Lokayukta raids BDA : ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ
ವೈಯಾಲಿಕಾವಲ್ನಲ್ಲಿರುವ ಬಿಡಿಎ ಕಚೇರಿ ಮೇಲೆ 35 ಲೋಕಾಯುಕ್ತಾ ಅಧಿಕಾರಿಗಳು ಕಚೇರಿ ನಾಲ್ಕು ಕಡೆಯಿಂದ ದಾಳಿ ಮಾಡಿ ಶೋಧ ನಡೆಸಿದ್ದಾರೆ.
ಬೆಂಗಳೂರು ಫೆಬ್ರವರಿ 10: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಚೇರಿ ಮೇಲೆ ಶುಕ್ರವಾರ ಮಧ್ಯಾಹ್ನ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ವೈಯಾಲಿಕಾವಲ್ನಲ್ಲಿರುವ ಬಿಡಿಎ ಕಚೇರಿ ಮೇಲೆ 35 ಲೋಕಾಯುಕ್ತಾ ಅಧಿಕಾರಿಗಳು ಕಚೇರಿ ನಾಲ್ಕು ಕಡೆಯಿಂದ ದಾಳಿ ಮಾಡಿ ಶೋಧ ನಡೆಸಿದ್ದಾರೆ.
ಲೋಕಾಯುಕ್ತ ಎಸ್ಪಿ ಅಶೋಕ್ ಅವರ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತಂಡದಲ್ಲಿ 6 ತಂಡಗಳು ಇದ್ದವು ಎನ್ನಲಾಗಿದೆ.

ಬಿಡಿಎ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದು, ಕಚೇರಿಯಲ್ಲಿ ನಡೆದಿರುವ ಅನೇಕ ಅಕ್ರಮಗಳ ಕುರಿತು ಶೋಧ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಕಚೇರಿಯ 4 ಬಾಗಿಲುಗಳನ್ನು ಮುಚ್ಚಿಕೊಂಡು ಅಧಿಕಾರಿಗಳು ತನಿಖೆ ನಡೆಸಿದರು ಎಂದು ವರದಿಗಳು ತಿಳಿಸಿದೆ.
ತನಿಖೆ ವೇಳೆ ಕಚೇರಿ ಗೇಟ್ ಮುಚ್ಚಿದ್ದರಿಂದ ನೂರಾರು ಸಾರ್ವಜನಿಕರು ಗಲಿಬಿಲಿಗೊಂಡರು. ಬಳಿಕ ಶೋಧ ನಡೆಯುತ್ತಿದೆ ಎಂದು ತಿಳಿದು ಗೇಟ್ ಮುಂದೆ ನಿಂತು ಕುತೂಹಲದಿಂದ ನೋಡುತ್ತಿದ್ದರು. ಬಳಿಕ ಕೆಲವರು ಶೋಧ ಮುಂದುವರಿಯುವ ಅಂದಾಜಿನಿಂದ ಮನೆ ಕಡೆ ತೆರಳಿದರು. ಬಿಡಿಎ ಸಂಸ್ಥೆ ಮೇಲೆ ಅನೇಕ ಅಕ್ರಮಗಳ ಆರೋಪ ಮೊದಲಿನಿಂದಲೂ ಇದ್ದೇ ಇದೆ. ಹಾಗಾಗಿ ಈಗ ಲೋಕಾಯಕ್ತ ದಾಳಿ ಮಾಡಿರುವುದು ಹೊಸ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಮೂಲೆ ನಿವೇಶನ (ಕಾರ್ನರ್ ಸೈಟ್) ಹಂಚಿಕೆ ಹಾಗೂ ಬಡಾವಣೆ ನಿರ್ಮಾಣ ಪ್ರಕ್ರಿಯೆಯಲ್ಲಿ ಬಿಡಿಎ ವಿರುದ್ಧ ಸಾಕಷ್ಟು ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿತ್ತು. ಬಿಡಿಎಯಿಂದ ಪರಿಹಾರ ನೀಡುವಲ್ಲಿಯೂ ವ್ಯಾಪಕ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಬಿಡಿಎ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಬಿಡಿಎ ಮೇಲೆ ದಾಳಿ, ಶೋಧಗಳು ಇದೇ ಮೊದಲಲ್ಲ, ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಆರೋಪಗಳಿಗೆ ಗುರಿಯಾಗಿರುವ ಬಿಡಿಎ ವಿರುದ್ಧ ಹಿಂದೆಯೂ ದಾಳಿಗಳು ನಡೆದಿವೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications