Hemnath Nimbalkar: ವಾರ್ತಾ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಎತ್ತಂಗಡಿ
ಬೆಂಗಳೂರು, ಮಾರ್ಚ್ 31: ಲೋಕಸಭೆ ಚುನಾವಣೆ 2024ರ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಕರ್ನಾಟಕ ಸರ್ಕಾರ ಐಪಿಎಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿದೆ. ಪತ್ನಿ ಲೋಕಸಭೆ ಚುನಾವಣೆ ಅಭ್ಯರ್ಥಿಯಾಗಿರುವ ಕಾರಣ ಚುನಾವಣಾ ಆಯೋಗದ ಸೂಚನೆಯಂತೆ ಐಪಿಎಸ್ ಅಧಿಕಾರಿ ಹಾಗೂ ಅಭ್ಯರ್ಥಿಯ ಪತಿಯನ್ನು ಸರ್ಕಾರ ವರ್ಗಾವಣೆಗೊಳಿಸಿದೆ.
ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿ. ಹೇಮಂತ್ ಪತ್ನಿ ಅಂಜಲಿ ನಿಂಬಾಳ್ಕರ್ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಅಂಜಲಿ ನಿಂಬಾಳ್ಕರ್ ಅಭ್ಯರ್ಥಿಯಾದ ಕಾರಣ ಹೇಮಂತ್ ನಿಂಬಾಳ್ಕರ್ ವರ್ಗಾವಣೆ ಮಾಡಬೇಕೆಂದು ಪ್ರತಿಪಕ್ಷವಾದ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರ ಸಲ್ಲಿಸಿತ್ತು.

ಈ ದೂರಿನ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಸೂಚನೆಯಂತೆ ಕರ್ನಾಟಕ ಸರ್ಕಾರ ಹೇಮಂತ್ ನಿಂಬಾಳ್ಕರ್ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ತನಕ ವರ್ಗಾವಣೆ ಆದೇಶ ಜಾರಿಯಲ್ಲಿರುತ್ತದೆ ಸರ್ಕಾರ ಹೇಳಿದೆ.
ಖಾನಾಪುರ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಈ ಬಾರಿ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅವರ ಪತಿ ಹೇಮಂತ್ ಕುಮಾರ್ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದರು. ಈಗ ಸರ್ಕಾರ ಅವರನ್ನು ವರ್ಗಾವಣೆಗೊಳಿಸಿ ಆದೇಶಿಸಿದೆ.
ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವಾಗ ಸರ್ಕಾರ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಲು ಚುನಾವಣಾ ಆಯೋಗದ ಅನುಮತಿಯ ಅಗತ್ಯ. ಚುನಾವಣೆ ಅಭ್ಯರ್ಥಿಯ ಪತಿಯಾಗಿರುವ ಹೇಮಂತ್ ನಿಂಬಾಳ್ಕರ್ ಅವರನ್ನು ವಾರ್ತಾ ಇಲಾಖೆಯಿಂದ ವರ್ಗಾವಣೆ ಮಾಡುವಂತೆ ಬಿಜೆಪಿ ಚುನಾವಣೆ ಆಯೋಗಕ್ಕೆ ದೂರು ನೀಡಿತ್ತು.

"ಹೇಮಂತ್ ನಿಂಬಾಳ್ಕರ್ ಅವರು ಹೆಚ್ಚು ಪ್ರಭಾವಿ ಐಪಿಎಸ್ ಅಧಿಕಾರಿಯಾಗಿದ್ದಾರೆ. ಅಭ್ಯರ್ಥಿಯೊಂದಿಗಿನ ಅವರ ಸಂಬಂಧವು ಇತರ ಐಪಿಎಸ್ ಅಧಿಕಾರಿಗಳು ಮತ್ತು ಚುನಾವಣಾ ಕೆಲಸಕ್ಕಾಗಿ ನಿಯೋಜಿಸಲಾದ ಪೊಲೀಸರ ಮೇಲೆ ಪ್ರಭಾವ ಬೀರಬಹುದು. ಅಲ್ಲದೆ, ಹೇಮಂತ್ ನಿಂಬಾಳ್ಕರ್ ತಮ್ಮ ಪತ್ನಿ ಪರ ಮತ ಕೇಳಲು ತಮ್ಮ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿಯೂ ಸಿಕ್ಕಿದೆ. ಇದೇ ಹುದ್ದೆಯಲ್ಲಿ ಮುಂದುವರಿದರೆ ಅವರು ತಮ್ಮ ಪ್ರಭಾವ ಬಳಸಿ ಕಾಂಗ್ರೆಸ್ ಪಕ್ಷ ಮತ್ತು ಅಭ್ಯರ್ಥಿಗಳ ಪರ ಒಲವು ತೋರುತ್ತಾರೆ" ಎಂದು ಬಿಜೆಪಿ ದೂರಿನಲ್ಲಿ ಆರೋಪಿಸಿತ್ತು.
ದೂರು ಸಲ್ಲಿಸಿದ ನಂತರ, ಬಿಜೆಪಿ ಎಂಎಲ್ಸಿ ನಾರಾಯಣಸ್ವಾಮಿ ಮಾತನಾಡಿ, "ಸಾರ್ವತ್ರಿಕ ಚುನಾವಣೆಯಲ್ಲಿ ಅವರು ತಮ್ಮ ಅಧಿಕಾರ ಅಥವಾ ಪ್ರಭಾವವನ್ನು ಬಳಸಿಕೊಳ್ಳಬಹುದು. ಹೀಗಾಗಿ ಹೇಮಂತ್ ನಿಂಬಾಳ್ಕರ್ ಅವರನ್ನು ಬೇರೆ ರಾಜ್ಯಕ್ಕೆ ನಿಯೋಜಿಸುವಂತೆ ನಾವು ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಅವರನ್ನು ಒತ್ತಾಯಿಸಿದ್ದೇವೆ" ಎಂದು ಹೇಳಿದ್ದರು.
ಸೂರಳ್ಕರ್ ವಿಕಾಸ್ ಕಿಶೋರ್ ವಾರ್ತಾ ಇಲಾಖೆ ನೂತನ ಆಯುಕ್ತ
ಹೇಮಂತ್ ನಿಂಬಾಳ್ಕರ್ ಅವರ ಜಾಗದಲ್ಲಿ ವಾರ್ತಾ ಇಲಾಖೆಯ ನೂತನ ಆಯುಕ್ತರನ್ನಾಗಿ ಸೂರಳ್ಕರ್ ವಿಕಾಸ್ ಕಿಶೋರ್ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಸೂರಳ್ಕರ್ ವಿಕಾಸ್ ಕಿಶೋರ್ ಅವರು ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದರು. ಈಗ ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿದ್ದಾರೆ.
2012ರ ಐಎಎಸ್ ಬ್ಯಾಚ್ನ ಸೂರಳ್ಳರ್ ವಿಕಾಸ್ ಕಿಶೋರ್ ಅವರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ಗಮಿತ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶನಿವಾರ ಸಂಜೆ ಅಧಿಕಾರ ಹಸ್ತಾಂತರಿಸಿದ್ದಾರೆ. ನೂತನ ಆಯುಕ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹುದ್ದೆಗೆ ಜೊತೆಗೆ ಬಿಬಿಎಂಪಿ ವಿಶೇಷ ಆಯುಕ್ತರ ಹುದ್ದೆಯಲ್ಲಿಯೂ ಇರಲಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications