ಲೊಡ್ಡೆ ಸಿನಿಮಾದಲ್ಲಿ ಲಾಸ್: ವಂಚನೆ ಮಾಡಿ ಲಾಕ್ ಆದ ನಿರ್ಮಾಪಕ!
ಬೆಂಗಳೂರು, ಜೂ. 4: ಸಿನಿಮಾ ನಿರ್ಮಾಣ ಮಾಡಿ ಕೈಸುಟ್ಟುಕೊಂಡಿದ್ದ ಚಿತ್ರ ನಿರ್ಮಾಪಕ ಇದೀಗ ರಿಯಲ್ ಎಸ್ಟೇಟ್ ವ್ಯಾಪಾರದ ಸೋಗಿನಲ್ಲಿ ಮೋಸ ಮಾಡಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ನಿರ್ಮಾಪಕ ಮಂಜುನಾಥ್ ಸೇರಿ ನಾಲ್ವರನ್ನು ರಾಜಾಜಿನಗರ ಪೊಲೀಸರು ಬಂಧಿಸಿದ್ದಾರೆ.
ಹಾಸ್ಯ ನಟ ಕೋಮಲ್ ಕುಮಾರ್ ಅಭಿನಯದ 'ಲೊಡ್ಡೆ' ಸಿನಿಮಾ ನಿರ್ಮಾಣ ಮಾಡಿದ್ದ ಮಂಜುನಾಥ್, ಶಿವಕುಮಾರ್, ಗೋಪಾಲ್, ಚಂದ್ರಶೇಖರ್ ಬಂಧಿತರು. ಕೋಟ್ಯಂತರ ರೂಪಾಯಿ ಸಿನಿಮಾಗೆ ಹೂಡಿಕೆ ಮಾಡಿ ಕೈ ಸುಟ್ಟುಕೊಂಡಿದ್ದ. ಸಿನಿಮಾ ಒಂದೇ ದಿನಕ್ಕೆ ಮೂಲೆ ಸೇರಿತ್ತು. ಹಾಕಿದ್ದ ಬಂಡವಾಳ ಕೂಡ ಬಂದಿರಲಿಲ್ಲ. ಇದರಿಂದ ಬೇಸತ್ತ ನಿರ್ಮಾಪಕ ಮಂಜುನಾಥ್, ತಮ್ಮ ಗೆಳೆಯರ ಜತೆ ನಿವೇಶನ ಡೀಲಿಂಗ್ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ. ಈ ಸಂಬಂಧ ರಾಜಾಜಿನಗರದಲ್ಲಿ ಕಚೇರಿ ತೆರೆದು ನಿವೇಶನ ಮಾರಾಟ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದ.
ಈಗಲ್ ಟ್ರಿ ಬಿಲ್ಡರ್ಸ್ ಹಾಗೂ ಡೆವಲಪರ್ಸ್ ಡಾಟ್ ಎಂಬ ಹೆಸರಿನ ಕಂಪನಿ ತೆಗೆದಿದ್ದರು. ನಿವೇಶನ ಮಾರಾಟ ಮಾಡುವ ಜಾಹೀರಾತುಗಳನ್ನು ನೀಡಿದ್ದರು. ಇದನ್ನು ನೋಡಿ ನಿರ್ಮಾಪಕ ಮಂಜುನಾಥ್ ನನ್ನು ಪುಷ್ಪ ಕುಮಾರ್ ಎಂಬಾತ ಸಂಪರ್ಕಿಸಿದ್ದ. ಕಡಿಮೆ ಬೆಲೆಗೆ ನಿವೇಶನ ಕೊಡಿಸುವುದಾಗಿ ಹೇಳಿ 2 ಲಕ್ಷ ರೂ. ಹಾಕಿಸಿಕೊಂಡಿದ್ದರು. ಯಾರದ್ದೋ ನಿವೇಶನ ತೋರಿಸಿ ಮುಂಗಡ ಹಣ ಪೆಡೆದಿದ್ದ ಮಂಜುನಾಥ್ನನ್ನು ದಾಖಲೆಗಳು ಕೇಳಿದಾಗ ಕೊಟ್ಟಿರಲಿಲ್ಲ. ಈ ಬಗ್ಗೆ ಅನುಮಾನಗೊಂಡ ಪುಷ್ಪಕುಮಾರ್ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದ. ದೂರು ದಾಖಲಿಸಿಕೊಂಡಿರುವ ಪೊಲೀಸರು ಮಂಜುನಾಥ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ನಾಲ್ವರು ಹಲವರಿಗೆ ನಿವೇಶನ ಹೆಸರನಲ್ಲಿ ವಂಚನೆ ಮಾಡಿರುವುದು ಗೊತ್ತಾಗಿದೆ. ರಾಜಾಜಿನಗರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಾಯು ವಿಹಾರಿಗಳಿಗೆ ಬೆದರಿಸಿ ಸುಲಿಗೆ:
ಕಬ್ಬನ್ ಪಾರ್ಕ್ನಲ್ಲಿ ವಾಯು ವಿಹಾರಕ್ಕೆ ತೆರಳಿದ್ದ ವ್ಯಕ್ತಿಯನ್ನು ಪೊಲೀಸರ ಸೋಗಿನಲ್ಲಿ ಹೆದರಿಸಿ ಹಣ ಪಡೆದುಕೊಂಡು ಪರಾರಿಯಾಗಿರುವ ಘಟನೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ವಾಯು ವಿವಾರ ಮಾಡುವರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುವ ಗ್ಯಾಂಗ್ ಹುಟ್ಟಿಕೊಂಡಿದೆ. ಈ ಗ್ಯಾಂಗ್ ಕಣ್ಣಿಗೆ ಬಿದ್ದರೆ ಹಣ ಕಳೆದಕೊಳ್ಳುವುದು ಗ್ಯಾರೆಂಟಿ. ಹೈಕೋರ್ಟ್, ಪೊಲೀಸ್ ಅಧಿಕಾರಿಗಳು, ವಿಧಾನಸೌಧ ಸಮೀಪದಲ್ಲಿಯೇ ಇರುವ ಕಬ್ಬನ್ ಪಾರ್ಕ್ ನಲ್ಲಿ ಹೊಸತನದ ಸುಲಿಗೆ ದಂಧೆ ಶುರುವಾಗಿದೆ.

ರಾಜೇಶ್ ಎಂಬಾತ ಕಬ್ಬನ್ ಪಾರ್ಕ್ನಲ್ಲಿ ವಾಯು ವಿಹಾರ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ವ್ಯಕ್ತಿ, ತಾನು ಪೊಲೀಸ್, ನೀನು ಇಲ್ಲೇನು ಮಾಡುತ್ತಿದ್ದಿಯಾ ? ಎಂದು ಪ್ರಶ್ನಿಸಿದ್ದಾನೆ. ಮೊದಲು ತಾನು ಪೊಲೀಸ್ ಎಂದು ಪರಿಚಯಿಸಿಕೊಂಡ ಸುಲಿಗೆಕೋರ, ಇಲ್ಲಿ ಕೊಲೆ ನಡೆದಿದೆ. ನೀನೇ ಇದನ್ನು ಮಾಡಿದ್ದೀಯ ಎಂದು ಕೇಸು ದಾಖಲಿಸುತ್ತೇನೆ. ಈ ಕೇಸಿನಿಂದ ದೂರ ಇಡಬೇಕಾದರೆ ಹಣ ಕೊಡು ಎಂದು ಹೆದರಿಸಿದ್ದಾನೆ. ಸುಲಿಗೆಕೋರನ ಮಾತು ನಂಬಿ ರಾಜೇಶ್ ಕಾವೇರಿಭವನದ ಬಳಿ ಎಟಿಎಂನಲ್ಲಿ 40 ಸಾವಿರ ರೂ. ತೆಗೆದು ಕೊಟ್ಟಿದ್ದಾನೆ. ಹಣ ಪಡೆದ ಬಳಿಕ ಅರೋಪಿ ಎಸ್ಕೇಪ್ ಆಗಿದ್ದು, ರಾಜೇಶ್ ಈ ಕುರಿತು ಮೊದಲು ಹಲಸೂರು ಗೇಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ಕಬ್ಬನ್ ಪಾರ್ಕ್ ಠಾಣೆ ವ್ಯಾಪ್ತಿಗೆ ಬರುವುದರಿಂದ ಅಲ್ಲಿಗೆ ವರ್ಗಾವಣೆ ಮಾಡಲಾಗಿದೆ.
Recommended Video
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications