ಇಂದಿನಿಂದ ಬಿಜೆಪಿಯ 'ಮೋದಿ ವಿಜಯ ಸಂಕಲ್ಪ ಯಾತ್ರೆ' ಆರಂಭ
Recommended Video
ಬೆಂಗಳೂರು, ಫೆಬ್ರವರಿ 22: ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ 'ಮೋದಿ ವಿಜಯ ಸಂಕಲ್ಪ ಯಾತ್ರೆ'ಯನ್ನು ಇಂದಿನಿಂದ(ಶುಕ್ರವಾರ) ಆರಂಭಿಸಲಿದೆ.
ಯಾತ್ರೆಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಚಿಕ್ಕಬಳ್ಳಾಪುರದಲ್ಲಿ ಚಾಲನೆ ನೀಡಲಿದ್ದಾರೆ. ಚಿಕ್ಕಬಳ್ಳಾಪುರದದಿಂದ ಆರಂಭವಾಗುವ ವಿಜಯ ಸಂಕಲ್ಪ ಯಾತ್ರೆ ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಸಾಗಲಿದೆ.
ಕಾಂಗ್ರೆಸ್ಗೆ ದೇಶಭಕ್ತಿ ಇಲ್ಲ, ಅವರಿಂದ ನಾವು ಕಲಿಯಬೇಕಿಲ್ಲ: ಅಮಿತ್ ಶಾ
ಮಿಷನ್ 22 ಅನ್ನು ಗುರಿಯಾಗಿರಿಸಿಕೊಂಡಿರುವ ಬಿಜೆಪಿ, ಕಳೆದ ವಿಧಾನಸಭಾ ಚುನಾವಣೆಯ ಸಮಯದಲ್ಲೂ ಪರಿವರ್ತನಾ ಯಾತ್ರೆ ಗಳಿಸುವ ಮೂಲಕ ಸಾಕಷ್ಟು ಜನಬೆಂಬಲ ಪಡೆದಿತ್ತು.
ಯಾತ್ರೆಯು ಮಾರ್ಚ್ 21 ರಂದು, ಚಿಕ್ಕಮಗಳೂರಿನಲ್ಲಿ ಮುಕ್ತಾಯವಾಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದಾದ್ಯಂತ ಇರುವ ಬೂತ್ ಕಾರ್ಯಕರ್ತರೊಂದಿಗೆ ಫೆ.28 ರಂದು ಏಕಕಾಲಕ್ಕೆ ವಿಡಿಯೋ ಸಂವಾದ ನಡೆಸಲಿದ್ದಾರೆ.
2019ರ ಲೋಕಸಭೆ ಯುದ್ಧ, ಬಿಜೆಪಿ ಘೋಷ ವಾಕ್ಯ ಪ್ರಕಟಿಸಿದ ಮೋದಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಯಲಿದ್ದು, ರಾಜ್ಯದ ಪ್ರಮುಖ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.