ಲೋಕಸಭೆ ಚುನಾವಣೆ: ಬೆಂಗಳೂರು ನಗರ, ಗ್ರಾಮಾಂತರದಲ್ಲಿ ಯಾರಿಗೆ ಗೆಲುವು
ಬೆಂಗಳೂರು, ಮೇ 23: ಹದಿನೇಳನೇ ಲೋಕಸಭೆ ಚುನಾವಣೆಯಲ್ಲಿ ಅಚ್ಚರಿಯ ಫಲಿತಾಂಶ ಬಂದಿದೆ. ಫಲಿತಾಂಶ ಕಾಂಗ್ರೆಸ್ ಆಘಾತ ನೀಡಿದ್ದರೆ ಬಿಜೆಪಿಗೆ ಕುಣಿದು ಕುಪ್ಪಳಿಸುವಂತೆ ಮಾಡಿದೆ.
ಒಟ್ಟಿನಲ್ಲಿ ಈ ಬಾರಿ ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲೇ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಂದುಕೊಂಡಿದ್ದಕ್ಕಿಂತಲೂ ಹೆಚ್ಚಿನ ಸ್ಥಾನವನ್ನು ಕರ್ನಾಟಕದಲ್ಲಿ ಗಳಿಸಿದೆ ಹಾಗೂ ದೇಶದಲ್ಲಿ ತಾವು ಅಂದುಕೊಂಡಿದ್ದ ಕ್ಷೇತ್ರದಲ್ಲೂ ಗೆಲುವು ಸಾಧಿಸಿದೆ.
ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು
ಬೆಂಗಳೂರು ಬೆಂಗಳೂರು ಗ್ರಾಮೀಣ ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಬೆಂಗಳೂರು ಉತ್ತರದಲ್ಲಿ ಬಿಜೆಪಿ ಅಭ್ಯರ್ಥಿ ಡಿವಿ ಸದಾನಂದಗೌಡ , ಕೃಷ್ಣ ಬೈರೇಗೌಡ ಎದುರು ಗೆಲುವು ಸಾಧಿಸಿದ್ದರೆ, ಬೆಂಗಳೂರು ಕೇಂದ್ರದಲ್ಲಿ ಪಿಸಿ ಮೋಹನ್ ರಿಜ್ವಾನ್ ಅರ್ಷದ್ ಎದುರು ಗೆಲುವು ಸಾಧಿಸಿದ್ದಾರೆ.
ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ , ಕಾಂಗ್ರೆಸ್ನ ಬಿಕೆ ಹರಿಪ್ರಸಾದ್ ಅವರನ್ನು ಸೋಲಿಸಿದ್ದಾರೆ. ಒಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದಂತೆ ಕರ್ನಾಟಕದಲ್ಲಿ 22 ಸ್ಥಾನವನ್ನು ಗಳಿಸುವುದರಲ್ಲಿ ಯಾವುದೇ ಸಂಶಯವಿಲ್ಲ, ಚುನಾವಣಾ ಆಯೋಗದಿಂದ ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.