ಬೆಂಗಳೂರಲ್ಲಿ ಜಗನ್ನಾಥ ಯಾತ್ರೆ ಛಾಯಾಚಿತ್ರಗಳ ಅನಾವರಣ
ಬೆಂಗಳೂರು, ಜುಲೈ, 04: ಬೆಂಗಳೂರಿನ ಚಿತ್ರಕಲಾ ಪರಿಷತ್ ನಲ್ಲಿ ಆಯೋಜಿಸಿದ್ದ ಜಗನ್ನಾಥ ಯಾತ್ರಾ ಛಾಯಾಚಿತ್ರ ಪ್ರದರ್ಶನಕ್ಕೆ ಭರ್ಜರಿ ಯಶಸ್ಸು ಸಿಕ್ಕಿದೆ.
ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೊಶಿಯಲ್ ಸೈನ್ಸ್(ಕೆಐಎಸ್ ಎಸ್) ಆಶ್ರಯದಲ್ಲಿ ಎರಡು ದಿನ ನಡೆದ ಪ್ರದರ್ಶನವನ್ನು ಸಾವಿರಾರು ಜನ ಕಣ್ಣು ತುಂಬಿಕೊಂಡರು. ಪ್ರತಿವರ್ಷ ಲಕ್ಷಾಂತರ ಜನ ಜಗನ್ನಾಥ ಯಾತ್ರೆಯನ್ನು ಕೈಗೊಳ್ಳುತ್ತಾರೆ. ಅದರ ಎಲ್ಲ ಚಿತ್ರಣ, ಯಾತ್ರೆಯ ಸಣ್ಣ ಸಣ್ಣ ಅಂಶಗಳನ್ನು ಹತ್ತಿರದಿಂದ ನೋಡುವ ಅವಕಾಶ ಬೆಂಗಳೂರಿನಲ್ಲೇ ಸಿಕ್ಕಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಕೆಐಐಎಸ್ ಮತ್ತು ಕೆಐಐಟಿ ಸಂಸ್ಥಾಪಕ ಡಾ. ಅಚ್ಯುತ ಸಮಂತ, ರಥಯಾತ್ರೆಯ ಯಶಸ್ಸಿಗೆ ಕಾರಣರಾದ ಎಲ್ಲರಿಗೆ ಧನ್ಯವಾದ ಅರ್ಪಿಸಿದರು. ಬೆಂಗಳೂರಿಗರು ಸದಾ ಹೊಸ ಅಂಶಗಳಿಗೆ ಪ್ರೋತ್ಸಾಹ ನೀಡುತ್ತಲೇ ಬಂದಿದ್ದಾರೆ ಎಂದು ಹೇಳಿದರು.

ಭುವನೇಶ್ವರಕ್ಕೆ ಮತ್ತೊಂದು ರಥಯಾತ್ರೆ
ಜಗನ್ನಾಥ ರಥಯಾತ್ರೆ ಯಶಸ್ವಿಯಾಗಿದ್ದು ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೊಶಿಯಲ್ ಸೈನ್ಸ್ ವಿದ್ಯಾರ್ಥಿಗಳು ಜುಲೈ 6 ರಿಂದ ಭುವನೇಶ್ವರಕ್ಕೆ ಮತ್ತೊಂದು ರಥಯಾತ್ರೆ ಹಮ್ಮಿಕೊಂಡಿದ್ದಾರೆ.

ವರ್ಷದಲ್ಲಿ ಒಮ್ಮೆ
ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೊಶಿಯಲ್ ಸೈನ್ಸ್ ವರ್ಷದಲ್ಲಿ ಒಮ್ಮೆ ಜಗನ್ನಾಥ ಯಾತ್ರೆ ಹಮ್ಮಿಕೊಳ್ಳುತ್ತ ಬಂದಿದೆ.

ಯಾರು ಸಂಘಟಿಸಿದ್ದರು?
ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೊಶಿಯಲ್ ಸೈನ್ಸ್ ನಲ್ಲಿ ಅಧ್ಯಯನ ಮಾಡುತ್ತಿರುವ ಬುಡಕಟ್ಟು ವಿದ್ಯಾರ್ಥಿಗಳು ಯಾತ್ರೆಯನ್ನು ಆಯೋಜನೆ ಮಾಡಿದ್ದರು.

ಎಲ್ಲದರ ಸಾಕಾರ
ಭಕ್ತಿ, ಸಂಕಲ್ಪ, ಶಿಸ್ತು ಮತ್ತು ನಂಬಿಕೆಗಳ ಆಧಾರದಲ್ಲಿ ಯಾತ್ರೆ ಹಮ್ಮಿಕೊಳ್ಳಲಾಗಿದ್ದು ಯಾತ್ರೆಯ ಎಲ್ಲ ವಿವರಗಳನ್ನು ಛಾಯಾ ಚಿತ್ರ ಪ್ರದರ್ಶನ ಕಣ್ಣಿಗೆ ಕಟ್ಟಿಕೊಟ್ಟಿತು.

ಶಂಕರಮೂರ್ತಿ ಉದ್ಘಾಟನೆ
ವಿಧಾನ ಪರಿಷತ್ ಸಭಾಪತಿ ಡಿ ಎಚ್. ಶಂಕರಮೂರ್ತಿ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು ಟಿ ಖಾದರ್ ಪ್ರದರ್ಶನವನ್ನು ಉದ್ಘಾಟನೆ ಮಾಡಿದರು.

ರಥದ ವಿಶೇಷ
125 ಕರಕುಶಲಕರ್ಮಿಗಳು ನಿರಂತರ 58 ದಿನ ಶ್ರಮವಹಿಸಿ 2, 188 ಮರದ ತುಂಡುಗಳನ್ನು ಬಳಕೆ ಮಾಡಿ ರಥ ನಿರ್ಮಿಸಿದ್ದರು.

25 ಸಾವಿರ ವಿದ್ಯಾರ್ಥಿಗಳಿಗೆ ಶಿಕ್ಷಣ
ಕಳಿಂಗ ಇನ್ ಸ್ಟಿಟ್ಯೂಟ್ ಆಫ್ ಸೊಶಿಯಲ್ ಸೈನ್ಸ್ 25 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುತ್ತಾ ಬಂದಿದೆ. ಜತೆಗೆ ಇಂಥಹ ರಚನಾತ್ಮಕ ಕೆಲಸದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದೆ.

ಕ್ರೀಡಾ ಸಾಧಕರು
ಕ್ರೀಡಾ ತರಬೇತಿ ನೀಡುವುದರಲ್ಲೂ ಸಂಸ್ಥೆ ಮುಂದಿದೆ. ಸಂಸ್ಥೆಯಲ್ಲಿ ಅದ್ಯಯನ ಮಾಡಿದ ವಿದ್ಯಾರ್ಥಿಗಳು ಒಲಿಂಪಿಕ್ಸ್ ಗೂ ಆಯ್ಕೆಯಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications