ಮೇಯರ್ ವಿದೇಶ ಪ್ರವಾಸಕ್ಕೆ ಲೋಕಸತ್ತಾ ವಿರೋಧ
ಬೆಂಗಳೂರು, ಜೂ. 12 : ಕಸದ ಸಮಸ್ಯೆ ನಿವಾರಣೆ ಬಗ್ಗೆ ಅಧ್ಯಯನ ನಡೆಸಲು ದುಬೈ ಪ್ರವಾಸ ಕೈಗೊಳ್ಳಲು ನಿರ್ಧರಿಸಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಕಟ್ಟೆ ಸತ್ಯನಾರಾಯಣ ಅವರ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ. ಮೇಯರ್ ತಮ್ಮ ಉದ್ದೇಶಿತ ಪ್ರವಾಸವನ್ನು ಕೈಬಿಡಬೇಕು ಎಂದು ಲೋಕಸತ್ತಾ ಪಕ್ಷ ಆಗ್ರಹಿಸಿದೆ.
ಮೇಯರ್ ಪ್ರವಾಸಕ್ಕೆ ವಿರೋಧ ವ್ಯಕ್ತಪಡಿಸಿರುವ ಲೋಕಸತ್ತಾ ಪಕ್ಷ, ಮೇಯರ್ ಅವರ ಉದ್ದೇಶಿತ ದುಬೈ ಪ್ರವಾಸ ಈ ಹಿಂದಿನ ವಿದೇಶಿ ಪ್ರವಾಸಗಳಂತೆ ಯಾವುದೇ ಪ್ರಯೋಜನಕ್ಕೆ ಬರುವುದಿಲ್ಲ ಮತ್ತು ಅನವಶ್ಯಕ ಖರ್ಚು ಮತ್ತು ಕಾಲಹರಣಕ್ಕೆ ಕಾರಣವಾಗುತ್ತದೆ ಎಂದು ಪಕ್ಷ ಆರೋಪಿಸಿದೆ. [ಕಸದ ಸಮಸ್ಯೆಗೆ ದುಬೈ, ಸ್ಯಾನ್ ಫ್ರಾನ್ಸಿಸ್ಕೋ ನೆರವು]

ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆರ್ಥಿಕ ಸಂಕಷ್ಟದಲ್ಲಿದೆ ಮತ್ತು ಇದರಿಂದ ಪಾರಾಗಲು ಸಾರ್ವಜನಿಕ ಕಟ್ಟಡಗಳನ್ನು ಆಡವಿಟ್ಟಿರುವುದು ಮೇಯರ್ ಅವರಿಗೆ ಸಹ ತಿಳಿದಿದೆ. ಆದರೂ ಸಹ ವಿದೇಶ ಪ್ರವಾಸ ಕೈಗೊಂಡು ದುಂದುವೆಚ್ಚ ಮಾಡಲು ಹೊರಟಿರುವುದು ಖಂಡನೀಯ. ಆದ್ದರಿಂದ ಲೋಕಸತ್ತಾ ಪಕ್ಷವು ಈ ವಿದೇಶಿ ಪ್ರವಾಸವನ್ನು ಈ ಕೂಡಲೇ ರದ್ದುಗೊಳಿಸಬೇಕೆಂದು ಒತ್ತಾಯಿಸಿದೆ. [ಕಸ ಗಲಾಟೆ: ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ]
ಹಿಂದಿನ ಪ್ರವಾಸಗಳ ಕಥೆ ಏನು : ಬಿಬಿಎಂಪಿ ಮೇಯರ್ ಗಳು ಹಿಂದೆಯೂ ವಿದೇಶ ಪ್ರವಾಸ ಕೈಗೊಂಡು ಅನೇಕ ತಂತ್ರಜ್ಞಾನಗಳ ಬಗ್ಗೆ ಅಧ್ಯಯನ ನಡೆಸಿದ್ದರು. ಸದ್ಯ ಮೇಯರ್ ಪ್ರವಾಸ ಕೈಗೊಳ್ಳುವ ಮೊದಲು ಈ ಹಿಂದಿನ ಪ್ರವಾಸಗಳಿಂದ ಆಗಿರುವ ಪ್ರಯೋಜನಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು ಎಂದು ಪಕ್ಷ ಆಗ್ರಹಿಸಿದೆ. [ಸಚಿವರ ಮನೆ ಸುತ್ತ ಕಸ ಎತ್ತಿ ಲೋಕಸತ್ತಾ ಪ್ರತಿಭಟನೆ]
ಮೇಯರ್ ಕೈಗೊಳ್ಳಲು ಉದ್ದೇಶಿಸಿರುವ ಪ್ರವಾಸ ಮತ್ತೊಂದು ಮೋಜು ಮಸ್ತಿಯ ಪ್ರವಾಸವಾಗಲಿದೆಯೆ ಹೊರತು ಮಂಡೂರಿನ ಅಥವಾ ಬೆಂಗಳೂರಿನ ಜನರಿಗೆ ಇದರಿಂದ ಯಾವುದೇ ಪ್ರಯೋಜನವೂ ಆಗುವುದಿಲ್ಲ. ಬೆಂಗಳೂರಿನಲ್ಲಿಯೇ ಅನೇಕರು ತಮ್ಮ ಸ್ವಂತ ಶ್ರಮದಿಂದ ತಮ್ಮ ತಮ್ಮ ಪ್ರದೇಶಗಳಲ್ಲಿ ಪರಿಸರಸ್ನೇಹಿ ಮತ್ತು ಕಡಿಮೆ ಖರ್ಚಿನ ಅನೇಕ ವಿಧಾನಗಳನ್ನು ಯಶಸ್ವಿಯಾಗಿ ನಿರ್ವಹಿಸುತ್ತಿದ್ದಾರೆ ಇವುಗಳ ಬಗ್ಗೆ ಮೊದಲು ಅಧ್ಯಯನ ನಡೆಸಲಿ ಎಂದು ಪಕ್ಷ ಸಲಹೆ ನೀಡಿದೆ.
ಮಹಾಪೌರರು ಮತ್ತು ಪಾಲಿಕೆಯ ಅಧಿಕಾರಿಗಳು ಆಸಕ್ತಿ ತೋರಿಸಿದರೆ, ಬೆಂಗಳೂರಿನಲ್ಲೇ ಇರುವ ಅನೇಕ ಯಶಸ್ವಿ ಕಸ ವಿಲೇವಾರಿ ಪದ್ಧತಿಗಳನ್ನು ಲೋಕಸತ್ತಾ ಪಕ್ಷದ ವತಿಯಿಂದ ಅವರಿಗೆ ತೋರಿಸಲಾಗುವುದು, ಅದು ಪಾಲಿಕೆಗೆ ಯಾವುದೇ ಹೊರೆಯಾಗದ ರೀತಿಯಲ್ಲಿ ಮತ್ತು ಅದನ್ನು ಕಾರ್ಯರೂಪಕ್ಕೆ ತರಲು ಅವರೊಂದಿಗೆ ಕೆಲಸ ಮಾಡುತ್ತೇವೆ ಎಂದು ಪಕ್ಷ ಭರವಸೆ ನೀಡಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications