ಬೆಂಗಳೂರು ಲಾಕ್ ಡೌನ್; ಕೆಎಸ್ಆರ್‌ಟಿಸಿ ಬಸ್‌ಗಳಿಲ್ಲ

ಬೆಂಗಳೂರು, ಜುಲೈ 14 : ಕರ್ನಾಟಕ ಸರ್ಕಾರದ ಆದೇಶದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ಬಂದಿದೆ. ಎರಡೂ ಜಿಲ್ಲೆಗಳಲ್ಲಿ ಕೆಎಸ್ಆರ್‌ಟಿಸಿ ಬಸ್‌ಗಳ ಸಂಚಾರ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಮಂಗಳವಾರ ರಾತ್ರಿ 8ರಿಂದ ಜುಲೈ 22ರ ಬೆಳಗ್ಗೆ 5 ಗಂಟೆಯ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಸ್‌ಗಳು ಸಂಚಾರ ನಡೆಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Lockdown In Bengaluru Direction From KSRTC

ಈ ಅವಧಿಯಲ್ಲಿ ಬೆಂಗಳೂರು ನಗರದಿಂದ ವಿವಿಧ ಸ್ಥಳಗಳಿಗೆ ಮತ್ತು ಇತರೆ ಸ್ಥಳಗಳಿಂದ ಬೆಂಗಳೂರಿಗೆ ಬರುವ ಬಸ್ಸುಗಳ ಮುಂಗಡ ಟಿಕೆಟ್‌ ಬುಕ್ಕಿಂಗ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ.

ಕೆಎಸ್‌ಆರ್‌ಟಿಸಿ ಸೂಚನೆಗಳು

* ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ.

* ಎರಡು‌ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಡಳಿತದ ಆದೇಶದನ್ವಯ ಬಸ್‌ಗಳ ಸಂಚಾರ ಇರುತ್ತದೆ.

* ಮಂಗಳವಾರ ರಾತ್ರಿ 8 ಗಂಟೆಯ ತನಕ ಒಟ್ಟು 1300 ಬಸ್ ಬೆಂಗಳೂರಿನಿಂದ ಸಂಚಾರಗೊಳಿಸಿದೆ. 26,000 ಪ್ರಯಾಣಿಕರು ಈಗ ಪ್ರಯಾಣ ಬೆಳೆಸಿದ್ದಾರೆ.

* ಪ್ರಮುಖ ಸ್ಥಳಗಳಾದ ಹೊಸದುರ್ಗ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ‌ಮೈಸೂರು,‌ ಬಳ್ಳಾರಿ, ಯಾದಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸಂಚಾರ ನಡೆಸಿವೆ.

* ಇಂದು 160 ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+