ಆಪರೇಷನ್ ಕಮಲದ 'ಕಿಂಗ್ ಪಿನ್' ಆರೋಪಿ ಉದಯ್ ಗೌಡಗೆ ಲುಕ್ಔಟ್ ನೋಟಿಸ್
ಬೆಂಗಳೂರು, ಅಕ್ಟೋಬರ್ 2: ಆಪರೇಷನ್ ಕಮಲ ಪ್ರಕರಣದ ಕಿಂಗ್ ಪಿನ್ ಎಂಬ ಆರೋಪ ಹೊತ್ತಿರುವ ಉದಯ್ ಗೌಡ ಬಂಧನಕ್ಕೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆಯೇ ಉದಯ್ ಗೌಡ ನಾಪತ್ತೆಯಾಗಿದ್ದು, ಶ್ರೀಲಂಕಾದಲ್ಲಿ ತಲೆಮರೆಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಸಕಲೇಶಪುರ ಶಾಸಕ ಎಚ್.ಕೆ. ಕುಮಾರಸ್ವಾಮಿಗೆ ಉದಯಗೌಡ ಮೂಲಕ ಬಿಜೆಪಿ ಆಫರ್
ಹೀಗಾಗಿ ಅವರ ಪತ್ತೆಗೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಲುಕ್ ಔಟ್ ಜಾರಿ ಮಾಡಿದ್ದಾರೆ. ಪೊಲೀಸರಿಗೆ ಬೇಕಾಗಿರುವ ವ್ಯಕ್ತಿ ಯಾವುದೇ ಕಡೆ ಪ್ರಯಾಣ ಮಾಡುತ್ತಿರುವುದು ಕಂಡುಬಂದರೆ ಮಾಹಿತಿ ನೀಡಲು ಲುಕ್ಔಟ್ ನೋಟಿಸ್ ಹೊರಡಿಸಲಾಗುತ್ತದೆ.
ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿಗೆ ಸೆಳೆಯಲು ಹಣದ ಆಮಿಷ ಒಡ್ಡುವ ಚಟುವಟಿಕೆಯಲ್ಲಿ ಉದಯ್ ಗೌಡ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ದೂರು ನೀಡಲಾಗಿತ್ತು.
ಸಕಲೇಶಪುರದ ಶಾಸಕ ಎಚ್.ಕೆ. ಕುಮಾರಸ್ವಾಮಿ ಅವರನ್ನು ಬಿಜೆಪಿಗೆ ಸೇರ್ಪಡೆಯಾಗುವಂತೆ ಅವರ ಪತ್ನಿ ಮೂಲಕ ಮನವೊಲಿಸುವ ಕಾರ್ಯಕ್ಕೆ ಉದಯ್ ಗೌಡ ಮುಂದಾಗಿದ್ದರು ಎಂದು ಸಹ ಆರೋಪಿಸಲಾಗಿದೆ.
ಬಿಜೆಪಿ ಕಿಂಗ್ಪಿನ್ ಆರೋಪ ಹೊತ್ತಿರುವ ಉದಯ್ಗೌಡ ಒಡೆತನದ ಕ್ಲಬ್ ಬಂದ್
ಆಪರೇಷನಲ್ ಕಮಲದಲ್ಲಿ ಭಾಗಿಯಾಗಿರುವ ಕಿಂಗ್ ಪಿನ್ಗಳು ಯಾರೆಂದು ತಮಗೆ ಗೊತ್ತು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದು ರಾಜ್ಯದಾದ್ಯಂತ ತೀವ್ರ ಸಂಚಲನ ಉಂಟುಮಾಡಿತ್ತು.
ಸರ್ಕಾರ ಕೆಡವಲು ಯತ್ನ: ಬಿಜೆಪಿ ವಿರುದ್ಧ ಸಭಾಧ್ಯಕ್ಷರಿಗೆ ಜೆಡಿಎಸ್ ದೂರು
ಅದರ ಬೆನ್ನಲ್ಲೇ ಉದಯ್ ಗೌಡ ಅವರಿಗೆ ಸೇರಿದ ಕ್ಲಬ್ ಒಂದರ ಮೇಲೆ ಕೇಂದ್ರ ಅಪರಾಧ ವಿಭಾಗದ ಪೊಲೀಸರು ದಾಳಿ ನಡೆಸಿದ್ದರು. ಎಂಜಿ ರಸ್ತೆಯಲ್ಲಿರುವ ಈ ಕ್ಲಬ್ಅನ್ನು ಕಾನೂನು ಬಾಹಿರವಾಗಿ ನಡೆಸಲಾಗುತ್ತಿದೆ ಎಂದು ಕ್ಲಬ್ಗೆ ಬೀಗ ಹಾಕಲಾಗಿತ್ತು.