ಬೆಂ.ಉತ್ತರ ಜೆಡಿಎಸ್ ಶಾಸಕರ ಜೊತೆ ಎಚ್ಡಿ ದೇವೇಗೌಡರ ಸಭೆ
ಬೆಂಗಳೂರು, ಮಾರ್ಚ್ 27: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಎಚ್ಡಿ ದೇವೇಗೌಡ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಭೆ ನಡೆಯಲಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಜೆಪಿ ಭವನದಲ್ಲಿ ಸಭೆ ನಡೆಯಲಿದ್ದು,ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣಭೈರೇಗೌಡರು ಸಹ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.
ಮೈತ್ರಿ ಅಭ್ಯರ್ಥಿ ಕೃಷ್ಣಭೈರೇಗೌಡರ ಗೆಲುವಿಗೆ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಶ್ರಮಿಸುವಂತೆ ಗೌಡರು ಸಲಹೆ ಮಾಡಲಿದ್ದು, ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯ ಗೆಲುವಿಗೆ ರೂಪಿಸಬೇಕಾದ ಚುನಾವಣಾ ಕಾರ್ಯತಂತ್ರಗಳ ಬಗ್ಗೆಯೂ ಗಂಭೀರ ಚರ್ಚೆ ನಡೆಸಲಿದ್ದಾರೆ.

ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್ಗೆ ಬಿಟ್ಟುಕೊಟ್ಟಿತ್ತು.
ಆದರೆ ಕೊನೆ ಗಳಿಗೆಯಲ್ಲಿ ಜೆಡಿಎಸ್ ಈ ಕ್ಷೇತ್ರವನ್ನು ಕಾಂಗ್ರೆಸ್ಗೆ ಬಿಟ್ಟುಕೊಟ್ಟಿರುವುದರಿಂದ ಕೃಷ್ಣಭೈರೇಗೌಡ ಅವರು ಮೈತ್ರಿ ಅಭ್ಯರ್ಥಿಯಾಗಿ ಚುನಾವಣಾ ಕಣದಲ್ಲಿದ್ದಾರೆ. ಲೋಕಸಭಾ ಚುನಾವಣೆಗೆ ಮುಂದಿನ ತಯಾರಿ ಕುರಿತು ಚರ್ಚೆ ನಡೆಸಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications