ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಾಯುಕ್ತದಲ್ಲಿ ಭ್ರಷ್ಟಾಚಾರ: ನ್ಯಾ. ಭಾಸ್ಕರ್ ರಾವ್ ಗೆ ಜಾಮೀನು

ಲೋಕಾಯುಕ್ತದಲ್ಲಿ ಅಧಿಕಾರ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಪಡೆದುಕೊಂಡಿದ್ದ ನ್ಯಾ. ವೈ ಭಾಸ್ಕರ್ ರಾವ್ ಅವರಿಗೆ ವಿಶೇಷ ನ್ಯಾಯಾಲಯದಿಂದ ಸೋಮವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

By Mahesh
|
Google Oneindia Kannada News

ಬೆಂಗಳೂರು, ನವೆಂಬರ್ 28: ಲೋಕಾಯುಕ್ತದಲ್ಲಿ ಅಧಿಕಾರ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಪಡೆದುಕೊಂಡಿದ್ದ ನ್ಯಾ. ವೈ ಭಾಸ್ಕರ್ ರಾವ್ ಅವರಿಗೆ ವಿಶೇಷ ನ್ಯಾಯಾಲಯದಿಂದ ಸೋಮವಾರ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ನ್ಯಾ. ಡಿಟಿ ದೇವೆಂದ್ರನ್ ಅವರು 1 ಲಕ್ಷ ಬಾಂಡ್ ಇಬ್ಬರ ಶ್ಯೂರಿಟಿ ಪಡೆದು ನ್ಯಾ. ಭಾಸ್ಕರ್ ರಾವ್ ಅವರಿಗೆ ಷರತ್ತುಬದ್ಧ ಮಧ್ಯಂತರ ಜಾಮೀನು ನೀಡಿದ್ದಾರೆ. [ಹೈಕೋರ್ಟಿನಲ್ಲಿ ನ್ಯಾ. ವೈ ಭಾಸ್ಕರ್ ರಾವ್ ಅರ್ಜಿ ವಜಾ]

ತಮ್ಮ ಮೇಲಿನ ಚಾರ್ಜ್ ಶೀಟ್ ರದ್ದುಗೊಳಿಸುವಂತೆ ಕೋರಿ ಹೈಕೋಟಿಗೆ ನ್ಯಾ. ಭಾಸ್ಕರ್ ರಾವ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟಿನಲ್ಲಿ ನವೆಂಬರ್ 22ರಂದು ಅರ್ಜಿ ವಜಾಗೊಂಡಿತ್ತು. ಹೀಗಾಗಿ, ಸೋಮವಾರ ವಿಚಾರಣೆಗೆ ಖುದ್ದು ಹಾಜರಾಗಿದ್ದರು. ಈ ಪ್ರಕರಣದಲ್ಲಿ ಇಲ್ಲಿ ತನಕ 11 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ನ್ಯಾ.ವೈ ಭಾಸ್ಕರ್ ರಾವ್ ಅವರು 7ನೇ ಆರೋಪಿಯಾಗಿದ್ದಾರೆ

Lokayukta extortion scandal Justice Y Bhaskar Rao gets bail
ಭಾಸ್ಕರ್ ರಾವ್ ಅವರ ಆರೋಪಗಳೇನು?: ಲೋಕಾಯುಕ್ತ ಸ್ಥಾನ, ಅಧಿಕಾರದ ದುರ್ಬಳಕೆ, ಲೋಕಾಯುಕ್ತ ಕಚೇರಿಯನ್ನು ಭ್ರಷ್ಟಾಚಾರಕ್ಕಾಗಿ ಬಳಕೆ ಮಾಡಿಕೊಂಡಿರುವುದು, ಭಾಸ್ಕರ್ ರಾವ್ ಅವರ ಪುತ್ರನಿಂದ ಕಚೇರಿ, ಅಧಿಕೃತ ನಿವಾಸದ ದೂರವಾಣಿಯಿಂದಲೇ ಹಲವರಿಗೆ ಬೆದರಿಕೆ ಕರೆ ಮಾಡಿ ಹಣ ವಸೂಲಿ ಆರೋಪ.

ಮೊದಲಿಗೆ ಈ ಪ್ರಕರಣವನ್ನು ಹಿರಿಯ ಪೊಲೀಸ್ ಅಧಿಕಾರಿ ಲೋಕಾಯುಕ್ತ ಎಸ್ಪಿಯಾಗಿದ್ದ ಸೋನಿಯಾ ನಾರಂಗ್ ಅವರ ನೇತೃತ್ವದ ತಂಡ ವಹಿಸಿಕೊಂಡಿತ್ತು. ನಂತರ ಉಪ ಲೋಕಾಯುಕ್ತ ಸುಭಾಷ್ ಬಿ ಆಡಿ ಅವರಿಂದ ತನಿಖೆ, ಆಮೇಲೆ ವಿಶೇಷ ತನಿಖಾ ತಂಡ(ಎಸ್ ಐಟಿ)ಕ್ಕೆ ಪ್ರಕರಣದ ತನಿಖೆ ಜವಾಬ್ದಾರಿ.

ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ಬಂಧನ, ಜಾಮೀನಿನ ಮೇಲೆ ಬಿಡುಗಡೆ, ಆಗಸ್ಟ್ ತಿಂಗಳಿನಲ್ಲಿ ಸಲ್ಲಿಸಲಾದ ದೋಷಾರೋಪಣ ಪಟ್ಟಿಯಲ್ಲಿ ವೈ ಭಾಸ್ಕರ್ ರಾವ್ ಅವರು 7ನೇ ಆರೋಪಿ. ಹೈಕೋರ್ಟಿನಿಂದ ಭಾಸ್ಕರ್ ರಾವ್ ಗೆ ಸಮನ್ಸ್ ಜಾರಿ. ನವೆಂಬರ್ 28ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಕಟಕಟೆ ಏರಿದ್ದರು.

Lokayukta extortion scandal Justice Y Bhaskar Rao gets Interim bail

ಎಸ್ ಐಟಿ ಸಲ್ಲಿಸಿದ ಚಾರ್ಜ್ ಶೀಟ್ ರದ್ದುಗೊಳಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸಿದ್ದ ನ್ಯಾ. ವೈ ಭಾಸ್ಕರ್ ರಾವ್ ಅವರು ನ್ಯಾಯಮೂರ್ತಿಗಳ ರಕ್ಷಣಾ ಕಾಯ್ದೆ ಉಲ್ಲೇಖಿಸಿದರೂ ಪ್ರಯೋಜನವಾಗಲಿಲ್ಲ. ವಿಶೇಷ ಅಭಿಯೋಜಕ ಪಿಎಸ್ ಜಾಧವ್ ಅವರ ವಾದ ಪುರಸ್ಕರಿಸಿದ ಹೈಕೋರ್ಟ್ ನ್ಯಾ ಆನಂದ್ ಭೈರಾರೆಡ್ಡಿ ಅವರು ವೈ ಭಾಸ್ಕರ್ ರಾವ್ ಅವರ ಅರ್ಜಿಯನ್ನು ತಿರಸ್ಕರಿತಿರಸ್ಕರಿಸಿದ್ದರು.

English summary
Karnataka High Court Justice DT Devendran today granted Interim bail to Justice Y Bhaskar Rao who is seeking an order to quash additional charge sheet filed by the SIT. Justice Rao is accused number 7 in the Lokayukta extortion scandal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X