Chetan Ahimsa: 300 ಸ್ಥಾನ ಗಳಿಸದ ಬಿಜೆಪಿಗೆ ನಟ ಚೇತನ್ ಅಹಿಂಸಾ ಹೇಳಿದ್ದೇನು?
ಬೆಂಗಳೂರು, ಜೂನ್. 04: ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದೆ. ಈಗಾಗಲೇ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿ ಕೂಟಗಳ ನಡುವೆ ಸಕತ್ ಪೈಪೋಟಿ ಕಾಣಿಸುತ್ತಿದೆ. ಇನ್ನೂ ಕೂಡ ಯಾವುದೇ ಪಕ್ಷ 300 ಸ್ಥಾನಗಳನ್ನು ತನ್ನದಾಗಿಸಿಕೊಂಡಿಲ್ಲ. ಈ ಸಮಯದಲ್ಲೇ ನಟ ಚೇತನ್ ಅಹಿಂಸಾ ಪ್ರತಿಕ್ರಿಯೆ ನೀಡಿದ್ದಾರೆ.
300 ಸ್ಥಾನಗಳನ್ನು ಪಡೆದು ಸ್ವತಂತ್ರವಾಗಿ ಅಧಿಕಾರ ಹಿಡಿಯುವ ಆಸೆಯಲ್ಲಿದ್ದ ಬಿಜೆಪಿಗೆ ಮುಖಭಂಗವಾಗಿದೆ. 400 ಸ್ಥಾನಗಳನ್ನು ಗಳಸಿ ಎನ್ಡಿಎ ಅಧಿಕಾರಕ್ಕೆ ಬರಲಿದೆ ಎಂದು ಹೇಳಿಕೊಂಡಿತ್ತು. ಆದರೆ, ಅದ್ಯಾವುದು ಆಗಿಲ್ಲ. ಹೀಗಾಗಿಯೇ ನಟ ಚೇತನ್ ಅಹಿಂಸಾ 'ಇದೊಂದು ಬಿಜೆಪಿಗೆ ದೊಡ್ಡ ಪಾಠ' ಎಂದು ಹೇಳಿಕೊಂಡಿದ್ದಾರೆ.

"ನಿರೀಕ್ಷೆಯಂತೆ ಮೋದಿ 3ನೇ ಬಾರಿಗೆ ಪ್ರಧಾನಿಯಾಗಲಿದ್ದಾರೆ. ಆದರೆ, ಸಕಾರಾತ್ಮಕವಾಗಿ, ಬಿಜೆಪಿಗೆ ಅಧಿಕಾರಕ್ಕೆ ಬರಲು ಎನ್ಡಿಎ ಅಗತ್ಯವಿದೆ. ಇದೊಂದು ಬಿಜೆಪಿಗೆ ದೊಡ್ಡ ಪಾಠ. ಇದರರ್ಥ ಬಿಜೆಪಿ ಹಿಂದುತ್ವ ಮತ್ತು 'ಒಂದು ರಾಷ್ಟ್ರ, ಒಂದು ಚುನಾವಣೆ' ಯಂತಹ ಒಕ್ಕೂಟ ವಿರೋಧಿ ನೀತಿಗಳನ್ನು ಅಷ್ಟು ಸುಲಭವಾಗಿ ಜಾರಿಗೆ ತರುವುದಿಲ್ಲ. ಇದು ಒಳ್ಳೆಯದೇ. ಇದು ಮೋದಿಯವರ ವಿಜಯವಲ್ಲ, ಪ್ರಜಾಪ್ರಭುತ್ವದ ವಿಜಯ" ಎಂದು ಹೇಳಿದ್ದಾರೆ.
ಇನ್ನು, ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಜಯ ಗಳಿಸಿರುವ ಭೀಮ್ ಆರ್ಮಿ ಪಾರ್ಟಿ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ರಾವಣ ಅವರಿಗೆ ಶುಭ ಹಾರೈಸಿದ್ದಾರೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿ ಓಂ ಕುಮಾರ್ ಅವರು ಸಮಾಜವಾದಿ ಪಕ್ಷದ (ಎಸ್ಪಿ) ಮನೋಜ್ ಕುಮಾರ್ ಮತ್ತು ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸುರೇಂದ್ರ ಪಾಲ್ ಸಿಂಗ್ಗಿಂತ 1,51,473ಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಚಂದ್ರಶೇಖರ್ ಆಜಾದ್ ರಾವಣ ಗೆಲುವು ದಾಖಲಿಸಿದ್ದಾರೆ.
"N.D.A. ಮತ್ತು I.N.D.I.A ಎರಡನ್ನೂ ಸೋಲಿಸಿ ಉತ್ತರ ಪ್ರದೇಶದ ನಗೀನಾ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾದ ಬಹುಜನ ಹೋರಾಟಗಾರ ಚಂದ್ರಶೇಖರ್ ಆಜಾದ್ ಅವರಿಗೆ ಅಭಿನಂದನೆಗಳು. ಆಜಾದ್ ಅವರ 'ಭೀಮ್ ಆರ್ಮಿ' ಕರ್ನಾಟಕದಲ್ಲಿ ಬಲವಾದ ಜಾತಿ ವಿರೋಧಿ ಕೆಲಸವನ್ನು ಮಾಡಿದೆ ಮತ್ತು ಇದು ನಮ್ಮ ಸಮಾನತಾವಾದಿ ದೃಷ್ಟಿಕೋನವನ್ನು ಮುಂದುವರಿಸುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications