ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು : ಮುಷ್ಕರ ವಾಪಸ್ ಪಡೆದ ಲಾರಿ ಮಾಲೀಕರು

|
Google Oneindia Kannada News

ಬೆಂಗಳೂರು, ಜ.16 : ಬೆಂಗಳೂರು ನಗರದೊಳಗೆ ಬೆಳಗಿನ ಹೊತ್ತು ಲಾರಿಗಳ ಸಂಚಾರಕ್ಕೆ ಅನುಮತಿ ನೀಡುವಂತೆ ಒತ್ತಾಯಿಸಿ ಲಾರಿ ಮಾಲೀಕರ ಸಂಘ ನಡೆಸಬೇಕಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ. ಲಾರಿಗಳ ಸಂಚಾರಕ್ಕೆ ಅನುಮತಿ ನೀಡುವುದಾಗಿ ಪೊಲೀಸರು ಭರವಸೆ ನೀಡಿರುವ ಹಿನ್ನಲೆಯಲ್ಲಿ ಮುಷ್ಕರ ವಾಪಸ್ ಪಡೆಯಲಾಗಿದೆ.

ಬೆಂಗಳೂರಿನಲ್ಲಿ ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್ ಷಣ್ಮುಗಪ್ಪ ಅವರು, ಜನವರಿ 16ರಿಂದ ಲಾರಿ ಮಾಲೀಕರು ಮುಷ್ಕರ ನಡೆಸಲು ತೀರ್ಮಾನಿಸಿದ್ದರು. ಆದರೆ,ಮುಷ್ಕರವನ್ನು ವಾಪಸ್ ಪಡೆಯಲಾಗಿದೆ ಎಂದು ಹೇಳಿದ್ದಾರೆ. [ಜ.16ರಿಂದ ಬೆಂಗಳೂರಿನಲ್ಲಿ ಲಾರಿ ಮುಷ್ಕರ]

Strike

ಶುಕ್ರವಾರ ಹೆಚ್ಚುವರಿ ಪೊಲೀಸ್ ಆಯುಕ್ತರೊಂದಿಗೆ ಲಾರಿ ಮಾಲೀಕರು ಮತ್ತು ಏಜೆಂಟ್ಸ್ ಒಕ್ಕೂಟಗಳ ಸಂಘದ ಪದಾಧಿಕಾರಿಗಳು ನಡೆಸಿದ ಮಾತುಕತೆ ಫಲಪ್ರದವಾಗಿದ್ದು, ನಗರ ಪ್ರದೇಶಿಸಲು ಲಾರಿಗಳಿಗೆ ವಿಧಿಸಿದ್ದ ನಿರ್ಬಂಧವನ್ನು ಸಡಿಲಗೊಳಿಸಲು ಪೊಲೀಸರು ಒಪ್ಪಿಗೆ ನೀಡಿದ್ದಾರೆ. [ಲಾರಿಗಳು ಹಗಲು ಬೆಂಗಳೂರು ಪ್ರವೇಶಿಸುವಂತಿಲ್ಲ]

ಬೆಳಗ್ಗೆ 11 ರಿಂದ ಸಂಜೆ 4ರ ವರೆಗೆ ನಗರ ಪ್ರದೇಶಕ್ಕೆ ಲಾರಿಗಳು ಪ್ರವೇಶಿಸಲು ಅನುಮತಿ ನೀಡುವುದಾಗಿ ಪೊಲೀಸರು ಮಾಲೀಕರಿಗೆ ಭರವಸೆ ನೀಡಿದ್ದಾರೆ. ಆದ್ದರಿಂದ ಇಂದು ಮಧ್ಯರಾತ್ರಿಯಿಂದ ನಡೆಸಬೇಕಿದ್ದ ಮುಷ್ಕರವನ್ನು ವಾಪಸ್ ಪಡೆಯಲಾಗಿದೆ.

ಡಿ.22ರಂದು ಆದೇಶ ಹೊರಡಿಸಿದ್ದ ಬೆಂಗಳೂರು ನಗರ ಪೊಲೀಸರು, ಬೆಳಗ್ಗೆ 6 ರಿಂದ ರಾತ್ರಿ 10 ಗಂಟೆವರೆಗೆ ಮೂರು ಟನ್‌ಗಿಂತ ಹೆಚ್ಚು ಭಾರದ ಸರಕು ಸಾಗಿಸುವ ವಾಹನಗಳ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದರು. ರಾತ್ರಿ 10ರ ನಂತರ ಬೆಳಗ್ಗೆ 6 ಗಂಟೆಯೊಳಗೆ ನಗರದೊಳಗೆ ಲಾರಿಗಳು ಸಂಚರಿಸಬಹುದಾಗಿದೆ ಎಂದು ಹೇಳಿದ್ದರು. ಇದನ್ನು ವಿರೋಧಿಸಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು.

English summary
The strike called by the Karnataka State Lorry Owners and Agents Association From Friday withdrawn after Bengaluru police approved to enter lorry into Bengaluru city from morning 11 to 4 pm.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X