Election: ಈ ಮತದಾರರಿಗೆ ಅಂಚೆ ಮತದಾನ ಸೌಲಭ್ಯ: ಯಾರೆಲ್ಲ ಅರ್ಹರು?
ಬೆಂಗಳೂರು, ಮಾರ್ಚ್ 19: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಅಗತ್ಯ ಸಿದ್ಧತೆಗಳು ಆರಂಭವಾಗಿದೆ. ಈ ಸಂಬಂಧ ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನ (ಪೋಸ್ಟಲ್ ಬ್ಯಾಲೆಟ್) ದ ವ್ಯವಸ್ಥೆ ಕಲ್ಪಿಸಲು ಮುಂದಾಗಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂಚೆ ಮತದಾನಕ್ಕೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಮಂಗಳವಾರ ಸಭೆ ನಡೆಯಿತು. ಈ ವೇಳೆ ಬಿಬಿಎಂಪಿ ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ಮಾತನಾಡಿದರು. ಲೋಕಸಭಾ ಚುನಾವಣೆಯಲ್ಲಿ 12 ವಿವಿಧ ಇಲಾಖೆಗಳ ಅಗತ್ಯ ಸೇವೆಗಳ ಗೈರು ಮತದಾರರಿಗೆ(AVES) ಅಂಚೆ ಮತದಾನ(ಪೋಸ್ಟಲ್ ಬ್ಯಾಲೆಟ್)ದ ವ್ಯವಸ್ಥೆ ಕಲ್ಪಿಸುವ ಸಲುವಾಗಿ ಆಯಾ ಇಲಾಖೆಗಳಿಂದ ಪಟ್ಟಿ ನೀಡುವಂತೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.

12 ಇಲಾಖೆಗಳ ಸಿಬ್ಬಂದಿ ಅರ್ಹರು
ಚುನಾವಣಾ ಆಯೋಗವು 12 ವಿವಿಧ ಇಲಾಖೆಗಳನ್ನು ಅಗತ್ಯ ಸೇವೆಗಳೆಂದು ಪರಿಗಣಿಸಲಾಗಿದೆ. ಆಯಾ ಇಲಾಖಾವಾರು ನೀಡುವ ಪಟ್ಟಿಯ ಅನುಸಾರ ಅಂಚೆ ಮತದಾನದ ಮೂಲಕ ಮತಚಾಯಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಇಲಾಖಾವಾರು ಅಗತ್ಯ ಸೇವೆಗಳ ಗೈರು ಮತದಾರರ ಅರ್ಹ ಮತದಾರರ ಪಟ್ಟಿ ನೀಡಿದ ನಂತರ 12ಡಿ ನಮೂನೆಗಳಲ್ಲಿ ಭರ್ತಿ ಮಾಡಿ, ದಿನಾಂಕ 22/03/2024ರ ಶುಕ್ರವಾರದೊಳಗಾಗಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಅಂಚೆ ಮತದಾನದ ನಿಯಮ ಏನಿದೆ?
ಅರ್ಹ ಮತದಾರರು ನೋಂದಣಿಯಾಗಿರುವ ಲೋಕಸಭಾ ಕ್ಷೇತ್ರದಲ್ಲಿ ಸ್ಥಾಪಿಸಲಾದ ಪೋಸ್ಟಲ್ ವೋಟಿಂಗ್ ಸೆಂಟರ್(ಪಿವಿಸಿ) ನಲ್ಲಿ ಮಾತ್ರ ಈ ಬಾರಿ ಅಂಚೆ ಮತದಾನ ಮಾಡಲು ಅವಕಾಶವಿದೆ. ಅಂಚೆ ಮೂಲಕ ಅಂಚೆ ಮತದಾನ ಪತ್ರವನ್ನು ನೀಡುವ/ತಲುಪಿಸುವ ವ್ಯವಸ್ಥೆ ಈ ಬಾರಿ ಇರುವುದಿಲ್ಲ ಎಂದು ಅವರು ತಿಳಿಸಿದರು.

ಯಾವ 12 ಇಲಾಖೆಗಳ ಮತದಾರರು ಅರ್ಹರು?
1. ವಿದ್ಯುತ್ ಇಲಾಖೆ
2. ಬಿ.ಎಸ್.ಎನ್.ಎಲ್ ಇಲಾಖೆ
3. ರೈಲ್ವೆ ಇಲಾಖೆ
4. ದೂರದರ್ಶನ ಇಲಾಖೆ
5. ಆಲ್ ಇಂಡಿಯಾ ರೇಡಿಯೋ ಇಲಾಖೆ
6. ಆರೋಗ್ಯ ಇಲಾಖೆ
7. ವಾಯುಯಾನ ಇಲಾಖೆ
8. ಬಸ್ ಸೇವೆಗಳು(ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ)
9. ಅಗ್ನಿಶಾಮಕ ಸೇವೆಗಳ ಇಲಾಖೆ
10. ಭಾರತ ಚುನಾವಣಾ ಆಯೋಗದಿಂದ ಮತದಾನದ ದಿನಂದಂದು ಚುನಾವಣಾ ಕವರೇಜ್ಗಾಗಿ ಅಧಿಕೃತಗೊಂಡ ಮಾಧ್ಯಮ ವ್ಯಕ್ತಿಗಳು.
11. ಸಂಚಾರ ಪೊಲೀಸ್ ಇಲಾಖೆ.
12. ಆಂಬ್ಯುಲೆನ್ಸ್ ಸೇವೆಗಳು.
ಸಭೆಯಲ್ಲಿ ಆರೋಗ್ಯ ಇಲಾಖೆಯ ಆಯುಕ್ತರಾದ ಶ್ರೀ ಡಿ. ರಂದೀಪ್, ಪೋಸ್ಟಲ್ ಬ್ಯಾಲೆಟ್ ನೋಡಲ್ ಅಧಿಕಾರಿಯಾದ ಪಲ್ಲವಿ, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ರವಿ ಚಂದ್ರ ನಾಯ್ಕ್, 12 ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳು ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಆಗಿ ಬದಲಾದ ಪೆರಿಫೆರಲ್ ರಿಂಗ್ ರೋಡ್: 2029ರ ವೇಳೆಗೆ ನಗರದ ಟ್ರಾಫಿಕ್ಗೆ ಸಿಗಲಿದೆ ಮುಕ್ತಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications