ಇವಿಎಂ-ವಿವಿಪ್ಯಾಟ್ ಮತಗಳ ತಾಳೆಯಲ್ಲಿ ಲೋಪ ಆಗಿಲ್ಲ: ಬಿಇಎಲ್ ಸ್ಪಷ್ಟನೆ
ಬೆಂಗಳೂರು, ಜೂನ್ 1: ಇವಿಎಂ ಮತ್ತು ವಿವಿಪ್ಯಾಟ್ ತಾಳೆಯಲ್ಲಿ ವ್ಯತ್ಯಾಸ ಕಂಡುಬಂದಿದೆ ಎಂಬ ವರದಿಗಳನ್ನು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (ಬಿಇಎಲ್) ತಳ್ಳಿಹಾಕಿದೆ.
ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ವಿದ್ಯುನ್ಮಾನ ಮತಯಂತ್ರ (ಇವಿಎಂ) ಮತ್ತು ಮತದಾನ ದೃಢೀಕರಣ ರಸೀದಿ ಯಂತ್ರಗಳಲ್ಲಿ (ವಿವಿಪ್ಯಾಟ್) ದಾಖಲಾದ ಮತಗಳಲ್ಲಿ ಯಾವುದೇ ವ್ಯತ್ಯಾಸ ಎದುರಾಗಿಲ್ಲ ಎಂದು ಬಿಇಎಲ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಎಂವಿ ಗೌತಮ ತಿಳಿಸಿದ್ದಾರೆ.
'ಬಿಇಎಲ್ನ ವಾರ್ಷಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಮತಗಳಲ್ಲಿ ಯಾವುದೇ ವ್ಯತ್ಯಾಸ ಕಂಡುಬಂದದ್ದು ವರದಿಯಾಗಿಲ್ಲ. ಅಂತಹ ಒಂದೇ ಒಂದು ಪ್ರಕರಣ ಕಂಡುಬಂದಿಲ್ಲ ಎಂದಿದ್ದಾರೆ.

ಸಿವಿಎಂಗಳಲ್ಲಿ ಯಾವುದೇ ವಂಚನೆ ಎಸಗಲು ಸಾಧ್ಯವೇ ಇಲ್ಲ. ಇವಿಎಂ ಮತ್ತು ವಿವಿಪ್ಯಾಟ್ಗಳಲ್ಲಿ ಮತಗಳು ತಾಳೆಯಾಗದ ಒಂದೂ ನಿದರ್ಶನ ಬಿಇಎಲ್ಗೆ ದೊರೆತಿಲ್ಲ. ಇವಿಎಂ ಕುರಿತಾದ ಎಲ್ಲ ವಿವಾದಗಳೂ ಈಗ ಬಗೆಹರಿದಿವೆ. ಇವಿಎಂಅನ್ನು ಹ್ಯಾಕ್ ಮಾಡಲು ಆಗುವುದಿಲ್ಲ ಎಂಬುದು ರಾಜಕೀಯ ಪಕ್ಷಗಳಿಗೆ ಚೆನ್ನಾಗಿ ಗೊತ್ತಾಗಿದೆ ಎಂದು ಹೇಳಿದ್ದಾರೆ.
ನಾವು ಇವಿಎಂಗಳನ್ನು ಮಾತ್ರ ಬಳಸಿದಾಗ ಭಾರತದ ಪ್ರಜಾಪ್ರಭುತ್ವ ಉಳಿಯಲು ಸಾಧ್ಯ. ಇವಿಎಂ ಜತೆ ವಿವಿಪ್ಯಾಟ್ಗಳು ಚುನಾವಣೆಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂಬುದನ್ನು ದೃಢಪಡಿಸಿಕೊಳ್ಳಲು ನೆರವಾಗುತ್ತದೆ. ಒಂದು ವೇಳೆ ಅಕ್ರಮ ನಡೆದರೂ ಅದನ್ನು ಪತ್ತೆಹಚ್ಚಬಹುದು. ಪೇಪರ್ ಬ್ಯಾಲಟ್ಗಳನ್ನು ಬಳಸಿದಾಗ ಅಕ್ರಮಗಳು ನಡೆದರೂ ಏನೂ ಮಾಡಲು ಆಗುವುವಿಲ್ಲ ಎಂದು ವಿವರಿಸಿದ್ದಾರೆ.
ಚುನಾವಣಾ ಆಯೋಗಕ್ಕೆ ಬಿಇಎಲ್ ಹತ್ತು ಲಕ್ಷ ಮತಯಂತ್ರಗಳನ್ನು ಪೂರೈಸಿತ್ತು ಎಂದು ಅವರು ಹೇಳಿದ್ದಾರೆ.
373ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಇವಿಎಂ ಮತ್ತು ವಿವಿಪ್ಯಾಟ್ಗಳಲ್ಲಿ ಮತಗಳ ನಡುವೆ ವ್ಯತ್ಯಾಸ ಕಂಡುಬಂದಿತ್ತು ಎಂದು 'ದಿ ಕ್ವಿಂಟ್' ವರದಿ ಮಾಡಿತ್ತು.
ಇವುಗಳಲ್ಲಿ ತಾಳೆಯಾಗಿಲ್ಲ ಎನ್ನುವುದಕ್ಕೆ ಅಲ್ಲಿ ಎಣಿಕೆಯಾದ ಇವಿಎಂ ಮತಗಳು ಹಾಗೂ ಚುನಾವಣಾ ಆಯೋಗ ನೀಡಿದ ಡೇಟಾದ ನಡುವಿನ ವ್ಯತ್ಯಾಸವೇ ಸಾಕ್ಷಿ ಎಂದು ಅದು ವರದಿಯಲ್ಲಿ ಹೇಳಿತ್ತು. ಈ ವ್ಯತ್ಯಾಸದ ಬಗ್ಗೆ ಮಾಹಿತಿ ಕೇಳಿದಾಗ ಚುನಾವಣಾ ಆಯೋಗ ಯಾವುದೇ ವಿವರಣೆ ನೀಡಿಲ್ಲ ಎಂದು ಅದು ತಿಳಿಸಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications