Bengaluru Weather: ನಗರದಲ್ಲಿ ಭಾನುವಾರ ತಂಪೆರೆದ ಮಳೆ, ಜೂನ್ 11ರವರೆಗೆ ಮಳೆ ಮುನ್ಸೂಚನೆ
ಬೆಂಗಳೂರು, ಜೂನ್ 08: ರಾಜಧಾನಿ ಬೆಂಗಳೂರಿನಲ್ಲಿ ಕೆಲವು ದಿನ ಮರೆಯಾಗಿದ್ದ ಮಳೆ ಮತ್ತೆ ಅಬ್ಬರಿಸಲು ಶುರು ಮಾಡಿದೆ. ಭಾನುವಾರ ಮಧ್ಯಾಹ್ನವೇ ಇಳಿ ಸಂಜೆಯ ವಾತಾವರಣ ನಿರ್ಮಾಣವಾಯಿತು. ನೋಡು ನೋಡುತ್ತಿದ್ದಂತೆ ಜೋರು ಮಳೆ ಸುರಿಯಿತು. ನಗರದ ವಿವಿಧ ಪ್ರದೇಶಗಳಲ್ಲಿ ಭಾನುವಾರದ ಮೋಜು ಮಸ್ತಿಗೆ, ಹೊರಾಂಗಣ ಚುವಟಿಕೆಗೆ ಮುಂಗಾರು ಮಳೆ ಬ್ರೇಕ್ ನೀಡಿತು. ಬೀದಿ ವ್ಯಾಪಾರಿಗಳಿಗೆ ಕಿರಿ ಕಿರಿ ಉಂಟು ಮಾಡಿತು.
ನಗರದ ಕೋರಮಂಗಲ, ಬಾಣಸವಾಡಿ, ಹೆಬ್ಬಾಳ, ಎಲೆಕ್ಟ್ರಾನಿಕ್ ಸಿಟಿ, ಲಾಲ್ ಬಾಗ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಸುಮಾರು 20 ನಿಮಿಷಗಳ ಕಾಲ ಜೋರು ಮಳೆ ಬಂದಿದೆ. ಶಂಕರಮಠ, ಚಾಮರಾಜಪೇಟೆ, ಮಹಾದೇವಪುರ, ಬೆಳ್ಳಂದೂರು, ಹೊರಮಾವು ಸೇರಿದಂತೆ ಕೆಲವು ಕಡೆಗಳಲ್ಲಿ ಹಗುರ ಮಳೆ ಆಯಿತು. ನಗರವಾಸಿಗಳು ಮಧ್ಯಾಹ್ನ ಕೊಡೆ ಹಿಡಿದು ಓಡಾಡಬೇಕಾಯಿತು.

ಬೆಂಗಳೂರಿಗೆ ಭಾರೀ ಮಳೆ ಮುನ್ಸೂಚನೆ ಇದಿಯಾ?
ಇಂದಿನಿಂದ (ಜೂನ್ 08) ಜೂನ್ 11ರವರೆಗೆ ಲಘು ಮಳೆ ಇಲ್ಲವೇ ತುಂತುರುವಿನಿಂದ ಹಗುರ ಮಳೆ ಆಗುವ ನಿರೀಕ್ಷೆಗಳು ಇವೆ. ತಾಪಮಾನ ಕೊಂಚ ಹೆಚ್ಚಾಗಿ ಇರುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಕರ್ನಾಟಕ ಕೇಂದ್ರವು ಮುನ್ಸೂಚನೆ ನೀಡಿದೆ. ಮುಂದಿನ ಮೂರು ದಿನ ನಗರದ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಕಂಡು ಬರಲಿದೆ. ಈ ವೇಳೆ ಆಗಾಗ ಮಬ್ಬು ವಾತಾವರಣ ಸೃಷ್ಟಿಯಾಗುವುದು, ಕೆಲವು ಬಡಾವಣೆಗಳ ಅಲ್ಲಲ್ಲಿ ಹಗುರ ಮಳೆ ಆಗುವ ಸಂಭವವಿದೆ. ಇದರ ಹೊರತು ಬೆಂಗಳೂರಿಗೆ ಭಾರೀ ಮಳೆ ಮುನ್ಸೂಚನೆ ಇಲ್ಲ ಎಂದು ಐಎಂಡಿ ಮುನ್ಸೂಚನೆ ಸ್ಪಷ್ಟಪಡಿಸಿದೆ.
ನಗರಾದ್ಯಂತ ತಂಪು ವಾತಾವರಣ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮುಂದಿನ ಒಂದೆರಡು ದಿನ ತುಂತುರು ಮಳೆ ಸಂಭವವಿದೆ. ಕಳೆದೊಂದು ವಾರದಿಂದ ಬೆಂಗಳೂರು ಸೇರಿದಂತೆ ನಾಡಿನಾದ್ಯಂತ ಮತ್ತೆ ಬೇಸಿಗೆ ಆರಂಭವಾಯಿತೇನೋ ಎಂಬಂತಹ ವಾತಾವರಣ ನಿರ್ಮಾಣವಾಗಿತ್ತು. ಭಾನುವಾರ ಬಂದ ಮಳೆಗೆ ಇಳೆ ತಂಪಾಗಿದೆ. ತಾಪಮಾನ ಕಡಿಮೆ ಆಗಿ, ತಂಪು ಗಾಳಿ ಬೀಸತೊಡಗಿದೆ. ಬೆಂಗಳೂರು ಹೊರತಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ವಾರ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯ ಭಾನುವಾರದ ಮುನ್ಸೂಚನೆ ಖಚಿತಪಡಿಸಿದೆ.
ಇಂದು ಅಧಿಕ ಮಳೆ ಆಗಿದ್ದೆಲ್ಲಿ?
ಬಿಬಿಎಂಪಿ ವ್ಯಾಪ್ತಿಯ ಪೂರ್ವ ವಲಯ ವ್ಯಾಪ್ತಿಯಗೆ ಬರುವ ಕೋರಮಂಗಳದಲ್ಲಿ ಭಾನುವಾರ ಜಿಟಿ ಜಿಟಿ ಮಳೆ ಮುಂದುವರಿದಿದೆ. ಸಂಜೆ 04 ಗಂಟೆ ಹೊತ್ತಿಗೆ 2.5 ಮಿಲಿ ಮೀಟರ್ ಮಳೆ ದಾಖಲಾಗಿದೆ. ಉಳಿದಂತೆ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯ ಒಂದೆಡೆರು ಕಡೆ 1 ಮಿಲಿ ಮೀಟರ್ ಮಳೆ ಆಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ತಿಳಿಸಿದೆ.
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications