ರೋಶನ್ ಬೇಗ್ ಸಚಿವ ಸ್ಥಾನ ಸದ್ಯಕ್ಕೆ ಅಬಾಧಿತ

ಮುಖ್ಯವಾಗಿ ಕಿಯೋನಿಕ್ಸ್ ಆಸ್ತಿ ಕಬಳಿಕೆ ಪ್ರಕರಣದಲ್ಲಿ ವಾರ್ತಾ ಸಚಿವ ರೋಶನ್ ಬೇಗ್ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿದೆ. ಕಿಯೋನಿಕ್ಸ್ ಆಸ್ತಿ ದುರ್ಬಳಕೆ ಪ್ರಕರಣವು ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ವ್ಯಾಪ್ತಿಗೆ ಬರುವುದಿಲ್ಲ ಎಂದು ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಸಿ ವರದಿ (clean chit) ಸಲ್ಲಿಸಿದ ಹಿನ್ನೆಲೆಯಲ್ಲಿ ಜಸ್ಟೀಸ್ ಎನ್ ಕೆ ಸುಧೀಂದ್ರರಾವ್ ಅವರು ಸಚಿವ ರೋಶನ್ ಬೇಗ್ ವಿರುದ್ಧದ ಪ್ರಕರಣವನ್ನು ಕೈಬಿಟ್ಟಿದ್ದಾರೆ.
ಹೈಕಮಾಂಡಿನ ಒತ್ತಡದ ಮೇರೆಗೆ ಸಿಎಂ ಸಿದ್ದರಾಮಯ್ಯ ಅವರು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕಳಂಕಿತರಾದ ರೋಶನ್ ಬೇಗ್ ಮತ್ತು ಡಿಕೆ ಶಿವಕುಮಾರ್ ಅವರುಗಳನ್ನು ಸಂಪುಟಕ್ಕೆ ಸೇರಿಸಿಕೊಂಡಿದ್ದರು. ( ಸೋದರನಿಗೆ ಬೆದರಿಕೆ: ರಕ್ಷಣೆಗೆ ನ್ಯಾ ಸುಧೀಂದ್ರರಾವ್ ಮೊರೆ )
ದೂರುದಾರ ಶಿವಾಜಿನಗರದ ಅಬ್ದುಲ್ ಹಕ್ ಸುರತಿ ಪರ ವಕೀಲರು, ಪೊಲೀಸರ ವರದಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಶೀಘ್ರದಲ್ಲೇ ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸುತ್ತೇವೆ, ಇದಕ್ಕಾಗಿ ಒಂದು ವಾರ ಅವಕಾಶ ನೀಡುವಂತೆ ಮನವಿ ಮಾಡಿದರು. ( ಎಚ್ಡಿಕೆಯನ್ನು ತರಾಟೆಗೆ ತೆಗೆದುಕೊಂಡ ನ್ಯಾ ಸುಧೀಂದ್ರರಾವ್ )
ಪ್ರಕರಣದ ಸಂಬಂಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ ವರದಿಯನ್ನು ಕೂಲಂಕಶವಾಗಿ ಪರಿಶೀಲಿಸಿದ ಜಸ್ಟೀಸ್ ಸುಧೀಂದ್ರ ರಾವ್ ಅವರು ಸುಮಾರು ಒಂದು ಗಂಟೆ ಕಾಲ ಪೊಲೀಸರನ್ನು ಮತ್ತಷ್ಟು ವಿಚಾರಿಸಿದರು.
ಪ್ರಕರಣವು ಯಾವ ರೀತಿ ಮತ್ತು ಯಾವ ಕಾರಣಕ್ಕಾಗಿ ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ವ್ಯಾಪ್ತಿಗೆ ಬರುವುದಿಲ್ಲ ಎಂಬುದನ್ನೂ ಮತ್ತು ತನಿಖೆ ಯಾವ ರೀತಿಯಲ್ಲಿ ನಡೆಸಲಾಗಿದೆ ಎಂಬುದರ ಬಗ್ಗೆಯೂ ವಿವರಣೆ ನೀಡುವಂತೆ ನಿರ್ದೇಶನ ನೀಡಿದ್ದು, ಪ್ರಕರಣವನ್ನು ಜನವರಿ 25ಕ್ಕೆ ಮುಂದೂಡಿದರು. ( ರೋಷನ್ ಬೇಗ್ ಪತ್ನಿ ವಿರುದ್ದವೂ ಬಿತ್ತು ಕೇಸ್ )
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications