ಹಿಂಸೆಯ ನೆಲೆ ಹೆಣ್ಣೇ? ಸುಚಿತ್ರಾದಲ್ಲಿ ವಿಶಿಷ್ಟ ಕಾರ್ಯಕ್ರಮ
ಬೆಂಗಳೂರು, ಜು.17: ಮಹಿಳೆಯರ ಮೇಲಿನ ಅತ್ಯಾಚಾರ ಕುರಿತಾಗಿ ವಿವಿಧ ಸಮಾಜಗಳ ಮನೋಭಾವ ಕುರಿತು ಸುಚಿತ್ರಾ ಸಿನಿಮಾ ಮತ್ತು ಸಾಂಸ್ಕೃತಿಕ ಅಕಾಡೆಮಿ, ಸಮುದಾಯ ಹಾಗೂ ಇನ್ನಿತರ ಸಂಸ್ಥೆಗಳು ಮೂರು ದಿನಗಳ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದೆ.
ಜು.18ರಿಂದ ಮಹಿಳಾ ದೌರ್ಜನ್ಯ, ರಕ್ಷಣೆ ವಿಧಾನಗಳು, ಯುದ್ಧಗಳಲ್ಲಿ ಹೆಣ್ಣಿನ ಬಳಕೆ, ಕಾನೂನು ಕುರಿತಾಗಿ ವಿಚಾರ ಸಂಕಿರಣ, ಬೀದಿ ನಾಟಕ, ಸಂವಾದ ಕಾರ್ಯಕ್ರಮಗಳು ಬನಶಂಕರಿ 2ನೇ ಹಂತದ 9ನೇ ಮುಖ್ಯರಸ್ತೆಯಲ್ಲಿರುವ ಸುಚಿತ್ರಾ ಸಂಸ್ಥೆ ಆವರಣದಲ್ಲಿ ನಡೆಯಲಿದೆ. ಮೊದಲೆರಡು ದಿನ ಸಂಜೆ 5 ಗಂಟೆಯಿಂದ ಸಾಕ್ಷ್ಯಚಿತ್ರ ಪ್ರದರ್ಶನವಿರುತ್ತದೆ. ಭಾನುವಾರ ಬೆಳಗ್ಗೆ 11 ರಿಂದ ವಿವಿಧ ಕಾರ್ಯಕ್ರಮಗಳು ಜರುಗಲಿವೆ.[ಅತ್ಯಾಚಾರ ಪ್ರಕರಣ : ಯಾರು, ಏನು ಹೇಳಿದರು? ]
ವಿವಾದಕ್ಕೆ ಆಸ್ಪದ ಕೊಡದಂಥ ಮಾತೆಂದರೆ, ಯಾವುದೇ ರಾಜಕೀಯ ಅಥವಾ ಸಾಮಾಜಿಕ ದೃಷ್ಟಿಕೋನದಿಂದ ಗಮನಿಸಿದರೂ ಹಿಂಸೆಯ ನೆಲೆ ಹೆಣ್ಣಿನ ದೇಹವೇ ಎಂಬುದು...

ಹೆಣ್ಣಿನ ಮೇಲಿನ ದೌರ್ಜನ್ಯಗಳ ಬಗ್ಗೆ ಇರುವ ತಾತ್ಸಾರ ಮನೋಭಾವ, ಚರಿತ್ರೆಯಲ್ಲಿ ನಡೆದ ಹೆಣ್ಣಿನ ವಿರುದ್ಧ ದೌರ್ಜನ್ಯ ಹಾಗೂ ಮನುಷ್ಯ ಸಂಸ್ಕೃತಿಯಲ್ಲಿ ಅದರ ಬಗ್ಗೆ ಇರುವ ನಂಬಿಕೆಗಳು..ಹೆಣ್ಣಿಗಿರುವ ರಕ್ಷಣೆಯ ವಿಧಾನಗಳು, ಯುದ್ಧ ಮತ್ತು ನರಮೇಧಗಳಲ್ಲಿ ಅತ್ಯಾಚಾರಗಳನ್ನು ಅಸ್ತ್ರದಂತೆ ಉಪಯೋಗಿಸಿರುವುದು, ಸಾಮಾನ್ಯವಾಗಿ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳು ತಪ್ಪಿಸಿಕೊಳ್ಳಬಹುದಾದ ದಾರಿಗಳು, ದೌರ್ಜನ್ಯಗಳ ಬಗ್ಗೆ ನಡೆಯುತ್ತಿರುವ ಸಮಕಾಲೀನ ಚರ್ಚೆಗಳು, ಕಾನೂನು, ಮಸೂದೆಗಳು.. ಇವೆಲ್ಲ ವಿಷಯಗಳ ಕುರಿತು ಸುಚಿತ್ರಾ ಫಿಲ್ಮ್ ಸೊಸೈಟಿಯು ಇದೇ ವಾರಾಂತ್ಯದಲ್ಲಿ, ಚಲನಚಿತ್ರ, ಸಾಕ್ಷ್ಯಚಿತ್ರ ಪ್ರದರ್ಶನ, ತಜ್ಞರೊಂದಿಗೆ ವಿಚಾರ ಸಂಕಿರಣ, ಬೀದಿ ನಾಟಕ ಹೀಗೆ 3 ದಿನಗಳ ಕಾರ್ಯಕ್ರಮವನ್ನು ಆಯೋಜಿಸಿದೆ.
ಸುಚಿತ್ರಾದ ಜೊತೆಗೆ ಸಮುದಾಯ ಸಂಘಟನೆ, Concern India Foundation ಹಾಗೂ International Association of Women in Radio and Television (IAWRT) ಸಂಸ್ಥೆಗಳೂ ಕೂಡ ಕೈ ಜೋಡಿಸಿವೆ. ನಾಗರೀಕ ಸಮಾಜದ ನಾವೆಲ್ಲರೂ ಕೈ ಜೋಡಿಸಬೇಕಾದ ಕಾರ್ಯಕ್ರಮವಿದು.ಹೆಚ್ಚಿನ ಮಾಹಿತಿಗೆ ಫೇಸ್ ಬುಕ್ ಇವೆಂಟ್ ಪುಟ ನೋಡಬಹುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications