ಕಂಬಾರರ ಜೀವನಾನುಭವ ಮತ್ತು ಸಾಹಿತ್ಯ ಕುರಿತು ಸಂವಾದ
ಬೆಂಗಳೂರು, ಮೇ 09: ಲೋಕಚಚರಿತ ಸಾಂಸ್ಕೃತಿಕ ಬಳಗವು ನಾಲ್ಕು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಮುದಾಯ ಕೂಟವನ್ನು ಮೇ 13ರಂದು ಮಲ್ಲೇಶ್ವರದ ಗಾಂಧಿ ಸಾಹಿತ್ಯ ಸಂಘದಲ್ಲಿ ಹಮ್ಮಿಕೊಂಡಿದೆ.
ಕಾರ್ಯಕ್ರಮದಕ್ಕೆ ಜ್ಞಾನಪೀಠ ಪುರಸ್ಕೃತರಾದ ಚಂದ್ರಶೇಖರ ಕಂಬಾರರು ಆಗಮಿಸಿ ತಮ್ಮ ಸಾಹಿತ್ಯಾನುಭವ ಹಂಚಿಕೊಳ್ಳಲಿದ್ದಾರೆ. ಕಾರ್ಯಕ್ರಮ ಬೆಳಗ್ಗೆ 10.30ರಿಂದ 1.30ರವರೆಗೆ ನಡೆಯಲಿದೆ. ಪ್ರತಿ ತಿಂಗಳ ಎರಡನೇ ಭಾನುವಾರದಂದು 'ಲೋಕಚರಿತ ಸಮುದಾಯ ಕೂಟ'ದಲ್ಲಿ ಆಸಕ್ತ ಎಲ್ಲರೂ ಸೇರಿ ಸಂವಾದ, ಮಾತುಕತೆ, ಚರ್ಚೆ ನಡೆಸುತ್ತೇವೆ. ಇದರಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮಾತ್ರವಲ್ಲದೇ, ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡ ವೃತ್ತಿ ನಿರತರೂ ಇರುತ್ತಾರೆ.
ವಿವಿಧ ಕ್ಷೇತ್ರಗಳಲ್ಲಿ ತೊಡಗಿಕೊಂಡಿರುವ ತಜ್ಞರನ್ನು ಕರೆಸಿ ಅವರೊಡನೆ ಸಂವಾದ-ಚರ್ಚೆ ಮಾಡುವುದು ಇದರ ಪ್ರಮುಖ ಉದ್ದೇಶ. ನಮ್ಮ ಹೊಸ ತಲೆಮಾರಿನವರು ಆಧುನಿಕ ವಿಕಾರಗಳಿಂದ ಹೊರಬರಲು ಇದು ಸಹಾಯಕವಾಗಿದೆ ಎನ್ನುವುದು ಲೋಕಚಿರತದ ಅಭಿಪ್ರಾಯ.

ಈವರೆಗೆ - ವಿವೇಕ ಶಾನಭಾಗ, ಕೆ.ವಿ. ಅಕ್ಷರ, ನಾಗೇಶ ಹೆಗಡೆ, ಎಂ.ಎಸ್. ಶ್ರೀರಾಮ್, ಜಿ.ಎಸ್. ಭಾಸ್ಕರ್, ರಾಧಾಕೃಷ್ಣನ್ ಅಯ್ಯರ್, ಬಿ.ಆರ್. ವಿಶ್ವನಾಥ್, ಚಿದಂಬರರಾವ್ ಜಂಬೆ, ಉಷಾ ಪಿ. ರೈ, ಜನಾರ್ಧನರೆಡ್ಡಿ, ವೀರನಾರಾಯಣ, ಕಲಾಗಂಗೋತ್ರಿ ಮಂಜು, ಸ್ವರೂಪ್ ಶರ್ಮನ್, ನಟರಾಜ ಹುಳಿಯಾರ್, ಮುಕುಂದರಾವ್, ಜೆ. ಶ್ರೀನಿವಾಸಮೂರ್ತಿ ಜಯಂತ ಕಾಯ್ಕಿಣಿ, ರಘುನಂದನ, ಪ್ರತಿಭಾ ನಂದಕುಮಾರ್, ಚಿರಂಜೀವ ಸಿಂಗ್, ಎಂ.ಎಸ್, ಆಶಾದೇವಿ, ಸುಂದರ್ ಸಾರುಕ್ಕೈ, ಬಿ.ವಿ. ರಾಜಾರಾಮ್, ಕೆ.ಎಸ್. ನಾಗರತ್ನಮ್ಮ, ಮಲ್ಲಿಕಾರ್ಜುನ ಕಟಗೋಳ, ಜೋಗಿ, ಶ್ರೀನಿವಾಸ ವೈದ್ಯ ತಮ್ಮ ಅನುಭವ ಹಂಚಿಕೊಂಡಿದ್ದಾರೆ.
ಕಥನಕುತೂಹಲ: ಪ್ರಸ್ತುತ ಲೋಕಚರಿತ ತಂಡವು ಕನ್ನಡದ ಪ್ರಮುಖ ಕಥೆಗಳನ್ನು ರಂಗ ಪ್ರಸ್ತುತಿಯ ರೂಪಕ್ಕೆ ತರುವ ಯೋಜನೆಯನ್ನು ಕಳೆದ ಆರೇಳು ತಿಂಗಳಿಂದ ನಡೆಸುತ್ತಿದೆ. ಕನ್ನಡದ ಹಲವಾರು ಕತೆಗಳನ್ನು ನಮ್ಮ ತಂಡದ ಸಮುದಾಯದೊಟ್ಟಿಗೆ ಓದಿ, ಅವುಗಳಲ್ಲಿ ಕೆಲವನ್ನು ಆಯ್ದು ರಂಗಪ್ರಸ್ತುತಿ'ಯ ರೂಪಕ್ಕೆ ತರುವ ಪ್ರಯತ್ನವನ್ನು ಮಾಡುತ್ತಿದೆ. . ಇದರ ಮೊದಲ ಗುಚ್ಛವೇ ಈಕಥನ ಕುತೂಹಲ - 1'. ಈ ಮೊದಲ ಕಂತಿನಲ್ಲಿ ಕನ್ನಡದ ಮೂರು ಪ್ರಮುಖ ಕತೆಗಳನ್ನು ರಂಗರೂಪಕ್ಕೆ ತರಲಾಯಿತು.
ಆ ಮೂರು ಕತೆಗಳ ವಿವರ ಇಂತಿದೆ- ಪೂರ್ಣಚಂದ್ರ ತೇಜಸ್ವಿಯವರ ಡೇರ್ ಡೆವಿಲ್ ಮುಸ್ತಾಫಾ' ನಿರ್ದೇಶನ: ಕುಮಾರರಾಜು ಎನ್, ನಟರಾಜ್ ಹುಳಿಯಾರ್ ಅವರ ದಾದಾ ಕ ಪಹಾಡ್' ನಿರ್ದೇಶನ: ಗಿರಿಧರ್ ಎಸ್., ಮೌನೇಶ ಬಡಿಗೇರ ಅವರ ಶಫಿ ಎಲೆಕ್ಟ್ರಿಕಲ್ಸ್' ನಿರ್ದೇಶನ: ನವೀನ್ ಆರ್.ಎನ್. - ಈ ಕತೆಗಳ ಹಲವಾರು ಪ್ರದರ್ಶನಗಳನ್ನು ಬೆಂಗಳೂರಿನಾದ್ಯಂತ ಮಾಡಲಾಗಿದೆ.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ












Click it and Unblock the Notifications