ಬೆಂಗಳೂರು ಲಾಕ್ ಡೌನ್; ಕೆಎಸ್ಆರ್ಟಿಸಿ ಬಸ್ಗಳಿಲ್ಲ
ಬೆಂಗಳೂರು, ಜುಲೈ 14 : ಕರ್ನಾಟಕ ಸರ್ಕಾರದ ಆದೇಶದಂತೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಲಾಕ್ ಡೌನ್ ಜಾರಿಗೆ ಬಂದಿದೆ. ಎರಡೂ ಜಿಲ್ಲೆಗಳಲ್ಲಿ ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಮಂಗಳವಾರ ರಾತ್ರಿ 8ರಿಂದ ಜುಲೈ 22ರ ಬೆಳಗ್ಗೆ 5 ಗಂಟೆಯ ತನಕ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬಸ್ಗಳು ಸಂಚಾರ ನಡೆಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರು ಲಾಕ್ ಡೌನ್; ಬಿಎಂಟಿಸಿಯ ಸೂಚನೆಗಳು
ಈ ಅವಧಿಯಲ್ಲಿ ಬೆಂಗಳೂರು ನಗರದಿಂದ ವಿವಿಧ ಸ್ಥಳಗಳಿಗೆ ಮತ್ತು ಇತರೆ ಸ್ಥಳಗಳಿಂದ ಬೆಂಗಳೂರಿಗೆ ಬರುವ ಬಸ್ಸುಗಳ ಮುಂಗಡ ಟಿಕೆಟ್ ಬುಕ್ಕಿಂಗ್ಗಳನ್ನು ರದ್ದುಪಡಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಹೇಳಿದೆ.
ಬೆಂಗಳೂರು ಲಾಕ್ ಡೌನ್; ಮಾರ್ಗಸೂಚಿ ಪ್ರಕಟ
ಕೆಎಸ್ಆರ್ಟಿಸಿ ಸೂಚನೆಗಳು
* ಮುಂಗಡ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರಿಗೆ ಹಣ ಮರುಪಾವತಿ ಮಾಡಲಾಗುತ್ತದೆ.
* ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳ ಜಿಲ್ಲಾಡಳಿತದ ಆದೇಶದನ್ವಯ ಬಸ್ಗಳ ಸಂಚಾರ ಇರುತ್ತದೆ.
ಬೆಂಗಳೂರು ಲಾಕ್ ಡೌನ್ ಆರಂಭ; ರಸ್ತೆ, ಫ್ಲೈ ಓವರ್ ಬಂದ್
* ಮಂಗಳವಾರ ರಾತ್ರಿ 8 ಗಂಟೆಯ ತನಕ ಒಟ್ಟು 1300 ಬಸ್ ಬೆಂಗಳೂರಿನಿಂದ ಸಂಚಾರಗೊಳಿಸಿದೆ. 26,000 ಪ್ರಯಾಣಿಕರು ಈಗ ಪ್ರಯಾಣ ಬೆಳೆಸಿದ್ದಾರೆ.
* ಪ್ರಮುಖ ಸ್ಥಳಗಳಾದ ಹೊಸದುರ್ಗ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಬಳ್ಳಾರಿ, ಯಾದಗಿರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬಸ್ ಸಂಚಾರ ನಡೆಸಿವೆ.
* ಇಂದು 160 ಬಸ್ ಮುಂಗಡ ಟಿಕೆಟ್ ಬುಕ್ಕಿಂಗ್ ಆಗಿವೆ.