ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲಿಂಗಾಯಿತ ಶ್ರೀಗಳಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ

|
Google Oneindia Kannada News

ಬೆಂಗಳೂರು, ಮೇ 26: ಲಿಂಗಾಯಿತ ಶ್ರೀಗಳಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿದೆ. ಇಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಶ್ರೀಗಳು ಚೆಕ್ ನೀಡಿದ್ದಾರೆ.

ಕೂಡಲ ಸಂಗಮದ ಬಸವ ಜಯ ಮೃತ್ಯಂಜಯ ಸ್ವಾಮೀಜಿ, ಇಮ್ಮಡಿ ಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮಠಾಧೀಶರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು. ತಮ್ಮ ಮಠಗಳಿಂದ ಕೊರೊನಾ ಹೋರಾಟಕ್ಕೆ ಸಹಾಯ ಆಗುವಂತೆ ಪರಿಹಾರ ನಿಧಿಗೆ ಹಣ ನೀಡಿದ್ದಾರೆ.

ಕೊರೊನಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇದುವರೆಗೆ ಹರಿದು ಬಂದ ದೇಣಿಗೆಕೊರೊನಾ: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಇದುವರೆಗೆ ಹರಿದು ಬಂದ ದೇಣಿಗೆ

ಈಗಾಗಲೇ ಅನೇಕ ಮಠಗಳು ಕೊರೊನಾವೈರಸ್ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡುವ ಮೂಲಕ ಸರ್ಕಾರ ಜೊತೆಗೆ ಕೈಜೋಡಿಸಿವೆ. ಶ್ರೀ ಸಿದ್ಧಗಂಗಾ ಮಠದಿಂದ 50 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಕೂಡ 50 ಲಕ್ಷ ರೂಪಾಯಿ ಪರಿಹಾರ ನಿಧಿಗೆ ನೀಡಿದೆ. ಸುತ್ತೂರು ಮಠವೂ 50 ಲಕ್ಷವನ್ನು ದೇಣಿಗೆ ಕೊಟ್ಟಿದೆ.

Lingayat Seers handover a cheque to CM BS Yediyurappa for Covid Relief Fund

ಉಳಿದಂತೆ, ಮೂರು ಸಾವಿರ ಮಠ, ಶ್ರವಣಬೆಳಗೊಳ ಜೈನ ಮಠ ಹೀಗೆ ಸಾಕಷ್ಟು ಮಠಗಳು ಪರಿಹಾರ ನಿಧಿಗೆ ಹಣ ನೀಡಿವೆ.

ಅಂದಹಾಗೆ, ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು 2000 ಗಡಿ ದಾಟಿವೆ. ನಿನ್ನೆ ಒಂದೇ ದಿನ 93 ಮಂದಿಗೆ ಕೊರೊನಾ ಸೋಂಕು ತಗುಲಿದೆ . ಭಾರತದಲ್ಲಿ ಒಟ್ಟು 1,38,845 ಕೊರೊನಾ ಸೋಂಕಿತ ಪ್ರಕರಣಗಳಾಗಿವೆ.

English summary
Kudala sangama jaya mrityunjaya swamiji and other lingayat seers handover a cheque to CM BS Yediyurappa for Covid Relief Fund.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X