ಟೆಕ್ಕಿ ಸಾವು: ಬಿಬಿಎಂಪಿ ಅಧಿಕಾರಿಗಳಿಗೆ ಸಮನ್ಸ್ ನೀಡಿ, ವರದಿ ಸಲ್ಲಿಸಲು ಲೋಕಾಯುಕ್ತ ಆದೇಶ
ಬೆಂಗಳೂರು, ಮೇ. 28: ಈ ತಿಂಗಳು ಬೆಂಗಳೂರಿನಲ್ಲಿ ಬಿದ್ದ ಮಳೆಗೆ ಅನಾಹುತಗಳು ನಡೆದಿದ್ದು, ಇನ್ನು ಕಣ್ಣಮುಂದೆ ಇದೆ. ಮೇ 21 ರಂದು ನಗರದ ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ 23 ವರ್ಷದ ಟೆಕ್ಕಿ ಸಾವನ್ನಪ್ಪಿದ ನಂತರ ಕರ್ನಾಟಕ ಲೋಕಾಯುಕ್ತರು ಬೆಂಗಳೂರಿನ ಪೌರಾಡಳಿತ ಮಂಡಳಿಯ ಅಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ಕ್ರಮ ಪ್ರಾರಂಭಿಸಿದ್ದು, ಸಮನ್ಸ್ ನೀಡಿದೆ.
ಘಟನೆ ಸಂಬಂಧ ಲೋಕಾಯುಕ್ತರು ಈಗಾಗಲೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳಿಗೆ ಸಮನ್ಸ್ ಕಳುಹಿಸಿದ್ದು, ಮಳೆನೀರು ಚರಂಡಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವ ಬಗ್ಗೆ ವಿವರಣೆ ಕೇಳಿದ್ದಾರೆ.

ಡೆಕ್ಕನ್ ಹೆರಾಲ್ಡ್ ವರದಿಯ ಪ್ರಕಾರ, ಲೋಕಾಯುಕ್ತರು ನೋಟಿಸ್ನಲ್ಲಿ ಪುರಸಭೆಯ ಪ್ರದೇಶ ಅಥವಾ ಸ್ಥಳೀಯ ಸಂಸ್ಥೆಯೊಳಗೆ ವಾಸಿಸುವ ಪ್ರತಿಯೊಬ್ಬ ನಾಗರಿಕರಿಗೂ ಉತ್ತಮ ಸ್ಥಿತಿಯ ರಸ್ತೆಗಳನ್ನು ಹೊಂದುವ ಹಕ್ಕಿದೆ ಎಮದಿದೆ. ಜೊತೆಗೆ ಭಾರತೀಯ ಸಂವಿಧಾನದ 21 ನೇ ವಿಧಿಯನ್ನು ಉಲ್ಲೇಖಿಸಿದ್ದು, ಪ್ರತಿ ನಾಗರಿಕರಿಗೆ ಇರುವ ಮೂಲಭೂತ ಹಕ್ಕುಗಳ ಬಗ್ಗೆ ತಿಳಿಸಿದೆ.
ಬಿಬಿಎಂಪಿ ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ ವಿಫಲವಾಗಿದೆ ಮತ್ತು ಇದನ್ನು ದುರಾಡಳಿತದ ನಿದರ್ಶನ ಎಂದು ಲೋಕಾಯುಕ್ತ ಇಲಾಖೆ ಹೇಳಿದೆ. ಬಿಬಿಎಂಪಿ ಮುಖ್ಯ ಆಯುಕ್ತರು, ವಲಯ ಆಯುಕ್ತರು, ಬಿಬಿಎಂಪಿ ಪೂರ್ವ ವಲಯ, ಶಿವಾಜಿನಗರ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಂಪಂಗಿರಾಮನಗರ ವಾರ್ಡ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮತ್ತು ಮಳೆನೀರು ಚರಂಡಿಗಳ ಕಾರ್ಯಪಾಲಕ ಎಂಜಿನಿಯರ್ ಅವರನ್ನು ತಮ್ಮ ಮುಂದೆ ಹಾಜರುಪಡಿಸಲು ಮತ್ತು ಘಟನೆಯ ವರದಿಯನ್ನು ಸಲ್ಲಿಸಲು ಸಮನ್ಸ್ ನೀಡಿದೆ.

ಮೇ 21 ರಂದು, ಕೆಆರ್ ಸರ್ಕಲ್ ಅಂಡರ್ಪಾಸ್ನಲ್ಲಿ ಕಾರು ಮುಳುಗಿ ಭಾನು ರೇಖಾ ಎಂದು ಗುರುತಿಸಲಾದ 23 ವರ್ಷದ ಟೆಕ್ಕಿ ಸಾವನ್ನಪ್ಪಿದರೆ, ಆಕೆಯ ಐವರು ಸಂಬಂಧಿಕರನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ರಕ್ಷಿಸಿದ್ದರು. ಆಕೆಯ ಸಹೋದರ ಸಂದೀಪ್ ನೀಡಿದ ದೂರಿನ ಮೇರೆಗೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಕೂಡ ದಾಖಲಾಗಿದೆ.
ನಿರ್ಲಕ್ಷ್ಯದ ಕಾರಣಕ್ಕೆ ವಾಹನ ಚಾಲಕನನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವು) ಅಡಿಯಲ್ಲಿ ಚಾಲಕ ಮತ್ತು ಬಿಬಿಎಂಪಿಯಿಂದ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications