರಗಾಲದ ವಿಷಯದ ಕುರಿತು, ಪರಿಸ್ಥಿತಿಯ ಸ್ಪಷ್ಟ ಚಿತ್ರಣವನ್ನು ಪಡೆಯಲು ಸರ್ಕಾರ ಸೆಪ್ಟೆಂಬರ್ ಅಂತ್ಯದವರೆಗೆ ಕಾಯಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದಲ್ಲಿನ ಮಳೆ ಕೊರತೆಯನ್ನು ಪರಿಗಣಿಸಿ, ರೈತ ಸಮುದಾಯಕ್ಕೆ ಸಹಾಯ ಮಾಡಲು ಮಾರ್ಗಸೂಚಿಗಳು ಮತ್ತು ಮಾನದಂಡಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.












Click it and Unblock the Notifications