ಶಾಸಕಾಂಗ ಪಕ್ಷದ ಸಭೆ ಕರೆದ ಬಿಜೆಪಿ Live Updates
ಬೆಂಗಳೂರು, ಜುಲೈ 8: ರಾಜ್ಯ ರಾಜಕೀಯದ ನಾಟಕೀಯ ಬೆಳವಣಿಗೆಗಳು ನಿರ್ಣಾಯಕ ಘಟ್ಟ ತಲುಪುವ ಸೂಚನೆಗಳು ಕಂಡು ಬರುತ್ತಿವೆ.
ಆನಂದ್ ಸಿಂಗ್ ಅವರ ಶಾಸಕ ಸ್ಥಾನದ ರಾಜೀನಾಮೆಯಿಂದ ಶುರುವಾದ ರಾಜೀನಾಮೆ ಪರ್ವ ಶನಿವಾರ ತೀವ್ರ ಸಂಚಲನ ಮೂಡಿಸುವ ಮಟ್ಟಕ್ಕೆ ಏರಿತ್ತು. ಸೋಮವಾರ ಇನ್ನಷ್ಟು ತಿರುವುಗಳನ್ನು ಪಡೆದುಕೊಂಡಿದೆ.
ಸರ್ಕಾರ ಉಳಿಸಲು ಕೈ ಸಚಿವರ 'ತ್ಯಾಗ': ಸಾಮೂಹಿಕ ರಾಜೀನಾಮೆ
ದೋಸ್ತಿ ಸರ್ಕಾರದ ಅಳಿವು ಉಳಿವಿನ ಬಗ್ಗೆ ಅನುಮಾನಗಳು ವ್ಯಕ್ತವಾದ ಬೆನ್ನಲ್ಲೇ ಕಾಂಗ್ರೆಸ್ ಮತ್ತು ಜೆಡಿಎಸ್ ಮುಖಂಡರು ಸರ್ಕಾರ ಉಳಿಸಿಕೊಳ್ಳುವ ಕಸರತ್ತನ್ನು ಕೈಬಿಟ್ಟಿಲ್ಲ. ಬದಲಾಗಿ ಸಮ್ಮಿಶ್ರ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಬೇಕು ಎಂಬ ಪಣದೊಂದಿಗೆ ನಿರಂತರ ಪ್ರಯತ್ನಗಳನ್ನು ನಡೆಸುತ್ತಿವೆ.
ಮುಖ್ಯವಾಗಿ ಕಾಂಗ್ರೆಸ್ ಪಾಳಯದಲ್ಲಿ ಶಾಸಕರ ಸಾಮೂಹಿಕ ರಾಜೀನಾಮೆಯಿಂದ ತಲ್ಲಣ ಉಂಟಾಗಿದೆ. ಅತೃಪ್ತ ಶಾಸಕರನ್ನು ಹೇಗಾದರೂ ಮಾಡಿ ಸಮಾಧಾನ ಮಾಡುವ ಸಲುವಾಗಿ ಡಿಸಿಎಂ ಪರಮೇಶ್ವರ್ ಸೇರಿದಂತೆ 22 ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ತ್ಯಾಗಕ್ಕೆ ಮುಂದಾಗಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಹೊಸ ಬೆಳವಣಿಗೆಗಳು ಉಂಟಾಗುತ್ತಿವೆ. ಏನೆಲ್ಲ ಆಗುತ್ತಿವೆ? ಮುಂದೇನು ಆಗಲಿದೆ ಎಂಬ ಮಾಹಿತಿಯನ್ನು ಈ ಪುಟದಲ್ಲಿ ಪಡೆದುಕೊಳ್ಳಬಹುದು.
R. Shankar, Karnataka Minister and independent MLA resigns from the Council of Ministers. pic.twitter.com/Wh3oBtjLwa
— ANI (@ANI) 8 July 2019
Maharashtra: Youth Congress workers protest outside Sofitel hotel in Mumbai where rebel Karnataka MLAs are staying. pic.twitter.com/RW5ukOdhHv
— ANI (@ANI) 8 July 2019