ಪಾಲಿಸಿದರೆ ವರ, ಉಲ್ಲಂಘಿಸಿದರೆ ಶಾಪ, ಇದು ಗಣೇಶನ ನಿಯಮ
ಬೆಂಗಳೂರು, ಆಗಸ್ಟ್ 3: ಗಣೇಶನ ಹಬ್ಬಕ್ಕೂ ಮುನ್ನವೇ ಬೆಂಗಳೂರಿನ ಬೀದಿಬೀದಿಗಳಲ್ಲಿ ಗಣೇಶ ಕಾಣಿಸಿಕೊಳ್ಳುತ್ತಿದ್ದಾನೆ, ಟ್ರಾಫಿಕ್ ನಿಯಮ ಪಾಲಿಸಿದರೆ ವರ ಕೊಡ್ತಾನೆ ಉಲ್ಲಂಘಿಸಿದರೆ ಶಾಪ ಕೊಡ್ತಾನೆ.ನಿಮಗೆ ಜಾಗೃತಿ ಮೂಡಿಸಲು ಬಂದಿದ್ದಾನೆ.
ಈಗಾಗಲೇ ಹಲಸೂರು ಟ್ರಾಫಿಕ್ ಪೊಲೀಸರು ಕಲಾವಿದ ವೀರೇಶ್ ಅವರ ಸಹಾಯ ಪಡೆದು ಯಮನ ವೇಷಧರಿಸಿ ಜಾಗೃತಿ ಮೂಡಿಸಿದ್ದಾರೆ, ಇದೀಗ ಬೆಂಗಳೂರು ಉತ್ತರ ರಾಜಾಜಿನಗರ ಟ್ರಾಫಿಕ್ ಪೊಲೀಸರು ಗಣೇಶನ್ನು ಬಳಸಿಕೊಂಡು ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.
ನಗರದಲ್ಲಿ ಈಗಘಾಲೇ 70 ಲಕ್ಷಕ್ಕೂ ಹೆಚ್ಚು ವಾಹನಗಳಿವೆ, ದಿನನಿತ್ಯ ನಗರದೊಳಗೆ 25 ಲಕ್ಷಕ್ಕೂ ಹೆಚ್ಚು ವಾಹನಗಳು ಸಂಚರಿಸುತ್ತವೆ, ಸಿಗ್ನಲ್ ಉಲ್ಲಂಘನೆ, ಹೆಲ್ಮೆಟ್ ಧರಿಸದೇ ಇರುವುದು, ಅತಿಯಾದ ವೇಗದಲ್ಲಿ ಚಾಲನೆ ಹೀಗೆ ಅನೇಕ ಸಂಚಾರ ನಿಯಮವನ್ನು ಉಲ್ಲಂಘಿಸಲಾಗುತ್ತಿದೆ ಅವರಿಗೆ ಜಾಗೃತಿ ಮೂಡಿಸುವ ಕೆಲಸವನ್ನು ಪೊಲೀಸರು ಮಾಡುತ್ತಿದ್ದಾರೆ.

ಇಷ್ಟು ದಿನ ಜಾಗೃತಿ ಕಾರ್ಯಕ್ರಮ ಎಂದು ಪೊಲೀಸರು ಕರಪತ್ರಗಳನ್ನು ಹಂಚುತ್ತಿದ್ದರು, ಹೆಲ್ಮೆಟ್ ಇಲ್ಲದವರಿಗೆ ದಂಡ ವಿಧಿಸುತ್ತಿದ್ದರು ಜನರು ಮಾತ್ರ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದೆ ದಂಡ ಕಟ್ಟಿ ಹೋಗುತ್ತಿದ್ದರು.
ಇದೆಲ್ಲವನ್ನೂ ಗಮನಸಿಸಿದ ಟ್ರಾಫಿಕ್ ಪೊಲೀಸರು ನಿಯಮ ಉಲ್ಲಂಘಿಸಿ ದಂಡ ಕಟ್ಟುವುದು ಮುಖ್ಯವಲ್ಲ ನಿಯಮವನ್ನು ಉಲ್ಲಂಘಿಸಬಾರದು ಎಂದು ಅವರ ಮನಸ್ಸಿನಲ್ಲಿಯೇ ಅಂದುಕೊಳ್ಳುವಂತೆ ಮಾಡಬೇಕು ಇದಕ್ಕೆ ದೇವರೇ ಬರಬೇಕು ಎಂದು ಹೇಳಿ ದೇವರ ವೇಷವನ್ನು ಹಾಕಿಸಿದ್ದಾರೆ.

ಈ ಕುರಿತು ಬೆಂಗಳೂರು ಉತ್ತರ ಟ್ರಾಫಿಕ್ ಎಸಿಪಿ ಜಗದೀಶ್ ಒನ್ ಇಂಡಿಯಾಗೆ ಪ್ರತಿಕ್ರಿಯೆ ನೀಡಿದ್ದು, ಜನರಿಗೆ ದೇವರೆಂದರೆ ಭಯ ಅವರು ದೇವರು ಹೇಳಿದರೆ ಮಾತ್ರ ಒಪ್ಪುತ್ತಾರೆ, ಹಾಗಾಗಿ ಸಂಚಾರ ನಿಯಮ ಉಲ್ಲಂಘಿಸಿದಂತೆ ಜಾಗೃತಿ ಮೂಡಿಸಲು ಗಣೇಶನ ವೇಷವನ್ನು ಹಾಕಿಸಲಾಗಿದೆ. ಆದರೆ ಈ ವೇಷ ಹಾಕಿರುವುದು ಕಲಾವಿದರಲ್ಲ ಬದಲಾಗಿ ಪೊಲೀಸ್ ಕಾನ್ಸ್ಟೆಬಲ್ ಬಸವರಾಜ್, ಇದಕ್ಕೆ ಜನರಿಂದ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
-
AI ಎಫೆಕ್ಟ್: 2026ರಲ್ಲೂ ಮುಂದುವರಿದ ಉದ್ಯೋಗ ಕಡಿತ; ಯಾವ್ಯಾವ ಕಂಪನಿಗಳಿಂದ ಎಷ್ಟು ವಜಾ? ಪಟ್ಟಿ ಇಲ್ಲಿದೆ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್












Click it and Unblock the Notifications