Lok Sabha Election 2024: ಬೆಂಗಳೂರು ಉತ್ತರದಲ್ಲಿ ಬಿಜೆಪಿಯದ್ದೇ ಪ್ರಾಬಲ್ಯ! ಶೋಭಾ ಎದುರು ‘ಕೈ’ ಅಸ್ತ್ರ ವರ್ಕೌಟ್ ಆಗುತ್ತಾ?
ಬೆಂಗಳೂರು, ಮಾರ್ಚ್ 28: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿಹೆಚ್ಚು ಮತದಾರರನ್ನು ಹೊಂದಿರುವುದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ. ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ, ಈಗ ಬಿಜೆಪಿ ಭದ್ರಕೋಟೆಯಾಗಿ ಬದಲಾಗಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 2004 ರಿಂದ ಬಿಜೆಪಿಗೆ ಸಿಕ್ಕ ಮೊದಲ ಗೆಲುವಾಗಿದ್ದು, ಈವರೆಗೂ ಹಿಂದಿರುಗದಂತೆ ಮಾಡಿದೆ.. ಹೊರಗಿನಿಂದ ಬಂದ ಸದಾನಂದಗೌಡರನ್ನ ಎರಡು ಬಾರಿ ಗೆಲ್ಲಿಸಿದ್ದು, ಈ ಬಾರಿ ಟಿಕೆಟ್ ಯಾರಿಗೆ ಸಿಗಲಿದೆ ಅನ್ನೋ ಕುತೂಹಲ ಕೆರಳಿಸಿದೆ.

ಬಿಜೆಪಿ, ಕಾಂಗ್ರೆಸ್ ಪಕ್ಷದ ನಡುವೆ ನೇರ ಹಣಾಹಣಿ ಇದ್ದು, ಈ ಬಾರಿ ಎರಡೂ ಪಕ್ಷಗಳಿಂದ ಹೊಸ ಅಭ್ಯರ್ಥಿಗಳು ಕಣಕ್ಕಿಳಿಯೋ ಎಲ್ಲಾ ಲಕ್ಷಣಗಳು ಕಂಡು ಬರ್ತಿವೆ.. ಹಾಗಾದ್ರೆ ಈ ಬಾರಿ ಚುನಾವಣಾ ಕಣ ಹೇಗಿರಲಿದೆ, ಜನ ಯಾರನ್ನ ಆರಿಸಿ ಲೋಕಸಭೆ ಪ್ರವೇಶಿಸುವಂತೆ ಮಾಡ್ತಾರೆ ಕುತೂಹಲ ಕೆರಳಿಸಿದೆ. 1951ರಿಂದ ಲೋಕಸಭಾ ಚುನಾವಣೆ ಆರಂಭವಾಗಿದ್ದು, ಈವರೆಗೂ 17 ಬಾರಿ ಚುನಾವಣೆ ನಡೆದಿದೆ. ಈ ಕ್ಷೇತ್ರದಲ್ಲಿ 2004ರ ವರೆಗೂ ಕಾಂಗ್ರೆಸ್ ಅಭ್ಯರ್ಥಿ ಸತತವಾಗಿ ಗೆಲ್ಲುತ್ತಾ ಬಂದಿದ್ದು, ಒಂದು ಬಾರಿ ಮಾತ್ರ ಜೆಡಿಎಸ್ ಅಭ್ಯರ್ಥಿ ಗೆಲುವನ್ನ ಸಾಧಿಸಿದ್ದಾರೆ.
2004ರಿಂದ ಸತತವಾಗಿ ನಾಲ್ಕು ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಅತಿ ಹೆಚ್ಚು ಬಾರಿ ಕಾಂಗ್ರೆಸ್ ನಿಂದ ದಿವಂಗತ ಮಾಜಿ ಸಚಿವ ಸಿ.ಕೆ ಜಾಫರ್ ಷರೀಫ್ ಪ್ರತಿನಿಧಿಸಿದ್ದು, ಅತಿ ಹೆಚ್ಚು ಬಾರಿ ಗೆಲುವನ್ನ ಸಾಧಿಸಿದ್ರು.. 2004ರಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಹೆಚ್.ಟಿ ಸಾಂಗ್ಲಿಯಾನ ಒಮ್ಮೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ, ಮೊದಲ ಗೆಲುವು ಸಾಧಿಸಿದರು. ಬಳಿಕ ಡಿ.ಬಿ ಚಂದ್ರೇಗೌಡ ಒಂದು ಬಾರಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಎರಡು ಬಾರಿ ಗೆಲುವನ್ನ ಸಾಧಿಸಿದ್ದಾರೆ.
ಹಾಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಸದಾನಂದಗೌಡರು ಈಗಾಗಲೇ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ರೂ ಕೂಡ, ಮತ್ತೆ ಚುನಾವಣೆ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದರು. ಆದರೆ, ಬಿಜೆಪಿ ಹೈಕಮಾಂಡ್ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಿದ್ದು, ಕಾಂಗ್ರೆಸ್ ನಿಂದ ಪ್ರೋ. ರಾಜೀವ್ ಗೌಡ ಅವರಿಗೆ ಹೈಕಮಾಂಡ್ ಟಿಕೆಟ್ ನೀಡಿದೆ. ಇನ್ನೂ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ ನಾಯಕರಿದ್ದಾರೆ. ಇನ್ನು ನಾಲ್ಕು ಬಾರಿ ಕಾಂಗ್ರೆಸ್ನಿಂದಲೂ ಪ್ರಭಲ ವ್ಯಕ್ತಿಯನ್ನೇ ಕಣಕ್ಕಿಳಿಸಿದ್ರು, ಲಕ್ಷಾಂತರ ಲೀಡ್ನಲ್ಲೇ ಸೋತಿದ್ದಾರೆ. ಇದೀಗ ಪ್ರೋ. ರಾಜೀವ್ ಗೌಡ ಅವರನ್ನ ಕಣಕ್ಕಿಳಿಸಿರುವ ಕಾಂಗ್ರೆಸ್ ಪಡೆ ಹಲವು ತಂತ್ರಗಾರಿಕೆಯನ್ನ ನಡೆಸಿದೆ.

ಇನ್ನೂ ಕೆ.ಆರ್ ಪುರ, ಬ್ಯಾಟರಾಯನಪುರ, ಯಶವಂತಪುರ, ದಾಸರಹಳ್ಳಿ, ಮಹಾಲಕ್ಷ್ಮಿ ಲೇಔಟ್, ಮಲ್ಲೇಶ್ವರ, ಹೆಬ್ಬಾಳ, ಪುಲಕೇಶಿ ನಗರ ಸೇರಿ ಎಂಟು ವಿಧಾನಸಭಾ ಕ್ಷೇತ್ರಗಳನ್ನ ಒಳಗೊಂಡಿರುವ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರವೂ ಬೆಂಗಳೂರಿನ ಪ್ರತಿಷ್ಠಿತ ಕ್ಷೇತ್ರದಲ್ಲಿ ಒಂದಾಗಿದೆ. ಈ ಕ್ಷೇತ್ರ ಬಹುತೇಕ ನಗರ ಹಾಗೂ ಗ್ರಾಮೀಣ ಪ್ರದೇಶ ಸೇರಿಕೊಂಡಿದೆ. ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ, ಐದು ಬಿಜೆಪಿ, ಮೂರು ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿನಿಧಿಸುತ್ತಿದ್ದಾರೆ. ಆದರೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್, ಬಹಿರಂಗವಾಗಿ ಕಾಂಗ್ರೆಸ್ ಬೆಂಬಲಿಸ್ತಿದ್ದು ಇದು ಬಿಜೆಪಿ ಪಕ್ಷಕ್ಕೆ ತೀವ್ರ ಮೂಜುಗರ ಉಂಟು ಮಾಡಿದೆ.
ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೂ, ಬಿಜೆಪಿಗೆ ಹೆಚ್ಚು ಮತಗಳು ಕೊಟ್ಟಿರೋದ್ರಿಂದ ಸೋಮಶೇಖರ್ ಲೆಕ್ಕಾಚಾರಕ್ಕೂ ಪೆಟ್ಟು ಕೊಡುವ ಸಾಧ್ಯತೆ ಇದೆ. ಇನ್ನು ಒಂದುವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಬಿಜೆಪಿ ಅಭ್ಯರ್ಥಿ ಗೆಲ್ಲುತ್ತಾ ಬಂದಿದ್ದು, ಮೋದಿ ಆಡಳಿತ ವೈಖರಿ ಈ ಕ್ಷೇತ್ರದಲ್ಲಿ ಮತ್ತೊಂದು ಗೆಲುವಿಗೆ ಕಾರಣವಾಗುತ್ತಾ, ಅಥವಾ ಕಾಂಗ್ರೆಸ್ ನ ಹಲವು ತಂತ್ರಗಾರಿಕೆ ಬದಲಾವಣೆಗೆ ಕಾರಣವಾಗುತ್ತಾ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಒಟ್ನಲಿ, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರೇ ಅಧಿಕ ಸಂಖ್ಯೆಯಲ್ಲಿದ್ದು, ದಲಿತರು ಕೂಡ ಹೆಚ್ಚು ಕಡಿಮೆ ಪೈಪೋಟಿ ನೀಡುವಷ್ಟಿದೆ. ಆದರೆ, ಲಿಂಗಾಯತ ಮತ್ತು ಕುರುಬರ ಸಂಖ್ಯೆಯೂ ಕೂಡ ನಿರ್ಣಯಕ ಪಾತ್ರ ವಹಿಸಲಿದ್ದು, ಈ ಕ್ಷೇತ್ರದಲ್ಲಿ ಒಕ್ಕಲಿಗ ಸಮುದಾಯ ಹೆಚ್ಚಿರುವುದು ಒಕ್ಕಲಿಗ ಅಭ್ಯರ್ಥಿಗೆ ಜನ ಮಣೆ ಹಾಕುವ ಸಾಧ್ಯತೆ ಇದೆ. ಈಗಾಗಲೇ ಎರಡು ಪಕ್ಷದಲ್ಲೂ ಅಭ್ಯರ್ಥಿಯನ್ನ ಘೋಷಣೆ ಮಾಡಿದ್ದು, ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರೀ ಮತದಾರ ಯಾರಿಗೆ ಮಣೆ ಹಾಕಲಿದ್ದಾರೆ ಎಂಬುದನ್ನ ಕಾದುನೋಡ್ಬೇಕಾಗಿದೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಮತದಾರರ ಸಂಖ್ಯೆ
ಒಟ್ಟು ಮತದಾರರ ಸಂಖ್ಯೆ - 31,14,249
ಪುರುಷ ಮತದಾರರ ಸಂಖ್ಯೆ - 16,03,410
ಮಹಿಳಾ ಮತದಾರರ ಸಂಖ್ಯೆ - 15,17,255
ಇತರೆ ಮತದಾರರ ಸಂಖ್ಯೆ -584
ಜಾತಿವಾರು ಮತದಾರರ ಲೆಕ್ಕಾಚಾರ
ಒಕ್ಕಲಿಗರು- 12 ಲಕ್ಷ 65 ಸಾವಿರ
ದಲಿತರು - 8 ಲಕ್ಷ 70ಸಾವಿರ
ಲಿಂಗಾಯತರು- 4 ಲಕ್ಷ 20 ಸಾವಿರ
ಕುರುಬರು- 4 ಲಕ್ಷ 70 ಸಾವಿರ
ಮುಸ್ಲಿಮ್ - 1 ಲಕ್ಷ 30 ಸಾವಿರ
ಕ್ರೈಸ್ತ - 52 ಸಾವಿರ
ಇತರೆ - 1.5 ಲಕ್ಷ
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications