ಅಂತೂ ರೈಗೆ ಕಾಂಗ್ರೆಸ್ ನೀಚತನ ಅರಿವಾಯಿತು: ಕಾಲೆಳೆದ ಸುರೇಶ್ ಕುಮಾರ್
Recommended Video
ಬೆಂಗಳೂರು, ಏಪ್ರಿಲ್ 18: ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್, ತಮಗೆ ಪ್ರಕಾಶ್ ರೈ ಬೆಂಬ ದೊರೆತಿದೆ ಎಂದು ಸುಳ್ಳು ಸುದ್ದಿ ಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಕಿಡಿಕಾರಿರುವ ಪಕ್ಷೇತರ ಅಭ್ಯರ್ಥಿ ಪ್ರಕಾಶ್ ರೈ ಅವರ ವಿರೋಧಿಗಳ ಟೀಕೆಗೆ ಆಹಾರವಾಗಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಪ್ರಕಾಶ್ ರೈ ಅವರು ಮಾಡಿರುವ ವಿಡಿಯೋವನ್ನು ಹಂಚಿಕೊಂಡಿರುವ ರಾಜಾಜಿನಗರ ಶಾಸಕ ಎಸ್. ಸುರೇಶ್ ಕುಮಾರ್, 'ಅಂತೂ ಪ್ರಕಾಶ್ ರೈ ಅವರಿಗೂ ಕಾಂಗ್ರೆಸ್ ಪಕ್ಷದ 'ನೀಚ' ರಾಜಕೀಯದ ಪರಿಚಯ/ಅನುಭವ ಆಯಿತು' ಎಂದು ಕಾಲೆಳೆದಿದ್ದಾರೆ.
'ಕಾಂಗ್ರೆಸ್ನವರ ನೀಚ ರಾಜಕೀಯ ನೋಡಿ. ರಿಜ್ವಾನ್ ಬಿಎ ಎಂದು ಹೇಳಿಕೊಳ್ಳುವ ಮಜರ್ ಅಹ್ಮದ್ ಎಂಬ ವ್ಯಕ್ತಿ ನಾನು ಮತ್ತು ರಿಜ್ವಾನ್ ಒಂದು ಸಂವಾದದಲ್ಲಿರುವ ಫೋಟೊ ತೆಗೆದುಕೊಂಡು ಪ್ರಕಾಶ್ ರಾಜ್ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಅವರಿಗೆ ವೋಟ್ ಹಾಕಿ ವ್ಯರ್ಥ ಮಾಡಿಕೊಳ್ಳಬೇಡಿ. ಅದನ್ನು ರಿಜ್ವಾನ್ಗೆ ಹಾಕಿ ಎಂದು ವಾಟ್ಸಾಪ್ ಚಳವಳಿ ಮಾಡುತ್ತಿದ್ದಾರೆ.

ಕಾಂಗ್ರೆಸ್ನವರ ಇಂತಹ ನೀಚ ರಾಜಕೀಯವನ್ನು ನಾನು ಖಂಡಿಸುತ್ತೇನೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇನೆ. ದಯವಿಟ್ಟು ಇಂತಹ ಸುಳ್ಳು ಸುದ್ದಿಗಳನ್ನು ನಂಬಬೇಡಿ' ಎಂದು ಪ್ರಕಾಶ್ ರೈ ವಿಡಿಯೋ ಟ್ವೀಟ್ ಮಾಡಿದ್ದರು.
ಅಂತೂ ಪ್ರಕಾಶ್ ರಾಜ್ (ರೈ) ರವರಿಗೂ ಕಾಂಗ್ರೆಸ್ ಪಕ್ಷದ "ನೀಚ" ರಾಜಕೀಯದ ಪರಿಚಯ/ಅನುಭವ ಆಯಿತು!
— Chowkidar Sureshkumar (@nimmasuresh) 17 April 2019
ಅವರ ಮಾತುಗಳಲ್ಲೇ..... pic.twitter.com/K9zlc3rM3R
ಇದಕ್ಕೂ ಮೊದಲು ಅವರು ಟ್ವಿಟ್ಟರ್ ಮತ್ತು ಫೇಸ್ಬುಕ್ ಖಾತೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.
ರಿಜ್ವಾನ್ ಅರ್ಷದ್ ಅವರು ತುಂಬಾ ನಾಚಿಕೆಗೇಡಿ. ಅವರು ಸ್ವಂತ ಹೆಸರಿನಿಂದ ಮತಗಳನ್ನು ಸಂಪಾದಿಸಿಕೊಳ್ಳಲಾರರು. ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಒಂದೇ ಎಂಬುದು ಸಾಬೀತಾಗಿದೆ. ಪ್ರಕಾಶ್ ರೈ ಕಾಂಗ್ರೆಸ್ ಜತೆಗೆ ಇದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಪ್ರಕಾಶ್ ರಾಜ್ ಬೆಂಗಳೂರು ಕೇಂದ್ರ ಕ್ಷೇತ್ರದ ನಿಮ್ಮ ಅಭ್ಯರ್ಥಿ. ಅರ್ಷದ್ ರಿಜ್ವಾನ್ ಅವರೇ ನಿಮ್ಮದೇ ಮತಗಳನ್ನು ಸಂಪಾದಿಸಲು ಅಗತ್ಯವಾದಷ್ಟು ಧೈರ್ಯ ಪಡೆದುಕೊಳ್ಳಿ. ಉತ್ತಮ ಕ್ರೀಡಾಮನೋಭಾವ ಬೆಳೆಸಿಕೊಳ್ಳಿ ಎಂದು ರೈ ಹೇಳಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications