ಬಿಬಿಎಂಪಿ ಆಯುಕ್ತರಿಗೆ ಉಪ ಲೋಕಾಯುಕ್ತರಿಂದ ಸಮನ್ಸ್
ಬೆಂಗಳೂರು, ಡಿ. 12: ನಗರದಲ್ಲಿ ಈಚೆಗೆ ಬಿಬಿಎಂಪಿ ಕೈಗೊಂಡಿದ್ದ ರಸ್ತೆ ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಬಂದಿದೆ. ಈ ಕುರಿತು ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಣೆ ನೀಡುವಂತೆ ಉಪ ಲೋಕಾಯುಕ್ತ ನ್ಯಾ. ಸುಭಾಷ್ ಬಿ ಆಡಿ ಅವರು ಬಿಬಿಎಂಪಿ ಆಯುಕ್ತ ಎಂ. ಲಕ್ಷ್ಮಿನಾರಾಯಣ ಅವರಿಗೆ ಪತ್ರ ಬರೆದಿದ್ದಾರೆ.
ರಸ್ತೆ ಕಾಮಗಾರಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಆರೋಪಿಸಿ ಎನ್ಜಿಓ ಒಂದು ದೂರು ನೀಡಿದ ಹಿನ್ನೆಲೆಯಲ್ಲಿ ಲೋಕಾಯುಕ್ತರು ಈ ಕ್ರಮ ಕೈಗೊಂಡಿದ್ದಾರೆ.
ಹೆಚ್ಚಿನ ರಸ್ತೆ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂದು ಬಿಬಿಎಂಪಿಯ ಗುಣಮಟ್ಟ ನಿಯಂತ್ರಣ ಇಂಜಿನಿಯರಿಂಗ್ ವಿಭಾಗವು ಪತ್ತೆ ಹಚ್ಚಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಆದ್ದರಿಂದ ಈ ಕುರಿತು ಖುದ್ದು ಹಾಜರಾಗಿ ವಿವರಣೆ ನೀಡಬೇಕೆಂದು ಉಪ ಲೋಕಾಯುಕ್ತರು ಬಿಬಿಎಂಪಿ ಆಯುಕ್ತರಿಗೆ ಸೂಚಿಸಿದ್ದಾರೆ. [ಡಿಸೆಂಬರ್ 15ರಿಂದ ಶಿರಾಡಿ ಘಾಟ್ ಬಂದ್]

ಇದೇ ವರ್ಷ ಏಪ್ರಿಲ್ 1ರಿಂದ ಸೆಪ್ಟೆಂಬರ್ 30ರ ಅವಧಿಯಲ್ಲಿ ಬಿಬಿಎಂಪಿ ಬೆಂಗಳೂರು ನಗರದಲ್ಲಿ 189 ರಸ್ತೆಗಳ ನಿರ್ಮಾಣ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೊಂಡಿತ್ತು. ಇವುಗಳಲ್ಲಿ 171 ರಸ್ತೆಗಳ ಕೆಲಸ ಕಳಪೆ ದರ್ಜೆಯದ್ದು. ಈ ಕಾಮಗಾರಿಗಳಲ್ಲಿ ಭಾರೀ ಅಕ್ರಮ ನಡೆದಿದ್ದು, ತನಿಖೆ ನಡೆಸಬೇಕೆಂದು ಕೋರಿ ಕರ್ನಾಟಕ ಜನಹಿತ ವೇದಿಕೆಯ ಅಧ್ಯಕ್ಷ ಸಾಯಿದತ್ತಾ ಅವರು ಲೋಕಾಯುಕ್ತಕ್ಕೆ ಡಿಸೆಂಬರ್ 2ರಂದು ದೂರು ನೀಡಿದ್ದರು.
ಬೆಂಗಳೂರಿನಲ್ಲಿ ಕೈಗೊಂಡ ರಸ್ತೆ ಕಾಮಗಾರಿಗಳಿಗೆ ಒಂದು ಸಾವಿರ ಕೋಟಿ ರೂ. ವ್ಯಯಿಸಿರುವುದಾಗಿ ಬಿಬಿಎಂಪಿ ತಿಳಿಸಿದೆ. ಆದರೆ, ರಸ್ತೆಗಳೆಲ್ಲಿ ಗುಂಡಿಗಳು ಹಾಗೆಯೇ ಉಳಿದಿವೆ ಹಾಗೂ ಹಾಕಿರುವ ತೇಪೆಗಳು ಕಳಪೆಯಾಗಿವೆ ಎಂದು ಸಾಯಿದತ್ತಾ ಆರೋಪಿಸಿದ್ದಾರೆ.
-
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ











Click it and Unblock the Notifications