ಒಂದು ಪಕ್ಷದಲ್ಲಿ 3 ತಿಂಗಳಿಗಿಂತ ಹೆಚ್ಚು ಕಾಲ ಇರಲಾರೆ: ಪ್ರಕಾಶ್ ರೈ
ಬೆಂಗಳೂರು, ಜನವರಿ 19: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಕೇಂದ್ರ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ನಟ ಪ್ರಕಾಶ್ ರೈ, ಯಾವುದೇ ರಾಜಕೀಯ ಪಕ್ಷ ಸೇರ್ಪಡೆಯಾಗದೆ ಇರುವುದಕ್ಕೆ ಕಾರಣ ಬಹಿರಂಗಪಡಿಸಿದ್ದಾರೆ.
ರಾಜಕೀಯ ಪಕ್ಷವನ್ನು ಸೇರಿಕೊಂಡರೆ ಅಲ್ಲಿ ಮೂರು ತಿಂಗಳಿಗಿಂತ ಹೆಚ್ಚು ಕಾಲ ಇರಲಾರೆ. ಈ ಕಾರಣಕ್ಕಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿರುವುದಾಗಿ ಅವರು ತಿಳಿಸಿದ್ದಾರೆ.
ಕಳೆದ ವರ್ಷದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾವು ಪಡೆದುಕೊಂಡ ಅನುಭವವೇ ಚುನಾವಣೆಗೆ ಬರಲು ಕಾರಣ ಎಂದು ಹೇಳಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ರಾಜ್ಯದಾದ್ಯಂತ ಪ್ರವಾಸ ನಡೆಸಿದ್ದೆ. ಇದರಿಂದ ಆಲಿಸಬೇಕಾಗಿದ್ದ ಜನರ ಧ್ವನಿಯನ್ನು ಅರ್ಥಮಾಡಿಕೊಂಡಿದ್ದೆ ಎಂದು ತಿಳಿಸಿದ್ದಾರೆ.
ತಾವು ಶಿಕ್ಷಿತನಾಗಿದ್ದು ಮಾತ್ರವಲ್ಲ, ನಟನಾಗಿ ಬೆಳೆದಿದ್ದೂ ಈ ಕ್ಷೇತ್ರದಿಂದಲೇ ಎಂದು ಬೆಂಗಳೂರು ಸೆಂಟ್ರಲ್ ಕ್ಷೇತ್ರವನ್ನು ಆಯ್ದುಕೊಳ್ಳಲು ಕಾರಣ ತಿಳಿಸಿದ್ದಾರೆ.
'ನಾನು ಸೇಂಟ್ ಮಾರ್ಥಾಸ್ ಆಸ್ಪತ್ರೆಯಲ್ಲಿ ಹುಟ್ಟಿದ್ದು. ಶಾಲೆ ಮತ್ತು ಕಾಲೇಜುಗಳಿಗೆ ಹೋಗಿದ್ದು ಇಲ್ಲಿ. ಬಳಿಕ ಗಾಂಧಿನಗರದಲ್ಲಿ ಸಿನಿಮಾ ಸೇರಿಕೊಂಡೆ. ನನ್ನ ಪಯಣ ಆರಂಭಿಸಿದ್ದು ಈ ಜಾಗದಿಂದ. ಹೀಗಾಗಿ ನನ್ನ ಬೇರುಗಳು ಇಲ್ಲಿಯೇ ಇವೆ. ಹೀಗಾಗಿಯೇ ನಾನು ಈ ಕ್ಷೇತ್ರವನ್ನು ಆಯ್ದುಕೊಂಡೆ' ಎಂದು ರೈ ಹೇಳಿದ್ದಾರೆ.
ಜನವರಿ 20ರಿಂದ ಕ್ಷೇತ್ರದ ಎಲ್ಲ ಎಂಟು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರವಾಸ ಕೈಗೊಳ್ಳಲಾಗುವುದು. ಇನ್ನು ಹದಿನೈದು ದಿನಗಳಲ್ಲಿ 'ಜನರ ಪ್ರಣಾಳಿಕೆ' ಅಂತಿಮಗೊಳಿಸುವುದಾಗಿ ವಿವರಿಸಿದ್ದಾರೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications