ಲೈವ್ ಬ್ಯಾಂಡ್ ರದ್ದು: ಹೈಕೋರ್ಟ್ ವಿಚಾರಣೆ
ಬೆಂಗಳೂರು, ಜೂನ್ 26: ರಾಜಧಾನಿ ಬೆಂಗಳೂರಿನ ಬಣ್ಣಬಣ್ಣದ ರಾತ್ರಿಗಳಿಗೆ ಮೆರುಗು ನೀಡುವ ಲೈವ್ ಬ್ಯಾಂಡ್ ಮತ್ತೆ ಬೇಕೆ ಎನ್ನುವ ವಿವಾದ ಈಗ ಮತ್ತೆ ಸೃಷ್ಟಿಯಾಗಿದೆ.
ಬೆಂಗಳೂರು ಮಹಾನಗರ ಪೊಲೀಸ್ ಆಯುಕ್ತ ಟಿ. ಸುನೀಲ್ ಕುಮಾರ್ ಅವರು ಇತ್ತೀಚೆಗೆ ಲೈವ್ ಬ್ಯಾಂಡ್ ಕುರಿತು ಹೊರಡಿಸಿದ್ದ ಆಜ್ಞೆಯನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಮಂಗಳವಾರ ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಈ ಕುರಿತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.
90ರ ದಶಕದಲ್ಲಿ ಬೆಂಗಳೂರಿನ ಲೈವ್ ಬ್ಯಾಂಡ್ ದೇಶಾಸ್ಯಂತ ಗಮನಸೆಳೆದಿತ್ತು. ಬೆಂಗಳೂರಿನ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯಲ್ಲಿ ಲೈವ್ ಬ್ಯಾಂಡ್ಗಳ ಪಾತ್ರವೂ ತುಂಬಾ ಚರ್ಚೆಯ ವಿಷಯವಾಗಿತ್ತು. ಈ ಹಿನ್ನೆಲೆಯಲ್ಲಿ ದಶಕಗಳ ಕಾಲ ಭಾರಿ ಚರ್ಚೆಯಲ್ಲಿದ್ದ ಲೈವ್ಬ್ಯಾಂಡ್ ಏಕಾಏಕಿ 2006ರಲ್ಲಿ ರದ್ದಾಗಿತ್ತು.

ಅದಾದ ಬಳಿಕ ಲೈವ್ಬ್ಯಾಂಡ್ಗೆ ಹಲವಾರು ರೀತಿಯ ನಿರ್ಬಂಧಗಳನ್ನು ವಿಧಿಸಿ ಸುಪ್ರೀಂಕೋರ್ಟ್ ನಿರ್ದೇಶನದ ಅನುಸಾರ ಕೆಲವು ಮಾರ್ಗಸೂಚಿಗಳನ್ನು ಮಾಡಲಾಗಿತ್ತು.
ಈ ಮಾರ್ಗಸೂಚಿಗಳ ಅನ್ವಯವೇ ಕಳೆದ ಕೆಲವು ವರ್ಷಗಳಿಂದ ಲೈವ್ಬ್ಯಾಂಡ್ ನಡೆಸಲಾಗುತ್ತಿತ್ತು. ಆದರೆ ಬೆಂಗಳೂರು ಪೊಲೀಸ್ ಆಯುಕ್ತರು ಇತ್ತೀಚೆಗೆ ಲೈವ್ಬ್ಯಾಂಡ್ ಸಂಪೂರ್ಣ ನಿಷೇಧಿಸಿದ್ದರಿಂದ ವರ್ತಕ ವಲಯದಲ್ಲಿ ಭಾರಿ ಅಸಮಧಾನ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಲೈವ್ಬ್ಯಾಂಡ್ ರದ್ದನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದ್ದು, ಹೈಕೋರ್ಟ್ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿರುವುದರಿಂದ ತೀವ್ರ ಕುತೂಹಲ ಕೆರಳಿಸಿದೆ. ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿತ್ತು, ರಾಜ್ಯ ಸರ್ಕಾರದ ಅಭಿಪ್ರಾಯ ಆಧರಿಸಿ ಮುಂದಿನ ವಿಚಾರಣೆ ವೇಳೆ ಲೈವ್ಬ್ಯಾಂಡ್ನ ಭವಿಷ್ಯ ನಿರ್ಧಾರವಾಗಲಿದೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ












Click it and Unblock the Notifications