ಲೋಕಾಯುಕ್ತ ನ್ಯಾ.ವಿಶ್ವನಾಥ ಶೆಟ್ಟಿ ಆರೋಗ್ಯದಲ್ಲಿ ಚೇತರಿಕೆ
ಬೆಂಗಳೂರು, ಮಾರ್ಚ್ 09: ತೇಜರಾಜ್ ಶರ್ಮಾ ಎಂಬಾತನಿಂದ ಚೂರಿ ಇರಿತಕ್ಕೆ ಒಳಗಾಗಿ ವಿಠಲ್ ಮಲ್ಯಾ ಆಸ್ಪತ್ರೆ ಸೇರಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಆರೋಗ್ಯದಲ್ಲಿ ಗಮನಾರ್ಹ ಚೇತರಿಕೆ ಕಂಡು ಬಂದಿದೆ.
ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿನ್ನೆ ಸಂಜೆ ವೇಳೆಗೆ ಸ್ವಲ್ಪ ಹುಷಾರಾಗಿದ್ದು, ಕೊಠಡಿಯಲ್ಲಿ ಸ್ವಲ್ಪ ಕಾಲ ನಡೆದಾಡಿದ್ದಾರೆ. ಜೊತೆಗೆ ಅವರ ಸಂಬಂಧಿಕರೊಂದಿಗೂ ಮಾತನಾಡಿದ್ದಾರೆ ಎಂದು ಅವರ ಚಿಕಿತ್ಸೆ ಹೊಣೆ ಹೊತ್ತಿರುವ ವಿಠಲ್ ಮಲ್ಯ ಆಸ್ಪತ್ರೆ ವೈದ್ಯ ದಿವಾಕರ್ ಭಟ್ ಹೇಳಿದ್ದಾರೆ.
ಸಂಪೂರ್ಣ ಚೇತರಿಕೆಗೆ ಇನ್ನಷ್ಟು ಕಾಲಾವಕಾಶದ ಅವಶ್ಯಕತೆ ಇದೆ ಎಂದ ವೈದ್ಯರು 'ಸದ್ಯಕ್ಕೆ ಅವರಿಗೆ ಯಾವುದೇ ಆಹಾರ ನೀಡುತ್ತಿಲ್ಲ. ಶಸ್ತ್ರಚಿಕಿತ್ಸೆ ಆಗಿ 48 ಗಂಟೆಗಳು ಕಳೆಯುವವರೆಗೂ ಆಹಾರ ನೀಡುವುದಿಲ್ಲ. ಅವರ ದೇಹಾರೋಗ್ಯದ ಸ್ಥಿತಿ ನೋಡಿಕೊಂಡು ಶುಕ್ರವಾರ ಅಥವಾ ಶನಿವಾರದಿಂದ ದ್ರವರೂಪದ ಆಹಾರ ನೀಡಲಾಗುವುದು' ಎಂದು ಮಾಹಿತಿ ನೀಡಿದರು.

ವಿಶ್ವನಾಥ ಶೆಟ್ಟಿ ಅವರ ಎದೆಗೆ ಮತ್ತು ಹೊಟ್ಟೆಗೆ ಚೂರಿ ಇರಿತದಿಂದ ಆಳ ಗಾಯವಾಗಿದ್ದು, ದೇಹದ ಮೇಲೆ ಒಟ್ಟು 11 ಕಡೆ ಗಾಯಗಳಾಗಿವೆ ಎಂದ ವೈದ್ಯ ದಿವಾಕರ್ ವಿಶ್ವನಾಥ್ ಅವರನ್ನು ಅರ್ಧ ತಾಸು ತಡವಾಗಿ ಆಸ್ಪತ್ರೆಗೆ ಕರೆತಂದಿದ್ದರೆ ಅವರ ಜೀವಕ್ಕೆ ಅಪಾಯವಿತ್ತು ಎಂದು ಹೇಳಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಅವರನ್ನು ಶಸ್ತ್ರ ಚಿಕಿತ್ಸೆಯ ನಂತರ ಇರಿಸಲಾಗಿರುವ ತೀವ್ರ ನಿಗಾ ಘಟಕದ ವಾರ್ಡ್ಗೆ ಬಿಗಿ ಭದ್ರತೆ ನೀಡಲಾಗಿದೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications